AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bidar: ಮನ್ನಾಖೇಳಿಯಲ್ಲಿ ಚಾಲಕನ ಬರ್ಬರ ಕೊಲೆ; ಕಾರಣ ನಿಗೂಢ

ಚಾಲಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮನ್ನಾಖೇಳಿ ಗ್ರಾಮದಲ್ಲಿ ನಡೆದಿದೆ. ಚಾಕುವಿನಿಂದ ಇರಿದು, ಕಲ್ಲಿನಿಂದ ತಲೆಗೆ ಜಜ್ಜಿ ಗಣಪತಿ ವಗ್ಗೇರಿ (32) ಎಂಬಾತನನ್ನು ಮರ್ಡರ್​ ಮಾಡಲಾಗಿದ್ದು, ಕೊಂದಿದ್ದು ಯಾರು? ಮತ್ತೆ ಯಾಕೆ? ಎಂಬ ಪ್ರಶ್ನೆ ಇನ್ನೂ ನಿಗೂಢವಾಗಿಯೇ ಉಳಿದಿದೆ.

Bidar: ಮನ್ನಾಖೇಳಿಯಲ್ಲಿ ಚಾಲಕನ ಬರ್ಬರ ಕೊಲೆ; ಕಾರಣ ನಿಗೂಢ
ಗಣಪತಿ ವಗ್ಗೇರಿ
ಸುರೇಶ ನಾಯಕ
| Edited By: |

Updated on: Oct 02, 2025 | 8:39 PM

Share

ಬೀದರ್​, ಅಕ್ಟೋಬರ್​ 02: ಚಾಕುವಿನಿಂದ ಇರಿದು, ಕಲ್ಲಿನಿಂದ ತಲೆಗೆ ಜಜ್ಜಿ ಚಾಲಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೀದರ್ (Bidar) ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮನ್ನಾಖೇಳಿ ಗ್ರಾಮದಲ್ಲಿ ನಡೆದಿದೆ. ಗಣಪತಿ ವಗ್ಗೇರಿ (32) ಕೊಲೆಯಾದ ಯುವಕನಾಗಿದ್ದು, ಮನ್ನಾಖೇಳಿ ಪಟ್ಟಣದ ಜೆಸ್ಕಾ ಕಚೇರಿ ಬಳಿ ಮರ್ಡರ್​ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಯಾರ ಜೊತೆಗೂ ಜಗಳ, ಗಲಾಟೆ ಮಾಡಿಕೊಳ್ಳದೆ ಅವರಿವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಮನೆಮಗನ ಸಾವು​ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಗಣಪತಿಗೆ 9 ವರ್ಷದ ಹಿಂದೆ ಮದುವೆಯಾಗಿದ್ದು, ಪುಟ್ಟಪುಟ್ಟ ಮೂರು ಮಕ್ಕಳಿದ್ದಾರೆ. ಮೊದಲು ಲಾರಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಈತ, ಕಳೆದ ನಾಲ್ಕೈದು ವರ್ಷಗಳಿಂದ ತನ್ನೂರಿನಲ್ಲಿಯೇ ಅವರಿವರ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಚಿಕ್ಕಂದಿನಿಂದಲೂ ಶಾಂತ ಸ್ವಭಾವದವರಾಗಿದ್ದು, ಯಾರ ಜೊತೆಗೂ ಜಗಳವಾಡಿದ ಉದಾಹರಣೆ ಇಲ್ಲ. ತಾನಾಯಿತು ತನ್ನ ಕೆಲಸವಾಯಿತು ಎಂದುಕೊಂಡಿದ್ದ. ಆಸ್ತಿ ಅಂತಾ ಏನು ಇಲ್ಲದಿದ್ದರೂ ನಾಲ್ಕು ಜನ ಅಣ್ಣತಮ್ಮಂದಿರು ಕೂಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದರು ಎಂಬುದು ಸ್ಥಳೀಯರ ಮಾತು.

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಯುವಕನ ಕೊಲೆಯ ಸುದ್ದಿ ತಿಳಿಯುತ್ತಿದಂತೆ ಊರಿಗೆ ಊರೇ ಬೆಚ್ಚಿ ಬಿದ್ದಿದೆ. ಹಬ್ಬದ ಸಡಗರದಲ್ಲಿದ್ದ ಗ್ರಾಮಸ್ಥರಿಗೆ ಈ ವಿಚಾರ ಬರ ಸಿಡಿಲಿನಂತೆ ಅಪ್ಪಳಿಸಿದ್ದು, ಗಣಪತಿಯನ್ನ ಕೊಂದಿದ್ದು ಯಾರು? ಮತ್ತೆ ಯಾಕೆ? ಎಂಬ ಪ್ರಶ್ನೆ ಇನ್ನೂ ನಿಗೂಢವಾಗಿಯೇ ಉಳಿದಿದೆ. ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಮನ್ನಾಖೇಳಿ ಪೊಲೀಸರು, ಆರೋಪಿಗಳಿಗಾಗಿ ಶೋಧ ಆರಂಭಿಸಿದ್ದಾರೆ. ಮನೆಮಗ ನಡು ರಸ್ತೆಯಲ್ಲಿ ಹೆಣವಾಗಿದ್ದು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗಣಪತಿಗೆ ಯಾರೂ ಶತ್ರುಗಳು ಇರಲಿಲ್ಲ. ಹೀಗಿದ್ದರೂ ಆತನನ್ನು ಭೀಕರವಾಗಿ ಕೊಲೆ ಮಾಡಲಾಗಿದ್ದು, ಚಿಕ್ಕ ಚಿಕ್ಕ ಮೂರು ಮಕ್ಕಳು ತಬ್ಬಲಿಗಳಾಗಿದ್ದಾರೆ. ಯಾರು ಕೊಲೆ ಮಾಡಿದ್ದಾರೋ ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಗಣಪತಿ ವಗ್ಗೇರಿ ಸಹೋದರ ಭೀಮಶಿ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!