AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​​ನಲ್ಲಿ ಘೋರ ದುರಂತ: ಒಂದೇ ಕುಟುಂಬ ನಾಲ್ವರು ಆತ್ಮಹತ್ಯೆ, ಕಾರಣವೇನು?

ಒಂದೇ ಕುಟುಂಬ ಆರು ಜನ ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಲ್ವರು ಮಕ್ಕಳ ಸಮೇತ ದಂಪತಿ ತುಂಬಿ ಹರಿಯುತ್ತಿರುವ ಕಾಲುವೆಗೆ ಹಾರಿದ್ದಾರೆ. ಈ ಆರು ಜನರ ಪೈಕಿ ನಾಲ್ವರು ಸಾವನ್ನಪ್ಪಿದ್ದರೆ ಇನ್ನಿಬ್ಬರು ಬದುಕುಳಿದಿದ್ದಾರೆ. ಇನ್ನು ಇಡೀ ಕುಟುಂಬ ಆತ್ಮಹತ್ಯೆಗೆ ಕಾರಣವೇನು? ಎನ್ನುವ ವಿವರ ಇಲ್ಲಿದೆ.

ಬೀದರ್​​ನಲ್ಲಿ ಘೋರ ದುರಂತ: ಒಂದೇ ಕುಟುಂಬ ನಾಲ್ವರು ಆತ್ಮಹತ್ಯೆ, ಕಾರಣವೇನು?
Bidar Suicide
ಸುರೇಶ ನಾಯಕ
| Updated By: ರಮೇಶ್ ಬಿ. ಜವಳಗೇರಾ|

Updated on:Sep 09, 2025 | 7:20 PM

Share

ಬೀದರ್, (ಸೆಪ್ಟೆಂಬರ್ 09): ಕಾಲುವೆಗೆ ಜಿಗಿದು ಒಂದೇ ಕುಟುಂಬದ  (Family) ನಾಲ್ವರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘೋರ ದುರಂತ ಬೀದರ್ (Bidar) ಜಿಲ್ಲೆ ಭಾಲ್ಕಿ ತಾಲೂಕಿನ ಮರೂರು ಬಳಿ ನಡೆದಿದೆ. ನಾಲ್ವರು ಮಕ್ಕಳ ಹಾಗೂ ದಂಪತಿ ಸೇರಿ ಒಟ್ಟು 6 ಜನರು ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. 6 ಜನರ ಪೈಕಿ ನಾಲ್ವರು ಸಾವಪ್ಪಿದ್ದು, ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಬೀದರ್​ ​ಮೈಲೂರಿನ ಶಿವಮೂರ್ತಿ(45), ಶ್ರೀಕಾಂತ್(8), ಹೃತಿಕ್(4), 7 ತಿಂಗಳ ಮಗು ರಾಕೇಶ್ ಮೃತ ದುರ್ವೈವಿಗಳು. ಅದೃಷ್ಟವಶಾತ್ ತಾಯಿ ರಮಾಬಾಯಿ(42) ಹಾಗೂ ಪುತ್ರ ಶ್ರೀಕಾಂತ್(7) ಬದುಕಿಳಿದಿದ್ದಾರೆ.

ಬೀದರ್ ನಗರದ ಮೈಲೂರಿನಲ್ಲಿ ವಾಸ ಮಾಡುತ್ತಿದ್ದ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳಲು ದಂಪತಿ ತಮ್ಮ ನಾಲ್ವರು ಮಕ್ಕಳೊಂದಿಗೆ ಒಂದೇ ಸಾರಿ ಕ್ಯಾನಲ್ ಗೆ ಹಾರಿದ್ದು, ತಂದೆ ಹಾಗೂ ಪುಟ್ಟ ಮಗು ಸಾರಿ ಮೂರು ಮಕ್ಕಳು‌ ನಾಲೆಯಲ್ಲೇ ದಾರುಣವಾಗಿ ಸಾವುಕಂಡಿದ್ದಾರೆ. ಇನ್ನು ತಾಯಿ ಹಾಗೂ ಇನ್ನೊಬ್ಬ ಮಗನನ್ನು ಸ್ಥಳೀಯರು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸಾಲಬಾದೆಗೆ ಮನನೊಂದು ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಧನ್ನೂರು ಪೊಲೀಸರು ಹಾಗೂ  ಸಚಿವ ಈಶ್ವರ್ ಖಂಡ್ರೆ ಭೇಟಿ ಪರಿಶೀಲನೆ ನಡೆಸಿದ್ದು, ಸದ್ಯ ಮೃತದೇಹಗಳನ್ನು ಭಾಲ್ಕಿ ತಾಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

Published On - 7:16 pm, Tue, 9 September 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ