AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ: ಯಶವಂತಪುರ-ಬೀದರ್ ಮಧ್ಯೆ ವಿಶೇಷ ರೈಲು; ಇಲ್ಲಿದೆ ದಿನಾಂಕ, ಸಮಯ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಜನದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ, ಯಶವಂತಪುರ ಮತ್ತು ಬೀದರ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಅಳವಡಿಸಲಾಗಿದೆ.

ದೀಪಾವಳಿ: ಯಶವಂತಪುರ-ಬೀದರ್ ಮಧ್ಯೆ ವಿಶೇಷ ರೈಲು; ಇಲ್ಲಿದೆ ದಿನಾಂಕ, ಸಮಯ
ರೈಲುImage Credit source: Metro Rail News
ವಿವೇಕ ಬಿರಾದಾರ
|

Updated on: Nov 12, 2023 | 7:09 AM

Share

ಬೆಂಗಳೂರು ನ.12: ದೀಪಾವಳಿ (Deepavali) ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಜನದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ (North Western Railway), ಯಶವಂತಪುರ ಮತ್ತು ಬೀದರ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಈ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಅಳವಡಿಸಲಾಗಿದೆ.

ರೈಲು ಸಂಖ್ಯೆ 06507: ಯಶವಂತಪುರ-ಬೀದರ್ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 13 ರಂದು ರಾತ್ರಿ 11:15 ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಮಧ್ಯಾಹ್ನ 12:15 ಕ್ಕೆ ಬೀದರ್ ತಲುಪಲಿದೆ. ರೈಲು ಮಾರ್ಗ: ಯಲಹಂಕ, ಗೌರಿಬಿದನೂರು, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಮಂತ್ರಾಲಯ ರಸ್ತೆ, ರಾಯಚೂರು, ಯಾದಗಿರಿ, ವಾಡಿ, ಶಹಾಬಾದ್ ಕಲಬುರಗಿ ಕಮಲಾಪುರ ಮತ್ತು ಹುಮನಾಬಾದ್‌ನಲ್ಲಿ ರೈಲು ನಿಲುಗಡೆಯಾಗಲಿದೆ.

ಇದನ್ನೂ ಓದಿ: ಮಂಗಳೂರು-ಮಂಡ್ಯ ಮಧ್ಯೆ ವಿಶೇಷ ರೈಲು; ಇಲ್ಲಿದೆ ದಿನಾಂಕ, ಸಮಯ

ರೈಲು ಸಂಖ್ಯೆ 06508: ಬೀದರ್-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ನ.14 ರಂದು ಮಧ್ಯಾಹ್ನ 02:30 ಕ್ಕೆ ಬೀದರ್‌ನಿಂದ ಹೊರಟು ಮರುದಿನ ಬೆಳಿಗ್ಗೆ 4 ಗಂಟೆಗೆ ಯಶವಂತಪುರ ತಲುಪಲಿದೆ. ರೈಲು ಮಾರ್ಗ: ಹುಮನಾಬಾದ್, ಕಮಲಾಪುರ, ಕಲಬುರಗಿ, ಶಹಾಬಾದ್, ವಾಡಿ, ಯಾದಗಿರಿ, ರಾಯಚೂರು, ಮಂತ್ರಾಲಯ ರಸ್ತೆ, ಗುಂತಕಲ್, ಅನಂತಪುರ, ಧರ್ಮಾವರಂ, ಹಿಂದೂಪುರ, ಗೌರಿಬಿದನೂರು ಮತ್ತು ಯಲಹಂಕದಲ್ಲಿ ನಿಲ್ಲುತ್ತದೆ.

ರೈಲು 1-ಎಸಿ ಟೂ ಟೈರ್ ಕೋಚ್, 3-ಎಸಿ ತ್ರೀ ಟೈರ್ ಕೋಚ್‌ಗಳು, 6-ಸ್ಲೀಪರ್ ಕ್ಲಾಸ್ ಕೋಚ್‌ಗಳು, 4-ಜನರಲ್ ಸೆಕೆಂಡ್ ಕ್ಲಾಸ್ ಕೋಚ್‌ಗಳು ಮತ್ತು 2-ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್‌ಗಳು ಸೇರಿದಂತೆ 16 ಕೋಚ್‌ಗಳನ್ನು ಒಳಗೊಂಡಿದೆ. ಈ ರೈಲುಗಳಲ್ಲಿ ಲಿನಿನ್ ಮತ್ತು ಬೆಡ್‌ರೋಲ್​ಅನ್ನು ಒದಗಿಸಲಾಗುವುದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್