AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​ನಲ್ಲಿ ಸಿಂಧುತ್ವ ಪ್ರಮಾಣಪತ್ರ ಸಿಗದಿದ್ದಕ್ಕೆ ಚಾಲಕ ಆತ್ಮಹತ್ಯೆ! ತಹಶೀಲ್ದಾರ್ ಕಚೇರಿ ಮುಂದೆ ಶವವಿಟ್ಟು ಸಂಬಂಧಿಕರಿಂದ ಧರಣಿಗೆ ಯತ್ನ

ಮೃತ ಓಂಕಾರ ಶೇರಿಕಾರ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಕುಮಾರ್ ಚಿಂಚೊಳ್ಳಿ ಗ್ರಾಮದವರು. ಈಶಾನ್ಯ ಕರ್ನಾಟಕ ಸಾರಿಕೆ ಸಂಸ್ಥೆಯ ಡ್ರೈವರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಬೀದರ್​ನಲ್ಲಿ ಸಿಂಧುತ್ವ ಪ್ರಮಾಣಪತ್ರ ಸಿಗದಿದ್ದಕ್ಕೆ ಚಾಲಕ ಆತ್ಮಹತ್ಯೆ! ತಹಶೀಲ್ದಾರ್ ಕಚೇರಿ ಮುಂದೆ ಶವವಿಟ್ಟು ಸಂಬಂಧಿಕರಿಂದ ಧರಣಿಗೆ ಯತ್ನ
ಮೃತ ಓಂಕಾರ ಶೇರಿಕಾರ ಸಂಬಂಧಿಕರು ತಹಶೀಲ್ದಾರ್ ಕಚೇರಿ ಮುಂದೆ ಶವವಿಟ್ಟು ಧರಣಿಗೆ ಯತ್ನಿಸಿದರು
TV9 Web
| Edited By: sandhya thejappa|

Updated on:Mar 13, 2022 | 3:25 PM

Share

ಬೀದರ್: ಸಿಂಧುತ್ವ ಪ್ರಮಾಣಪತ್ರ ಸಿಗದ ಹಿನ್ನೆಲೆ ಚಾಲಕ (Driver) ಆತ್ಮಹತ್ಯೆಗೆ ಶರಣಾಗಿದ್ದು, ಹುಮ್ನಾಬಾದ್ ತಹಶೀಲ್ದಾರ್ ಕಚೇರಿ ಮುಂದೆ ಶವವಿಟ್ಟು ಸಂಬಂಧಿಕರು ಧರಣಿ (Protest) ಮಾಡಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನೆ ಮಾಡದಂತೆ ತಡೆದಿದ್ದು, ಅಡ್ಡಿಪಡಿಸಿದ ಪೊಲೀಸರೊಂದಿಗೆ ಮೃತ ವ್ಯಕ್ತಿ ಸಂಬಂಧಿಕರು ವಾಗ್ವಾದ ನಡೆಸಿದ್ದಾರೆ. ಓಂಕಾರ ಶೇರಿಕಾರ ಎಂಬ ಚಾಲಕ ಜಿಲ್ಲೆಯ ವಿವಿಧ ಡಿಪೋ ದಲ್ಲಿ ಹತ್ತು ವರ್ಷ ಸೇವೆಸಲ್ಲಿಸಿದ್ದರು. ನೌಕರಿಗೆ ಸೇರಿದ ಬಳಿಕ ಸಿಂಧುತ್ವ ಪ್ರಮಾಣ ಪತ್ರವನ್ನ ಕೊಡಬೇಕಾಗಿತ್ತು. ಸಿಂಧುತ್ವ ಪ್ರಮಾಣ ಪತ್ರ ಕೊಡುವಂತೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದರಂತೆ. ಮನನೊಂದು ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ಓಂಕಾರ ಶೇರಿಕಾರ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಕುಮಾರ್ ಚಿಂಚೊಳ್ಳಿ ಗ್ರಾಮದವರು. ಈಶಾನ್ಯ ಕರ್ನಾಟಕ ಸಾರಿಕೆ ಸಂಸ್ಥೆಯ ಡ್ರೈವರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ವಸ್ತುಗಳೆಲ್ಲಾ ಸುಟ್ಟು ಭಸ್ಮ: ಕೋಲಾರ: ವಿದ್ಯುತ್ ಲೈನ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ತಗುಲಿ ವಸ್ತುಗಳೆಲ್ಲಾ ಸುಟ್ಟು ಭಸ್ಮವಾಗಿವೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ರಾಮಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಮುನಿಯಪ್ಪ ಎಂಬುವರಿಗೆ ಸೇರಿದ ಮನೆ ಸುಟ್ಟು ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ,. ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ವಸ್ತುಗಳು ಬೆಂಕಿಗಾಹುತಿ ಆಗಿವೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಈ ಘಟನೆ ನಡೆದಿದೆ ಅಂತ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ನಷ್ಟ ಅನುಭವಿಸಿದ ಕುಟುಂಬಸ್ಥರಿಗೆ ಪರಿಹಾರ ನೀಡುವಂತೆ ಆಗ್ರಹಹಿಸಿದ್ದಾರೆ.

ಡೀಸೆಲ್ ಕಳ್ಳನ ಮೇಲೆ ಗುಂಡು ಹಾರಿಸಿದ ಪೊಲೀಸರು: ಡೀಸೆಲ್ ಕಳ್ಳನ ಮೇಲೆ ಬೆಂಗಳೂರಿನ ಜಿಗಣಿ ಠಾಣೆ ಪೊಲೀಸರು ಗುಂಡು ಹಾರಿಸಿದ್ದಾರೆ. ಶ್ರೀನಿವಾಸ್ ಅಲಿಯಾಸ್ ರಾಜು ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಜಿಗಣಿಯ ಡಿಎಲ್‌ಎಫ್ ಬಳಿ ಘಟನೆ ನಡೆದಿದೆ. ಆರೋಪಿ ರಸ್ತೆಬದಿ ನಿಲ್ಲಿಸಿದ್ದ ವಾಹನಗಳಲ್ಲಿ ಡೀಸೆಲ್ ಕದಿಯುತಿದ್ದ. ಆರೋಪಿಗಳನ್ನ ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಈ ವೇಳೆ ಒಬ್ಬ ಆರೋಪಿಗೆ ಪೊಲೀಸರು ಗುಂಡು ಹಾರಿಸಿ, ಇಬ್ಬರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ

ರಾಜಧಾನಿ ಕೀವ್ ರಕ್ಷಣೆಗೆ ಸರ್ವಪ್ರಯತ್ನ: ರಷ್ಯಾ ಮುತ್ತಿಗೆಗೆ ಪ್ರತಿರೋಧ ತೋರಲು ಉಕ್ರೇನ್ ಸಜ್ಜು

ಬಂಗಾಳ ಉಪಚುನಾವಣೆಯಲ್ಲಿ ಟಿಎಂಸಿಯಿಂದ ಸ್ಪರ್ಧಿಸಲಿದ್ದಾರೆ ಶತ್ರುಘ್ನ ಸಿನ್ಹಾ, ಬಾಬುಲ್ ಸುಪ್ರಿಯೋ

Published On - 3:23 pm, Sun, 13 March 22

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ