AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ ಎರಡು ದಿನಗಳಿಂದ ಬೀದರ್​ನಲ್ಲಿ ನಿರಂತರ ಮಳೆ; ಕಷ್ಟ ಪಟ್ಟು ಬೆಳೆದ ಬೆಳೆ ನೀರುಪಾಲು

ಗಡಿ ಜಿಲ್ಲೆ ಬೀದರ್​ನಲ್ಲಿ ಕಳೆದ ಎರಡು ದಿನದಿಂದ ನಿರಂತರ ಮಳೆ ಸುರಿಯುತ್ತಿದೆ. ಈಗ ಸುರಿಯುತ್ತಿರುವ ಮಳೆ ಕೆಲವು ರೈತರಿಗೆ ವರವಾಗಿದ್ದರೆ. ಇನ್ನೂ ಕೆಲವು ರೈತರಿಗೆ ಶಾಪವಾಗಿ ಪರಿಣಮಿಸಿದೆ. ಕಟಾವಿಗೆ ಬಂದಿದ್ದ ಹೆಸರು ಮೊಳಕೆಯೊಡೆಯುವ ಭೀತಿ ರೈತರಿಗೆ ಎದುರಾಗಿದೆ. ಆದರೆ ಉದ್ದು, ಸೋಯಾ ಬೆಳೆ ಬೇಳೆದ ರೈತರಿಗೆ ಮಳೆ ಅವಶ್ಯಕತೆಯಿತ್ತು. ಈಗ ಮೆಳೆ ಸುರಿದಿದ್ದು ಬಾಡುತ್ತಿದ್ದ ಬೆಳೆಗೆ ಜೀವ ಕಳೆ ಬಂದಿದೆ.

ಕಳೆದ ಎರಡು ದಿನಗಳಿಂದ ಬೀದರ್​ನಲ್ಲಿ ನಿರಂತರ ಮಳೆ; ಕಷ್ಟ ಪಟ್ಟು ಬೆಳೆದ ಬೆಳೆ ನೀರುಪಾಲು
ಕಂಗಾಲಾದ ರೈತ
ಸುರೇಶ ನಾಯಕ
| Edited By: |

Updated on: Sep 05, 2023 | 7:18 PM

Share

ಬೀದರ್​, ಸೆ.05: ಎರಡು ದಿನದಿಂದ ಸುರಿದ ಮಳೆಗೆ ಹೆಸರು ಬೆಳೆದ ರೈತರ (Farmer) ಕಂಗಾಲಾಗಿದ್ದಾರೆ. ಹೆಸರು ಕಾಳು ಮೊಳಕೆಯೊಡೆಯುವ ಭೀತಿ ರೈತರನ್ನ ಕಾಡುತ್ತಿದೆ. ಆದರೆ, ಮಳೆಯಾಗದ್ದಕ್ಕೆ ಬಾಡುತ್ತಿದ್ದ ಉದ್ದು, ಸೋಯಾ ಬೆಳೆಗೆ ಜೀವ ಕಳೆ ಬಂದಿದೆ. ಅಕಾಲಿಕವಾಗಿ ಸುರಿದ ಮಳೆಯಿಂದಾಗಿ ಕೆಲವು ರೈತರ ಮೊಗದಲ್ಲಿ ನಗು ಮೂಡಿದ್ದು, ಇನ್ನೂ ಕೆಲವು ರೈತರ ನಗು ಕಸಿದುಕೊಂಡಿದೆ. ಹೌದು, ಬೀದರ್ (Bidar) ಜಿಲ್ಲೆಯ ಭಾಲ್ಕಿ ತಾಲೂಕಿನ ಕೋಸಂ ಗ್ರಾಮದಲ್ಲಿ ಇನ್ನೇರಡು ದಿನದಲ್ಲಿ ಹೆಸರು ಬೆಳೆಯನ್ನು ಕಟಾವು ಮಾಡುಬೇಕು ಎಂದುಕೊಂಡಿದ್ದ ರೈತ ಕಂಗಾಲಾಗಿದ್ದಾನೆ.

ಏಕಾಏಕಿ ಎರಡು ದಿನದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇನ್ನೂ ಎರಡು ದಿನ ಮಳೆಯಾಗುವ ಮೂನ್ಸುಚನೆ ಇದ್ದು, ರೈತನಿಗೆ ದಿಕ್ಕೆ ತೋಚದಂತಾಗಿದೆ. ಬೀದರ್ ಜಿಲ್ಲೆಯ ನಾಲ್ಕು ಲಕ್ಷ ಐವತ್ತು ಸಾವಿರ ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಅದರಲ್ಲಿ 2 ಲಕ್ಷ 75 ಸಾವಿರ ಹೇಕ್ಟರ್ ಪ್ರದೇಶದಲ್ಲಿ ಸೋಯಾಬಿನ್ ಬಿತ್ತನೆಯಾಗಿದ್ದರೆ, ಹೆಸರು 1 ಲಕ್ಷ 25 ಸಾವಿರ ಹೇಕ್ಟರ್ ನಷ್ಟು ಬಿತ್ತನೆಯಾಗಿದೆ. ಇನ್ನು ಹೆಸರು ಬೆಳೆ ಕಟಾವಿಗೆ ಬಂದಿದ್ದು, ಶೇಕಡಾ 10 ರಷ್ಟು ರೈತರು ಹೆಸರು ಬೆಳೆಯನ್ನು ರಾಸಿ ಮಾಡಿದ್ದಾರೆ.

ಇದನ್ನೂ ಓದಿ:ವಿಜಯನಗರ ಜಿಲ್ಲೆಯಲ್ಲಿ ಮಳೆಗೆ 80ಕ್ಕೂ ಹೆಚ್ಚು ಮನೆ ಕುಸಿತ; ನದಿ ಪಾತ್ರದ 22 ಗ್ರಾಮಗಳ ಜನರ ಸ್ಥಳಾಂತರಕ್ಕೆ ಸೂಚನೆ

ಇನ್ನೂ ಶೇಕಡಾ 90 ರಷ್ಟು ರೈತರು ಇನ್ನೊಂದು ವಾರದಲ್ಲಿ ಹೆಸರು ರಾಸಿ ಮಾಡುವವರಿದ್ದರು. ಆದರೆ, ಈಗ ಕಟಾವಿಗೆ ಬಂದಿದ್ದ ಸಮಯದಲ್ಲಿ ಏಕಾಏಕಿ ಮಳೆ ಸುರಿದ ಪರಿಣಾಮದಿಂದ ಹೆಸರು ಬೆಳೆ ನಾಶವಾಗುವ ಭೀತಿ ರೈತರನ್ನ ಕಾಡುತ್ತಿದೆ. ಇನ್ನೇರಡು ದಿನ ಹಾಗೇ ಮಳೆ ಸುರಿದರೆ ಹೆಸರು ಕಾಳು ಮೊಳಕೆಯೊಡೆದು ಬಿತ್ತನೆ ಮಾಡಿದ ಖರ್ಚು ಕೂಡ ಬರುವುದಿಲ್ಲ ಎಂದು ರೈತರು ಅವಲತ್ತುಕೊಳ್ಳುತ್ತಿದ್ದಾರೆ.

ಒಂದು ವಾರ ಸತತ ಮಳೆ; ಕೊಚ್ಚಿಕೊಂಡು ಹೋಗಿದ್ದ ಸೋಯಾ ಬಿನ್​ ಬೆಳೆ

ತಿಂಗಳ ಹಿಂದೆಯೂ ಜಿಲ್ಲೆಯಲ್ಲಿ ಒಂದು ವಾರಸತತವಾಗಿ ಮಳೆಯಾಗಿತ್ತು. ಆ ಸಮಯದಲ್ಲಿ ಉದ್ದು, ಸೋಯಾ ಬಿನ್ ಬೆಳೆ ಸತತ ಮಳೆಯಿಂದಾಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿತ್ತು. ಸತತ ಮಳೆಯಿಂದಾಗಿ ಹೊಲದಲ್ಲಿ ನೀರು ನಿಂತುಕೊಂಡು ಉದ್ದು, ಸೋಯಾ ಬೆಳೆ ಹಳದಿ ಬಣ್ಣಕ್ಕೆ ತಿರುಗಿಕೊಂಡು ಶೇಕಡಾ 20 ರಷ್ಟು ಬೆಳೆ ಆರಂಭದಲ್ಲಿಯೇ ಹಾಳಾಗಿತ್ತು. ನಂತರ ಒಂದು ತಿಂಗಳ ಕಾಲ ಮಳೆ ಸುರಿಯದೆ ಇದ್ದುದ್ದರಿಂದ ಉದ್ದು, ಸೋಯಾ ಬೆಳೇ ಬಾಡಿತ್ತು. ಕೆಲವೂ ರೈತರು ನೀರು ಬಿಟ್ಟು ಬಾಡುತ್ತಿದ್ದ ಉದ್ದು ಸೋಯಾ ಬೆಳೆಯನ್ನು ಕಾಪಾಡಿಕೊಂಡಿದ್ದರು.

ಇದನ್ನೂ ಓದಿ:ಡಿಕೆ ಶಿವಕುಮಾರ್ ಮನಸ್ಥಿತಿಯ ನಾಯಕರಿಂದ ರಾಜ್ಯ ಕಷ್ಟಕ್ಕೆ ಸಿಲುಕಿದೆ; ರೈತ ಮುಖಂಡ ನಂಜುಂಡೇಗೌಡ ವಾಗ್ದಾಳಿ

ಈ ಬಾರಿ ಬೀದರ್ ಜಿಲ್ಲೆಯ ರೈತರ ಸ್ಥಿತಿ ಶೋಚನೀಯವಾಗಿದೆ. ಸೋಯಾ, ಅವರೆ, ಉದ್ದು ಜೋಳ, ಬೆಳೆಗಾರರ ಪರಿಸ್ಥಿತಿ ಸಂಪೂರ್ನವಾಗಿ ಹದೆಗಿಟ್ಟಿದ್ದು, ಮತ್ತೆ ಸಾಲದ ಸುಳಿಯಲ್ಲಿ ಸಿಲುಕುವಂತಹ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಹಲವಾರು ವರ್ಷಗಳಿಂದ ಸೋಯಾ, ಉದ್ದು ಬೆಳೆಯನ್ನೇ ನಂಬಿಕೊಂಡಿದ್ದ ರೈತರಿಗೆ ಬರಸಿಡಿಲಿನಂತೆ ಬಂದ ಮಳೆ, ರೈತರ ಬದುಕನ್ನು ಬರ್ಬಾದ್ ಮಾಡಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?