AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ: ಬೆಳೆ ಸಮೀಕ್ಷೆ ಆ್ಯಪ್​ ಬಗ್ಗೆ ರೈತರಿಗೆ ಮಾಹಿತಿ

ಕ್ರಾಪ್ ಸರ್ವೆ ಆ್ಯಪ್​ ಮೂಲಕ ಬೆಳೆ ನೋಂದಣಿ ಮಾಡುವ‌ ವಿಧಾನ, ಬೆಳೆಗಳ ಫೋಟೊ ಅಪಲೋಡ್ ಮಾಡುವ ವಿಧಾನ ಸೇರಿದಂತೆ ಹಲವು ಮಾಹಿತಿಯನ್ನು ಜಿಲ್ಲಾಧಿಕಾರಿ ಪಡೆದುಕೊಂಡರು. ತಹಸೀಲ್ದಾರರು ಬೆಳೆ ಸಮೀಕ್ಷೆ ಬಗ್ಗೆ ಮುತುವರ್ಜಿ ವಹಿಸಬೇಕು ಎಂದು ಸೂಚನೆ ನೀಡಿದರು

ಹಳ್ಳಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ: ಬೆಳೆ ಸಮೀಕ್ಷೆ ಆ್ಯಪ್​ ಬಗ್ಗೆ ರೈತರಿಗೆ ಮಾಹಿತಿ
ಜಿಲ್ಲಾಧಿಕಾರಿಗಳಿಂದ ಬೆಳೆ ಸಮೀಕ್ಷೆ
preethi shettigar
| Edited By: |

Updated on:Jan 21, 2021 | 7:37 PM

Share

ಬೀದರ್: ಜಿಲ್ಲಾಧಿಕಾರಿ ರಾಮಚಂದ್ರನ್ ಜಿಲ್ಲೆಯ ವಿವಿಧ ಭಾಗಕ್ಕೆ ಭೇಟಿ ನೀಡಿ ಬೆಳೆ ಸಮೀಕ್ಷೆ ಮಾಡಿದ್ದು, ಬೆಳೆಯ ಸಾಧಕ ಬಾಧಕದ ಬಗ್ಗೆ ರೈತರಿಂದ ಮಾಹಿತಿ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಬಸವಕಲ್ಯಾಣ ತಾಲೂಕಿನ ಪರತಾಪುರ ಗ್ರಾಮದ ರೈತ ಕರಣ್ ಅವರ ಜಮೀನಿಗೆ ಭೇಟಿ ನೀಡಿ, ಬೆಳೆ ಸಮೀಕ್ಷೆಯ ಬಗ್ಗೆ ಮಾಹಿತಿ ಪಡೆದರು.

ರೈತ ಕರಣ್ ಅವರು ಅಂದಾಜು 5 ಎಕರೆ ಜಮೀನಿನಲ್ಲಿ ಹಿಂಗಾರು ಹಂಗಾಮಿನಲ್ಲಿ ಬೆಳೆಸಿದ ಬೆಳೆಗಳ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿ, ಈ ಬೆಳೆ ಸಮೀಕ್ಷೆ ಪ್ರಕ್ರಿಯೆಗೆ ತಮ್ಮ ಜೊತೆಗೆ ಗ್ರಾಮಕ್ಕೆ ಬಂದಿದ್ದ ಲೆಕ್ಕಾಧಿಕಾರಿಗಳೊಂದಿಗೆ ಚರ್ಚಿಸಿದರು. ಕ್ರಾಪ್ ಸರ್ವೆ ಆ್ಯಪ್​ ಮೂಲಕ ಬೆಳೆ ನೋಂದಣಿ ಮಾಡುವ‌ ವಿಧಾನ, ಬೆಳೆಗಳ ಫೋಟೊ ಅಪಲೋಡ್ ಮಾಡುವ ವಿಧಾನ ಸೇರಿದಂತೆ ಹಲವು ಮಾಹಿತಿಯನ್ನು ಜಿಲ್ಲಾಧಿಕಾರಿ ಪಡೆದುಕೊಂಡರು.

ರೈತ ಕರಣ್ ಅವರ 5 ಎಕರೆ ಜಮೀನಿನಲ್ಲಿ ಇರುವ ಕೊತ್ತಂಬರಿ, ಪುಂಡಿ ಪಲ್ಯ, ಜೋಳ, ಕಡಲೆ ಎಲ್ಲವನ್ನು ಗುರುತಿಸಿ ಬೆಳೆ ಸಮೀಕ್ಷೆ ಆ್ಯಪ್​ನಲ್ಲಿ ನೋಂದಣಿ ಮಾಡುವ ಪ್ರಕ್ರಿಯೆಯನ್ನ ಸಮಗ್ರ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಬೆಳೆ ಸಮೀಕ್ಷೆ ಕಾರ್ಯವನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಲೆಕ್ಕಿಗರು ಗಮನ ಹರಿಸಬೇಕು ಎಂದು ಸೂಚಿಸಿದರು.

ರೈತರ ಜಮೀನಿನಲ್ಲಿ ಬೆಳೆ ಸಮೀಕ್ಷೆ

ತಹಸೀಲ್ದಾರಗೆ ಸೂಚನೆ: ಈ ಬೆಳೆ ಸಮೀಕ್ಷೆಯು ಜಿಲ್ಲೆಯಲ್ಲಿ ಅಚ್ಚುಕಟ್ಟಾಗಿ ನಡೆಯಬೇಕು. ಈ ನಿಟ್ಟಿನಲ್ಲಿ ತಹಸೀಲ್ದಾರರು ಈ ಬಗ್ಗೆ ಮುತುವರ್ಜಿ ವಹಿಸಿ, ಪ್ರತಿ ಗಂಟೆಗೊಮ್ಮೆ ಪರಿಶೀಲನೆ ನಡೆಸುತ್ತ ನೋಂದಣಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಇದೆ ವೇಳೆಯಲ್ಲಿ ಜಿಲ್ಲಾಧಿಕಾರಿಗಳು ತಹಸೀಲ್ದಾರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಬಸವಕಲ್ಯಾಣ ಸಹಾಯಕ ಆಸಕ್ತರಾದ ಭುವನೇಶ ಪಟೇಲ್, ತಹಸೀಲ್ದಾರ ಸಾವಿತ್ರಿ ಸಲಗರ ಉಪಸ್ಥಿತರಿದ್ದರು.

ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್ ಜಾರಿ, ಎಲ್ಲಿ?

Published On - 7:34 pm, Thu, 21 January 21

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು