AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಮೂರು ವರ್ಷಗಳಿಂದ ಬಂದ್ ಆಗಿದ್ದ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭ; ಕಾರ್ಮಿಕರ ಮೊಗದಲ್ಲಿ ಮಂದಹಾಸ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಬಂದ್ ಆಗಿದ್ದ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 547 ಕಾರ್ಮಿಕರು, 25,7,60 ಸದಸ್ಯರು, 10 ಸಾವಿರ ಕೃಷಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಎಲ್ಲರೂ ಸಂತಸಪಡುವಂತಾಗಿದೆ.

ಬೀದರ್: ಮೂರು ವರ್ಷಗಳಿಂದ ಬಂದ್ ಆಗಿದ್ದ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭ; ಕಾರ್ಮಿಕರ ಮೊಗದಲ್ಲಿ ಮಂದಹಾಸ
ಸಕ್ಕರೆ ಕಾರ್ಖಾನೆ
TV9 Web
| Edited By: |

Updated on:Dec 12, 2021 | 12:37 PM

Share

ಬೀದರ್: ಮೂರು ವರ್ಷಗಳಿಂದ ಬಂದ್ ಆಗಿದ್ದ ಸಹಕಾರಿ ಸಕ್ಕರೆ ಕಾರ್ಖಾನೆ ಇಂದಿನಿಂದ ಬೀದರ್ ಜಿಲ್ಲೆ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಬಳಿಯಲ್ಲಿ ಪುನಃ ಆರಂಭವಾಗುತ್ತಿದೆ. ಕಳೆದ ಮೂರು ವರ್ಷದಿಂದ ಬಂದ್ ಆಗಿದ್ದ ಬಿಎಸ್​ಎಸ್​ಕೆ (BSSK) ಸಕ್ಕರೆ ಕಾರ್ಖಾನೆ, ಬೀದರ್ ಜಿಲ್ಲೆಯ ಮೊದಲ ಸಹಕಾರಿ ಸಕ್ಕರೆ ಕಾರ್ಖಾನೆ ಆಗಿದ್ದು, 1968 ಆರಂಭವಾಗಿತ್ತು. 2018 ರವರೆಗೆ ಸತತ ಕಬ್ಬು ನುರಿಸಿದ್ದ ಕಾರ್ಖಾನೆ ಮೂರು ವರ್ಷದಿಂದ ಬಂದ್ ಆಗಿತ್ತು. ಆದರೆ ಇಂದಿನಿಂದ ಕ್ರಷಿಂಗ್ ಆರಂಭವಾಗಿದ್ದು, ರೈತರು ಹಾಗೂ ಕಾರ್ಮಿಕರ ಮೊಗದಲ್ಲಿ ಮಂದಹಾಸ ಮೂಡಿದೆ.

ಪ್ರಸಕ್ತ ಹಂಗಾಮಿನ ಕಬ್ಬು ನುರಿಸುವಿಕೆಗೆ ಬಿಎಸ್​ಎಸ್​ಕೆ ಅಧ್ಯಕ್ಷ ಹಾಗೂ ಹುಮ್ನಾಬಾದ್ ಕ್ಷೇತ್ರದ ಮಾಜಿ ಶಾಸಕರು ಸುಭಾಷ್ ಕಲ್ಲೂರು ಚಾಲನೆ ನೀಡಿದ್ದಾರೆ. ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಬಂದ್ ಆಗಿದ್ದ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 547 ಕಾರ್ಮಿಕರು, 25,7,60 ಸದಸ್ಯರು, 10 ಸಾವಿರ ಕೃಷಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ಎಲ್ಲರೂ ಸಂತಸಪಡುವಂತಾಗಿದೆ.

ಕಾರ್ಖಾನೆಯ ಅಧ್ಯಕ್ಷ ಸುಭಾಷ್ ‌ಕಲ್ಲೂರು, ಕೆಎಸ್​ಐಐಡಿಸಿ (KSIIDC) ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಮತ್ತು ಆಡಳಿತ ಮಂಡಳಿಯ ‌ಸದಸ್ಯರು ಸೇರಿಕೊಂಡು 11 ಕೋಟಿ ರೂಪಾಯಿ ಸಾಲ ಪಡೆದು ಮತ್ತೆ ಈಗ ಕಾರ್ಖಾನೆ ಆರಂಭ ಮಾಡಿದ್ದಾರೆ. ಇದರಿಂದಾಗಿ ರೈತರಿಗೆ ಹಾಗೂ ಕಾರ್ಮಿಕರಿಗೆ ಅನುಕೂಲವಾಗಿದೆ.

ಶತಕ ದಾಟಿದ ತರಕಾರಿಗಳ ಬೆಲೆ! ಅಕಾಲಿಕ ಮಳೆಯಿಂದ ರೈತರು ಬೆಳೆದ ಬೆಳೆ ಸಂಪೂರ್ಣ ಜಲಾವೃತವಾಗಿತ್ತು. ಇನ್ನೇನು ಫಸಲು ಕೈಗೆ ಸಿಗಬೇಕು ಅನ್ನುವಷ್ಟರಲ್ಲಿ ನಿರಂತರ ಮಳೆಗೆ ನಾಶವಾಯಿತು. ಸುರಿದ ಮಳೆಯಿಂದ ರೈತರ ಬದುಕು ಸದ್ಯ ಹೀನಾಯವಾಗಿದೆ. ತರಕಾರಿಗಳು ಹೊಲದಲ್ಲೇ ಹಾಳಾಗಿರುವುದರಿಂದ ಹೆಚ್ಚು ಪ್ರಮಾಣದ ತರಕಾರಿ ಮಾರುಕಟ್ಟೆಗೆ ಬರುತ್ತಿಲ್ಲ. ಹೀಗಾಗಿ ದಿನದಿಂದ ದಿನಕ್ಕೆ ತರಕಾರಿಗಳ ಬೆಲೆ ಏರಿಕೆಯಾಗುತ್ತಿದೆ. ತರಕಾರಿ ಬೆಲೆ ಕಂಡು ಖರೀದಿದಾರರು ಕಂಗಾಲಾಗಿದ್ದಾರೆ.

ತರಕಾರಿ ಬೆಲೆ ಕೇಳಿದರೆ ಶಾಕ್ ಆಗುತ್ತೆ. ತರಕಾರಿಗಳ ಬೆಲೆ ಮತ್ತೆ ಶತಕ ದಾಟಿದೆ. ತರಕಾರಿಗಳು ದರ ಏರಿಕೆಯಲ್ಲಿ ಪೈಪೋಟಿ ಬೆಳೆಸಿದೆ. ಅಕಾಲಿಕ ಮಳೆಯಿಂದ ಬೆಲೆ ಡಬಲ್ ಆಗಿದೆ. ಹೊಸದಾಗಿ ತರಕಾರಿ ಬೆಳೆ ರೈತರ ಕೈ ಸೇರುವವರೆಗೂ ರಾಜ್ಯದ ಜನರು ಇದೇ ಸ್ಥಿತಿಯನ್ನು ಎದುರಿಸಬೇಕಾಗಿದೆ. ಕನಿಷ್ಠ 2-3 ತಿಂಗಳು ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ.

ಕುಸಿದಿದ್ದ ಟೊಮ್ಯಾಟೋ ದರ ಸೇರಿ ಇತರೆ ತರಕಾರಿ ಬೆಲೆ ಮತ್ತೆ ಏರಿಕೆಯಾಗಿದೆ. ನುಗ್ಗೆಕಾಯಿ ಪ್ರತಿ ಕೆಜಿಗೆ 350 ರೂ. ಇದೆ. ಮಾರುಕಟ್ಟೆಯಲ್ಲಿ ದರ ಕೇಳಿ ಜನರು ತರಕಾರಿ ಕೊಳ್ಳದೆ ವಾಪಸ್ ಹೋಗುತ್ತಿದ್ದಾರೆ.

ತರಕಾರಿಗಳ ದರ ಹೀಗಿದೆ ಒಂದು ಕೆಜಿ ನುಗ್ಗೆಕಾಯಿಗೆ 200 ರಿಂದ 360 ರೂ. ಇದೆ. ಟೊಮ್ಯಾಟೋ 60 ರಿಂದ 100 ರೂ. ಈರುಳ್ಳಿ 40 ರಿಂದ 50 ರೂ. ಬೆಂಡೆಕಾಯಿ 60 ರಿಂದ 100 ರೂ. ಬೀನ್ಸ್ 60 ರಿಂದ 100 ರೂ. ಕ್ಯಾರೆಟ್ 70 ರಿಂದ 90 ರೂ. ಹೀರೆಕಾಯಿ 50 ರಿಂದ 85 ರೂ. ಬೀಟ್ರೂಟ್ 40 ರಿಂದ 75 ರೂ. ನಮಿಲು ಕೋಸು 40 ರಿಂದ 100 ರೂ. ಬದನೆಕಾಯಿ 30 ರಿಂದ 114 ರೂ.

ಇದನ್ನೂ ಓದಿ: ಓಲಾ ಇಲೆಕ್ಟ್ರಿಕ್ ಸ್ಕೂಟರ್ ಬುಕ್ ಮಾಡಿರುವವರಿಗೆ ಸಿಹಿಸುದ್ದಿ, ವಾಹನಗಳ ಹೋಮ್ ಡೆಲಿವರಿ ಡಿಸೆಂಬರ್ 15ರಿಂದ ಆರಂಭ!

ಬೆಳಗಾವಿ: ಶಿವಸಾಗರ ಸಕ್ಕರೆ ಕಾರ್ಖಾನೆ ಆರಂಭಿಸದಂತೆ ರೈತರು, ಕಾರ್ಖಾನೆ ಮಾಜಿ ನಿರ್ದೇಶಕರ ಪ್ರತಿಭಟನೆ

Published On - 12:30 pm, Sun, 12 December 21

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್