AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ: ಯಶವಂತಪುರ-ಬೀದರ್ ಮಧ್ಯೆ ವಿಶೇಷ ರೈಲು; ಇಲ್ಲಿದೆ ದಿನಾಂಕ, ಸಮಯ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಜನದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ, ಯಶವಂತಪುರ ಮತ್ತು ಬೀದರ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಅಳವಡಿಸಲಾಗಿದೆ.

ದೀಪಾವಳಿ: ಯಶವಂತಪುರ-ಬೀದರ್ ಮಧ್ಯೆ ವಿಶೇಷ ರೈಲು; ಇಲ್ಲಿದೆ ದಿನಾಂಕ, ಸಮಯ
ರೈಲುImage Credit source: Metro Rail News
ವಿವೇಕ ಬಿರಾದಾರ
|

Updated on: Nov 12, 2023 | 7:09 AM

Share

ಬೆಂಗಳೂರು ನ.12: ದೀಪಾವಳಿ (Deepavali) ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಜನದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ (North Western Railway), ಯಶವಂತಪುರ ಮತ್ತು ಬೀದರ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಅಳವಡಿಸಲಾಗಿದೆ.

ರೈಲು ಸಂಖ್ಯೆ 06507: ಯಶವಂತಪುರ-ಬೀದರ್ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 13 ರಂದು ರಾತ್ರಿ 11:15 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಮಧ್ಯಾಹ್ನ 12:15 ಕ್ಕೆ ಬೀದರ್ ತಲುಪಲಿದೆ. ರೈಲು ಮಾರ್ಗ: ಯಲಹಂಕ, ಗೌರಿಬಿದನೂರು, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಮಂತ್ರಾಲಯ ರಸ್ತೆ, ರಾಯಚೂರು, ಯಾದಗಿರಿ, ವಾಡಿ, ಶಹಾಬಾದ್ ಕಲಬುರಗಿ ಕಮಲಾಪುರ ಮತ್ತು ಹುಮನಾಬಾದ್‌ನಲ್ಲಿ ರೈಲು ನಿಲುಗಡೆಯಾಗಲಿದೆ.

ಇದನ್ನೂ ಓದಿ: ಮಂಗಳೂರು-ಮಂಡ್ಯ ಮಧ್ಯೆ ವಿಶೇಷ ರೈಲು; ಇಲ್ಲಿದೆ ದಿನಾಂಕ, ಸಮಯ

ರೈಲು ಸಂಖ್ಯೆ 06508: ಬೀದರ್-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ನ.14 ರಂದು ಮಧ್ಯಾಹ್ನ 02:30 ಕ್ಕೆ ಬೀದರ್‌ನಿಂದ ಹೊರಟು ಮರುದಿನ ಬೆಳಿಗ್ಗೆ 4 ಗಂಟೆಗೆ ಯಶವಂತಪುರ ತಲುಪಲಿದೆ. ರೈಲು ಮಾರ್ಗ: ಹುಮನಾಬಾದ್, ಕಮಲಾಪುರ, ಕಲಬುರಗಿ, ಶಹಾಬಾದ್, ವಾಡಿ, ಯಾದಗಿರಿ, ರಾಯಚೂರು, ಮಂತ್ರಾಲಯ ರಸ್ತೆ, ಗುಂತಕಲ್, ಅನಂತಪುರ, ಧರ್ಮಾವರಂ, ಹಿಂದೂಪುರ, ಗೌರಿಬಿದನೂರು ಮತ್ತು ಯಲಹಂಕದಲ್ಲಿ ನಿಲ್ಲುತ್ತದೆ.

ರೈಲು 1-ಎಸಿ ಟೂ ಟೈರ್ ಕೋಚ್, 3-ಎಸಿ ತ್ರೀ ಟೈರ್ ಕೋಚ್‌ಗಳು, 6-ಸ್ಲೀಪರ್ ಕ್ಲಾಸ್ ಕೋಚ್‌ಗಳು, 4-ಜನರಲ್ ಸೆಕೆಂಡ್ ಕ್ಲಾಸ್ ಕೋಚ್‌ಗಳು ಮತ್ತು 2-ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್‌ಗಳು ಸೇರಿದಂತೆ 16 ಕೋಚ್‌ಗಳನ್ನು ಒಳಗೊಂಡಿದೆ. ಈ ರೈಲುಗಳಲ್ಲಿ ಲಿನಿನ್ ಮತ್ತು ಬೆಡ್‌ರೋಲ್​ಅನ್ನು ಒದಗಿಸಲಾಗುವುದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?