AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​​​ನ ಅದೊಂದು ಗ್ರಾಮದಲ್ಲಿ ಭೂಮಿಯಿಂದ ಹೊರಹೊಮ್ಮುತ್ತಿದೆ ವಿಚಿತ್ರ ಶಬ್ಧ

ಬೀದರ್‌ನ ಡಾಕುಳಗಿ ಗ್ರಾಮದಲ್ಲಿ ಭೂಮಿಯಿಂದ ನಿರಂತರವಾಗಿ ವಿಚಿತ್ರ ಶಬ್ದಗಳು ಕೇಳಿಬರುತ್ತಿದ್ದು, ಗ್ರಾಮಸ್ಥರು ತೀವ್ರ ಆತಂಕಗೊಂಡಿದ್ದಾರೆ. ರಾತ್ರಿ ವೇಳೆಯಲ್ಲಿ ಬಾಂಬ್ ಸ್ಫೋಟದಂತಹ ಶಬ್ದಗಳು ಕೇಳಿ, ಭೂಮಿ ಕಂಪಿಸಿದ ಅನುಭವ ಉಂಟಾಗಿದೆ. ಸದ್ಯ ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಬ್ದದ ಮೂಲ ಪತ್ತೆಗೆ ತನಿಖೆ ನಡೆಸಿದ್ದಾರೆ.

ಬೀದರ್​​​ನ ಅದೊಂದು ಗ್ರಾಮದಲ್ಲಿ ಭೂಮಿಯಿಂದ ಹೊರಹೊಮ್ಮುತ್ತಿದೆ ವಿಚಿತ್ರ ಶಬ್ಧ
ಗ್ರಾಮಕ್ಕೆ ಅಧಿಕಾರಿಗಳ ಭೇಟಿImage Credit source: tv9 kannada
ಸುರೇಶ ನಾಯಕ
| Edited By: |

Updated on: Feb 05, 2026 | 9:04 PM

Share

ಬೀದರ್, ಫೆಬ್ರವರಿ 05: ಜಿಲ್ಲೆಯ ಹುಮ್ನಾಬಾದ್ (Humnabad) ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ಭೂಮಿಯಿಂದ ಬರುತ್ತಿದ್ದ ಭಯಂಕರ ಶಬ್ದದಿಂದಾಗಿ (sound) ಜನರು ಆತಂಕಗೊಂಡಿದ್ದಾರೆ. ಬುಧವಾರ ರಾತ್ರಿ ನಾಲ್ಕೈದು ಭಾರೀ ಭೂಮಿ ಒಳಗಡೆಯಿಂದ ಬರುತ್ತಿದ್ದ ಶಬ್ಧದಿಂದಾಗಿ ಜನ ಮನೆಯೊಳಗಿರಲು ಹೆದರುತ್ತಿದ್ದಾರೆ. ರಾತ್ರಿ ಭಯಂಕರ ಶಬ್ದ ಬಂದು ಭೂಮಿ ನಡುಗಿದಂತಾಗಿದ್ದು, ಜನರು ಮನೆಯಿಂದ ಹೊರ ಓಡಿಬಂದಿದ್ದಾರೆ. ಸದ್ಯ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.

ಭೂಮಿಯಿಂದ ವಿಚಿತ್ರ ಶಬ್ಧ

ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಡಾಕುಳಗಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಾಲ್ಕೈದು ಸಲ ಬಾಂಬ್ ಬಿದ್ದ ಹಾಗೆ ಸೌಂಡ್ ಆಗಿದ್ದು, ಗ್ರಾಮಸ್ಥರಿಗೆ ಆತಂಕ ಹೆಚ್ಚಾಗಿದೆ. ದೊಡ್ಡ ಮಟ್ಟದ ಸೌಂಡ್​ ಆಗಿದ್ದರಿಂದ ನಿನ್ನೆ ಇಡೀ ರಾತ್ರಿ ಗ್ರಾಮಸ್ಥರು ನಿದ್ರೆ ಮಾಡದೆ ರಾತ್ರಿ ಇಡೀ  ಜಾಗರಣೆ ಮಾಡಿದ್ದಾರೆ. ಭೂಮಿಯಿಂದ ವಿಚಿತ್ರ ಶಬ್ಧ ಬರುತ್ತಿದೆ. ಈ ರೀತಿಯ ಶಬ್ದ ಭೂಮಿಯಿಂದ ಬಂದಾಗ ಭೂಮಿ ಕಂಪನವಾಗುತ್ತದೆ ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.

ಇದನ್ನೂ ಓದಿ: ಮಾಂಜ್ರಾ ನದಿ ಒಡಲು ಬಗೆಯುತ್ತಿರುವ ದಂಧೆಕೋರರು: ಹಗಲು-ರಾತ್ರಿ ಎನ್ನದೆ ಮರಳು ಮಾಫಿಯಾ

ಇನ್ನು ಈ ವಿಚಾರವನ್ನು ಗ್ರಾಮಸ್ಥರು ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಪಿಡಿಓ, ತಹಶಿಲ್ದಾರ್, ತಾಲೂಕು ಪಂಚಾಯತ್ ಇಓ ಸೇರಿಕೊಂಡು ಗ್ರಾಮಕ್ಕೆ ಬಂದು ಗ್ರಾಮಸ್ಥರಿಂದ ಮಾಹಿತಿ ಪಡೆದಿದ್ದಾರೆ. ಅಧಿಕಾರಿಗಳು ಗ್ರಾಮಕ್ಕೆ ಭೆಟ್ಟಿ ಕೊಟ್ಟಾಗಲೂ ಎರಡು ಸಲ ಭೂಮಿಯಿಂದ ಶಬ್ಧ ಕೇಳಿಬಂದಿದೆ. ಈ ವಿಚಾರವನ್ನು ಜಿಲ್ಲಾಧಿಕಾರಿಗಳಿಗೆ, ಸ್ಥಳೀಯ ಶಾಸಕರ ಗನಮಕ್ಕೆ ಅಧಿಕಾರಿಗಳು ತಂದಿದ್ದಾರೆ.

ಈ ಬಗ್ಗೆ ತಹಶಿಲ್ದಾರ್ ಅಜುಂ ತಬಸುಮ್ ಮಾತನಾಡಿ, ಗ್ರಾಮಸ್ಥರು ಮಾಹಿತಿ ಕೊಟ್ಟ ತಕ್ಷಣ ಗ್ರಾಮಕ್ಕೆ ಭೇಟಿ ಕೊಟ್ಟಿದ್ದೇವೆ. ಭೂಕಂಪನವಾದ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ. ಆದರೆ ಪದೇ ಪದೇ ಭೂಮಿಯಿಂದ ಶಬ್ಧ ಬರುತ್ತಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಭೂಮಿಯಿಂದ ಏಕೆ ಸೌಂಡ್ ಬರುತ್ತಿದೆ ಎಂದು ಪತ್ತೆ ಹಚ್ಚಲು ತನಿಖಾ ತಂಡ ರಚನೆ ಮಾಡುತ್ತೇವೆ. ನೀವು ಯಾವುದೇ ಕಾರಣಕ್ಕೂ ಹೆದರಬೇಡಿ. ಭೂಮಿಯಲ್ಲಿ ನೀರು ಜಾಸ್ತಿಯಾಗಿ ಹೀಗೆ ಶಬ್ಧ ಬರುತ್ತಿದೆ. ಭಯಗೊಳ್ಳುವ ಅವಶ್ಯಕತೆಯಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಬೀದರ್​ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ! ಶಾಲೆಗೆ ತೆರಳುತ್ತಿದ್ದ ಮಕ್ಕಳಿಗೆ ಗಂಭೀರ ಗಾಯ

ಬಾಂಬ್ ಬ್ಲಾಸ್ಟ್ ಆದ ಹಾಗೆ ಭೂಮಿಯ ಒಳಗಡೆಯಿಂದ ಸೌಂಡ್ ಬರುತ್ತಿದೆ. ಜನರು ಹಗಲು-ರಾತ್ರಿ ಮನೆಯಿಂದ ಹೊರಗಿರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ಏನು ಭಯಪಡುವ ಅವ್ಯಶ್ಯಕತೆಯಿಲ್ಲ ಎಂದಿದ್ದಾರೆ. ಆದರು ಕೂಡ ಸೌಂಡ್​​ ಬರುತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ಅಕ್ರಮ ವಲಸಿಗರನ್ನು ರಕ್ಷಿಸಲು ಟಿಎಂಸಿ ಶಕ್ತಿ ಮೀರಿ ಪ್ರಯತ್ನ;ಮೋದಿ ವಾಗ್ದಾಳಿ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ರಾಹುಲ್ ಗಾಂಧಿಯ ದೇಶದ್ರೋಹಿ ಹೇಳಿಕೆಗೆ ಮೋದಿ ಆಕ್ರೋಶ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಲಂಚ ನೀಡಲು ಹಣವಿಲ್ಲದ್ದಕ್ಕೆ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
ಶುಲ್ಕ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಸಿಗರೇಟ್ ಸೇದಿದ್ರೆ ರಜತ್ ದೊಡ್ಡ ಹೀರೋನಾ? ದೂರು ನೀಡಿದ ಕರ್ನಾಟಕ ಸೇನಾ ಪಡೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾರು ಚಾಲಕನ ಮೇಲೆ ಬೈಕ್​​ ಸವಾರನ ದರ್ಪ: ಮಿರರ್​​ ಮುರಿದಿದ್ದಲ್ಲದೆ ನಿಂದನೆ
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!