ಬೀದರ್​​​: ಹುಮ್ನಾಬಾದ್​ನಲ್ಲಿ ಭೂಕಂಪನ: 1.9 ರಷ್ಟು ತಿವ್ರತೆ ದಾಖಲು

ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ವಡ್ಡನಕೇರಾ ಮದರಗಾಂವ್ ಗ್ರಾಮದಲ್ಲಿ ಇಂದು ಬೆಳಗಿನ‌ 4:28ರ ಸುಮಾರಿಗೆ ಭೂಕಂಪನ ಉಂಟಾಗಿದ್ದು,ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಘಟಕದಲ್ಲಿ 1.9 ರಷ್ಟು ತಿವ್ರತೆ ದಾಖಲಾಗಿದೆ. ಭೂಕಂಪ ಪ್ರಮಾಣ ಕಡಿಮೆಯಿರುವ ಕಾರಣ ಭಯಗೊಳದಂತೆ ಜಿಲ್ಲಾಧಿಕಾರಿ ಮನವಿ ಮಾಡಿದೆ. 

ಬೀದರ್​​​: ಹುಮ್ನಾಬಾದ್​ನಲ್ಲಿ ಭೂಕಂಪನ: 1.9 ರಷ್ಟು ತಿವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Nov 06, 2023 | 7:09 PM

ಬೀದರ್​, ನವೆಂಬರ್​​​ 06: ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ವಡ್ಡನಕೇರಾ ಮದರಗಾಂವ್ ಗ್ರಾಮದಲ್ಲಿ ಇಂದು ಬೆಳಗಿನ‌ 4:28ರ ಸುಮಾರಿಗೆ ಭೂಕಂಪನ (Earthquake) ಉಂಟಾಗಿದ್ದು,ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಘಟಕದಲ್ಲಿ 1.9 ರಷ್ಟು ತಿವ್ರತೆ ದಾಖಲಾಗಿದೆ. ಭೂಕಂಪ ಪ್ರಮಾಣ ಕಡಿಮೆಯಿರುವ ಕಾರಣ ಭಯಗೊಳದಂತೆ ಜಿಲ್ಲಾಧಿಕಾರಿ ಮನವಿ ಮಾಡಿದೆ. ವಡ್ಡನಕೇರಾ ಗ್ರಾಮದ 1.7 ಕಿಮೀ ಎನ್‌ಎನ್‌ಇ, ಮದರಗಾಂವ್ ಜಿಪಿ, ಹುಮ್ನಾಬಾದ್ ತಾಲೂಕಿನಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆ ಆಗಿದೆ.

ಭೂಕೇಂದ್ರದಿಂದ ಮೇಲಿನ ಭೂಕಂಪಗಳ ಭೂಕಂಪಗಳ ತೀವ್ರತೆಯ ನಕ್ಷೆಯ ಪ್ರಕಾರ, ಗಮನಿಸಲಾದ ತೀವ್ರತೆಯು ತೀರಾ ಕಡಿಮೆಯಾಗಿದೆ. ಭೂಕಂಪನವು ಕೇಂದ್ರಬಿಂದುದಿಂದ 20-25 ಕಿಲೋಮೀಟರ್ ದೂರದವರೆಗೆ ಅನುಭವ ಆಗಿದೆ.

ಇದನ್ನೂ ಓದಿ: ಬೀದರ್: ಶಾರ್ಟ್ ಸರ್ಕ್ಯೂಟ್​ನಿಂದ ಕಬ್ಬಿನ ಗದ್ದೆಗೆ ಬೆಂಕಿ: ಲಕ್ಷಾಂತರ ರೂ. ನಷ್ಟ, ಜೆಸ್ಕಾಂ ಅಧಿಕಾರಿಗಳ ವಿರುದ್ಧ ರೈತ ಆಕ್ರೋಶ

ಈ ರೀತಿಯ ಭೂಕಂಪಗಳು ಸ್ಥಳೀಯ ಸಮುದಾಯಕ್ಕೆ ಯಾವುದೇ ಹಾನಿಯನ್ನು ಉಂಟುಮಾಡುವುದಿಲ್ಲ ಏಕೆಂದರೆ ಗಮನಿಸಿದ ತೀವ್ರತೆಗಳು ತುಂಬಾ ಕಡಿಮೆಯಾಗಿದೆ. ಆದರೂ ಸ್ಥಳೀಯ ಕಂಪನಗಳನ್ನು ಅನುಭವಿಸಬಹುದು. ಭೂಕಂಪನ ವಲಯ II ರಲ್ಲಿ ಅಧಿಕೇಂದ್ರವು ಬೀಳುತ್ತದೆ. ಟೆಕ್ಟೋನಿಕ್ ನಕ್ಷೆಯ ಪ್ರಕಾರ ಈ ಪ್ರದೇಶವು ಯಾವುದೇ ರಚನಾತ್ಮಕ ಸ್ಥಗಿತಗಳಿಂದ ಅನೂರ್ಜಿತವಾಗಿದೆ. ಭೂಕಂಪನದ ಪ್ರಮಾಣ ಮತ್ತು ತೀವ್ರತೆಗಳು ತುಂಬಾ ಕಡಿಮೆ ಇರುವುದರಿಂದ ಭಯಪಡುವ ಅಗತ್ಯವಿಲ್ಲ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಘಟಕ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ: ವರ್ಷಗಳೆ ಉರುಳಿದರು ಆರಂಭವಾಗದ 44.34 ಕೋಟಿ ರೂ. ವೆಚ್ಚದ ಸಿಇಟಿಪಿ ಘಟಕ: ವಿಷಕಾರಿ ನೀರೇ ಕುಡಿಯುತ್ತಿರುವ ಗ್ರಾಮಸ್ಥರು

ವಿಜಯಪುರ ಜಿಲ್ಲೆಯಲ್ಲಿ ಕೆಲ ತಿಂಗಳ ಹಿಂದೆ ಭೂಕಂಪನದ ಅನುಭವವಾಗಿತ್ತು. ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಜು.25ರ ಬೆಳಿಗ್ಗೆ 9:55ಕ್ಕೆ 2.4 ತೀವ್ರತೆಯಲ್ಲಿ ಭೂಮಿ ಕಂಪಿಸಿತ್ತು. ಮನಗೂಳಿ ಪಟ್ಟಣದಿಂದ 2.9 ಕಿ.ಮೀ ದೂರದಲ್ಲಿ ಭೂಕಂಪವಾಗಿತ್ತು.

ಭೂಕಂಪನದ ‘ಸೆಸ್ಮಿಕ್ ಇಂಟೆನ್ಸಿಟಿ ಮ್ಯಾಪ್’ ಪ್ರಕಾರ, ತೀವ್ರತೆಯು ತುಂಬಾ ಕಡಿಮೆ ಇದೆ. ಭೂಮಿಯ 15 ರಿಂದ 20 ಕಿಮೀ ಆಳದಲ್ಲಿ ಕಂಪನವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:16 pm, Mon, 6 November 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ