AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಲಖೀಂಪುರ ಖೇರಿ ಬಳಿ ಅಪಘಾತ ಪ್ರಕರಣ; ಮಧ್ಯಾಹ್ನ 3 ಗಂಟೆಗೆ ಬೀದರ್ ತಲುಪಲಿದೆ 8 ಮೃತದೇಹಗಳು

ಬೆಳಗ್ಗೆ 10 ಗಂಟೆಗೆ ಲಖನೌನಿಂದ ವಿಮಾನದಲ್ಲಿ ಮೃತದೇಹಗಳನ್ನ ರವಾನೆ ಮಾಡಲಾಗುತ್ತದೆ. ಬಳಿಕ ಮಧ್ಯಾಹ್ನ 12 ಗಂಟೆಗೆ ವಿಮಾನ ಹೈದರಾಬಾದ್ ತಲುಪುತ್ತದೆ. ನಂತರ ಌಂಬುಲೆನ್ಸ್ ಮೂಲಕ ಮೃತದೇಹಗಳು ಹುಟ್ಟೂರಿಗೆ ಬರಲಿವೆ.

ಉತ್ತರ ಪ್ರದೇಶದ ಲಖೀಂಪುರ ಖೇರಿ ಬಳಿ ಅಪಘಾತ ಪ್ರಕರಣ; ಮಧ್ಯಾಹ್ನ 3 ಗಂಟೆಗೆ ಬೀದರ್ ತಲುಪಲಿದೆ 8 ಮೃತದೇಹಗಳು
ಟಿಟಿ ವಾಹನ ಮತ್ತು ಲಾರಿ ನಡುವೆ ಅಪಘಾತ ನಡೆದಿದೆ
TV9 Web
| Edited By: |

Updated on:May 30, 2022 | 8:38 AM

Share

ಬೀದರ್: ಉತ್ತರ ಪ್ರದೇಶದ (Uttar Pradesh) ಲಖೀಂಪುರ ಖೇರಿ ಬಳಿ ನಿನ್ನೆ (ಮೇ 29) ಸಂಭವಿಸಿದ ಅಪಘಾತದಲ್ಲಿ (Accident) ಒಂದೇ ಕುಟುಂಬದ ಎಂಟು ಜನರು ಮೃತಪಟ್ಟಿದ್ದಾರೆ. 8 ಮೃತದೇಹಗಳನ್ನ ಇಂದು ಬೀದರ್​ಗೆ ತರಲಾಗುತ್ತದೆ. ಮಧ್ಯಾಹ್ನ 3 ಗಂಟೆ ಹೊತ್ತಿಗೆ ಮೃತದೇಹಗಳು ಬೀದರ್ ತಲುಪಲಿವೆ. ಬೆಳಗ್ಗೆ 10 ಗಂಟೆಗೆ ಲಖನೌನಿಂದ ವಿಮಾನದಲ್ಲಿ ಮೃತದೇಹಗಳನ್ನ ರವಾನೆ ಮಾಡಲಾಗುತ್ತದೆ. ಬಳಿಕ ಮಧ್ಯಾಹ್ನ 12 ಗಂಟೆಗೆ ವಿಮಾನ ಹೈದರಾಬಾದ್ ತಲುಪುತ್ತದೆ. ನಂತರ ಆ್ಯಂಬುಲೆನ್ಸ್ ಮೂಲಕ ಮೃತದೇಹಗಳು ಹುಟ್ಟೂರಿಗೆ ಬರಲಿವೆ.

ಅಯೋಧ್ಯೆಗೆ ತೆರಳುತ್ತಿದ್ದಾಗ ಟಿಟಿಗೆ ಟ್ರಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಎಂಟು ಜನರು ಸಾವಿಗೀಡಾಗಿದ್ದಾರೆ. ಶವಗಳನ್ನ ಶವಗಳನ್ನು ಕಳುಹಿಸಿ ಕೊಡಲು ವ್ಯವಸ್ಥೆ ಮಾಡುವಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಪ್ರದೇಶ ಸಿಎಂ ಯೋಗಿಗೆ ಮನವಿ ಮಾಡಿದ್ದರು. ಘಟನೆಯಲ್ಲಿ ಸುಮಾರು 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇನ್ನು 8 ಜನರು ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಕುಮಾರ್(28), ಜಗದಾಂಬಾ(52), ಮನ್ಮಥ(36), ಅನಿಲ್(30) ಸಂತೋಷ(29), ಶಶಿಕಲಾ(38), ಸರಸ್ವತಿ(42) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.

ಇದನ್ನೂ ಓದಿ: Trending: ಲೈಂಗಿಕ ವರ್ಧಕ ಕಾಫಿ ಸೇವಿಸಿದ ವ್ಯಕ್ತಿ ಆಸ್ಪತ್ರೆಗೆ ದಾಖಲು! ಏನಿದು ಕಾಫಿ? ಸೇವನೆಯ ಅಡ್ಡ ಪರಿಣಾಮಗಳು ಇಲ್ಲಿವೆ ನೋಡಿ

ಇದನ್ನೂ ಓದಿ
Image
ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ ಪ್ರಕರಣ: ಪ್ರಿನ್ಸಿಪಾಲ್, ಪಿಎಸ್ಐ ಮತ್ತು ಐವರು ಕಾನ್ಸ್‌ಟೇಬಲ್​ಗಳು ಸೇರಿ 7 ಜನರ ವಿರುದ್ಧ ಎಫ್​ಐಆರ್​ ದಾಖಲು
Image
Trending: ಲೈಂಗಿಕ ವರ್ಧಕ ಕಾಫಿ ಸೇವಿಸಿದ ವ್ಯಕ್ತಿ ಆಸ್ಪತ್ರೆಗೆ ದಾಖಲು! ಏನಿದು ಕಾಫಿ? ಸೇವನೆಯ ಅಡ್ಡ ಪರಿಣಾಮಗಳು ಇಲ್ಲಿವೆ ನೋಡಿ
Image
GT vs RR, IPL 2022 Final: ಫೈನಲ್​ನಲ್ಲಿ ಗೆದ್ದ ತಕ್ಷಣ ಗುಜರಾತ್ ಟೈಟಾನ್ಸ್ ಆಟಗಾರರು ಮಾಡಿದ್ದೇನು ನೋಡಿ
Image
ವಿಮಾನ ಪತನದ ಸ್ಥಳ ಗುರುತಿಸಿದ ನೇಪಾಳ ಸೇನೆ: 22 ಮಂದಿ ಜೀವಂತ ಇರುವುದು ಅನುಮಾನ

ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನೈಸ್ ರಸ್ತೆಯಲ್ಲಿ ನಡೆದಿದೆ. ರಾಮನಗರ ಮೂಲದ ಅಡುಗೆ ಭಟ್ಟ ಶಿವರಾಜ್(40) ಮೃತ ವ್ಯಕ್ತಿ. ಈ ಬಗ್ಗೆ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 8:30 am, Mon, 30 May 22

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು