AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bidar: ಮನ್ನಾಖೇಳಿಯಲ್ಲಿ ಚಾಲಕನ ಬರ್ಬರ ಕೊಲೆ; ಕಾರಣ ನಿಗೂಢ

ಚಾಲಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮನ್ನಾಖೇಳಿ ಗ್ರಾಮದಲ್ಲಿ ನಡೆದಿದೆ. ಚಾಕುವಿನಿಂದ ಇರಿದು, ಕಲ್ಲಿನಿಂದ ತಲೆಗೆ ಜಜ್ಜಿ ಗಣಪತಿ ವಗ್ಗೇರಿ (32) ಎಂಬಾತನನ್ನು ಮರ್ಡರ್​ ಮಾಡಲಾಗಿದ್ದು, ಕೊಂದಿದ್ದು ಯಾರು? ಮತ್ತೆ ಯಾಕೆ? ಎಂಬ ಪ್ರಶ್ನೆ ಇನ್ನೂ ನಿಗೂಢವಾಗಿಯೇ ಉಳಿದಿದೆ.

Bidar: ಮನ್ನಾಖೇಳಿಯಲ್ಲಿ ಚಾಲಕನ ಬರ್ಬರ ಕೊಲೆ; ಕಾರಣ ನಿಗೂಢ
ಗಣಪತಿ ವಗ್ಗೇರಿ
ಸುರೇಶ್ ನಾಯಕ್
| Edited By: |

Updated on: Oct 02, 2025 | 8:39 PM

Share

ಬೀದರ್​, ಅಕ್ಟೋಬರ್​ 02: ಚಾಕುವಿನಿಂದ ಇರಿದು, ಕಲ್ಲಿನಿಂದ ತಲೆಗೆ ಜಜ್ಜಿ ಚಾಲಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೀದರ್ (Bidar) ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮನ್ನಾಖೇಳಿ ಗ್ರಾಮದಲ್ಲಿ ನಡೆದಿದೆ. ಗಣಪತಿ ವಗ್ಗೇರಿ (32) ಕೊಲೆಯಾದ ಯುವಕನಾಗಿದ್ದು, ಮನ್ನಾಖೇಳಿ ಪಟ್ಟಣದ ಜೆಸ್ಕಾ ಕಚೇರಿ ಬಳಿ ಮರ್ಡರ್​ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಯಾರ ಜೊತೆಗೂ ಜಗಳ, ಗಲಾಟೆ ಮಾಡಿಕೊಳ್ಳದೆ ಅವರಿವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಮನೆಮಗನ ಸಾವು​ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಗಣಪತಿಗೆ 9 ವರ್ಷದ ಹಿಂದೆ ಮದುವೆಯಾಗಿದ್ದು, ಪುಟ್ಟಪುಟ್ಟ ಮೂರು ಮಕ್ಕಳಿದ್ದಾರೆ. ಮೊದಲು ಲಾರಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಈತ, ಕಳೆದ ನಾಲ್ಕೈದು ವರ್ಷಗಳಿಂದ ತನ್ನೂರಿನಲ್ಲಿಯೇ ಅವರಿವರ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಚಿಕ್ಕಂದಿನಿಂದಲೂ ಶಾಂತ ಸ್ವಭಾವದವರಾಗಿದ್ದು, ಯಾರ ಜೊತೆಗೂ ಜಗಳವಾಡಿದ ಉದಾಹರಣೆ ಇಲ್ಲ. ತಾನಾಯಿತು ತನ್ನ ಕೆಲಸವಾಯಿತು ಎಂದುಕೊಂಡಿದ್ದ. ಆಸ್ತಿ ಅಂತಾ ಏನು ಇಲ್ಲದಿದ್ದರೂ ನಾಲ್ಕು ಜನ ಅಣ್ಣತಮ್ಮಂದಿರು ಕೂಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದರು ಎಂಬುದು ಸ್ಥಳೀಯರ ಮಾತು.

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಯುವಕನ ಕೊಲೆಯ ಸುದ್ದಿ ತಿಳಿಯುತ್ತಿದಂತೆ ಊರಿಗೆ ಊರೇ ಬೆಚ್ಚಿ ಬಿದ್ದಿದೆ. ಹಬ್ಬದ ಸಡಗರದಲ್ಲಿದ್ದ ಗ್ರಾಮಸ್ಥರಿಗೆ ಈ ವಿಚಾರ ಬರ ಸಿಡಿಲಿನಂತೆ ಅಪ್ಪಳಿಸಿದ್ದು, ಗಣಪತಿಯನ್ನ ಕೊಂದಿದ್ದು ಯಾರು? ಮತ್ತೆ ಯಾಕೆ? ಎಂಬ ಪ್ರಶ್ನೆ ಇನ್ನೂ ನಿಗೂಢವಾಗಿಯೇ ಉಳಿದಿದೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮನ್ನಾಖೇಳಿ ಪೊಲೀಸರು, ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ. ಮನೆಮಗ ನಡು ರಸ್ತೆಯಲ್ಲಿ ಹೆಣವಾಗಿದ್ದು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗಣಪತಿಗೆ ಯಾರೂ ಶತ್ರುಗಳು ಇರಲಿಲ್ಲ. ಹೀಗಿದ್ದರೂ ಆತನನ್ನು ಭೀಕರವಾಗಿ ಕೊಲೆ ಮಾಡಲಾಗಿದ್ದು, ಚಿಕ್ಕ ಚಿಕ್ಕ ಮೂರು ಮಕ್ಕಳು ತಬ್ಬಲಿಗಳಾಗಿದ್ದಾರೆ. ಯಾರು ಕೊಲೆ ಮಾಡಿದ್ದಾರೋ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಗಣಪತಿ ವಗ್ಗೇರಿ ಸಹೋದರ ಭೀಮಶಿ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ