AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ: ಬೆಳೆ ಸಮೀಕ್ಷೆ ಆ್ಯಪ್​ ಬಗ್ಗೆ ರೈತರಿಗೆ ಮಾಹಿತಿ

ಕ್ರಾಪ್ ಸರ್ವೆ ಆ್ಯಪ್​ ಮೂಲಕ ಬೆಳೆ ನೋಂದಣಿ ಮಾಡುವ‌ ವಿಧಾನ, ಬೆಳೆಗಳ ಫೋಟೊ ಅಪಲೋಡ್ ಮಾಡುವ ವಿಧಾನ ಸೇರಿದಂತೆ ಹಲವು ಮಾಹಿತಿಯನ್ನು ಜಿಲ್ಲಾಧಿಕಾರಿ ಪಡೆದುಕೊಂಡರು. ತಹಸೀಲ್ದಾರರು ಬೆಳೆ ಸಮೀಕ್ಷೆ ಬಗ್ಗೆ ಮುತುವರ್ಜಿ ವಹಿಸಬೇಕು ಎಂದು ಸೂಚನೆ ನೀಡಿದರು

ಹಳ್ಳಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ: ಬೆಳೆ ಸಮೀಕ್ಷೆ ಆ್ಯಪ್​ ಬಗ್ಗೆ ರೈತರಿಗೆ ಮಾಹಿತಿ
ಜಿಲ್ಲಾಧಿಕಾರಿಗಳಿಂದ ಬೆಳೆ ಸಮೀಕ್ಷೆ
preethi shettigar
| Edited By: |

Updated on:Jan 21, 2021 | 7:37 PM

Share

ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್ ಜಿಲ್ಲೆಯ ವಿವಿಧ ಭಾಗಕ್ಕೆ ಭೇಟಿ ನೀಡಿ ಬೆಳೆ ಸಮೀಕ್ಷೆ ಮಾಡಿದ್ದು, ಬೆಳೆಯ ಸಾಧಕ ಬಾಧಕದ ಬಗ್ಗೆ ರೈತರಿಂದ ಮಾಹಿತಿ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಬಸವಕಲ್ಯಾಣ ತಾಲೂಕಿನ ಪರತಾಪುರ ಗ್ರಾಮದ ರೈತ ಕರಣ್ ಅವರ ಜಮೀನಿಗೆ ಭೇಟಿ ನೀಡಿ, ಬೆಳೆ ಸಮೀಕ್ಷೆಯ ಬಗ್ಗೆ ಮಾಹಿತಿ ಪಡೆದರು.

ರೈತ ಕರಣ್ ಅವರು ಅಂದಾಜು 5 ಎಕರೆ ಜಮೀನಿನಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆಸಿದ ಬೆಳೆಗಳ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ, ಈ ಬೆಳೆ ಸಮೀಕ್ಷೆ ಪ್ರಕ್ರಿಯೆಗೆ ತಮ್ಮ ಜೊತೆಗೆ ಗ್ರಾಮಕ್ಕೆ ಬಂದಿದ್ದ ಲೆಕ್ಕಾಧಿಕಾರಿಗಳೊಂದಿಗೆ ಚರ್ಚಿಸಿದರು. ಕ್ರಾಪ್ ಸರ್ವೆ ಆ್ಯಪ್​ ಮೂಲಕ ಬೆಳೆ ನೋಂದಣಿ ಮಾಡುವ‌ ವಿಧಾನ, ಬೆಳೆಗಳ ಫೋಟೊ ಅಪಲೋಡ್ ಮಾಡುವ ವಿಧಾನ ಸೇರಿದಂತೆ ಹಲವು ಮಾಹಿತಿಯನ್ನು ಜಿಲ್ಲಾಧಿಕಾರಿ ಪಡೆದುಕೊಂಡರು.

ರೈತ ಕರಣ್ ಅವರ 5 ಎಕರೆ ಜಮೀನಿನಲ್ಲಿ ಇರುವ ಕೊತ್ತಂಬರಿ, ಪುಂಡಿ ಪಲ್ಯ, ಜೋಳ, ಕಡಲೆ ಎಲ್ಲವನ್ನು ಗುರುತಿಸಿ ಬೆಳೆ ಸಮೀಕ್ಷೆ ಆ್ಯಪ್​ನಲ್ಲಿ ನೋಂದಣಿ ಮಾಡುವ ಪ್ರಕ್ರಿಯೆಯನ್ನ ಸಮಗ್ರ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಬೆಳೆ ಸಮೀಕ್ಷೆ ಕಾರ್ಯವನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಿಗರು ಗಮನ ಹರಿಸಬೇಕು ಎಂದು ಸೂಚಿಸಿದರು.

ರೈತರ ಜಮೀನಿನಲ್ಲಿ ಬೆಳೆ ಸಮೀಕ್ಷೆ

ತಹಸೀಲ್ದಾರಗೆ ಸೂಚನೆ: ಈ ಬೆಳೆ ಸಮೀಕ್ಷೆಯು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ತಹಸೀಲ್ದಾರರು ಈ ಬಗ್ಗೆ ಮುತುವರ್ಜಿ ವಹಿಸಿ, ಪ್ರತಿ ಗಂಟೆಗೊಮ್ಮೆ ಪರಿಶೀಲನೆ ನಡೆಸುತ್ತ ನೋಂದಣಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಇದೆ ವೇಳೆಯಲ್ಲಿ ಜಿಲ್ಲಾಧಿಕಾರಿಗಳು ತಹಸೀಲ್ದಾರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬಸವಕಲ್ಯಾಣ ಸಹಾಯಕ ಆಸಕ್ತರಾದ ಭುವನೇಶ ಪಟೇಲ್, ತಹಸೀಲ್ದಾರ ಸಾವಿತ್ರಿ ಸಲಗರ ಉಪಸ್ಥಿತರಿದ್ದರು.

ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಜಾರಿ, ಎಲ್ಲಿ?

Published On - 7:34 pm, Thu, 21 January 21

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ