ಬೀದರ್​​ನಲ್ಲಿ ಘೋರ ದುರಂತ: ಒಂದೇ ಕುಟುಂಬ ನಾಲ್ವರು ಆತ್ಮಹತ್ಯೆ, ಕಾರಣವೇನು?

ಒಂದೇ ಕುಟುಂಬ ಆರು ಜನ ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಲ್ವರು ಮಕ್ಕಳ ಸಮೇತ ದಂಪತಿ ತುಂಬಿ ಹರಿಯುತ್ತಿರುವ ಕಾಲುವೆಗೆ ಹಾರಿದ್ದಾರೆ. ಈ ಆರು ಜನರ ಪೈಕಿ ನಾಲ್ವರು ಸಾವನ್ನಪ್ಪಿದ್ದರೆ ಇನ್ನಿಬ್ಬರು ಬದುಕುಳಿದಿದ್ದಾರೆ. ಇನ್ನು ಇಡೀ ಕುಟುಂಬ ಆತ್ಮಹತ್ಯೆಗೆ ಕಾರಣವೇನು? ಎನ್ನುವ ವಿವರ ಇಲ್ಲಿದೆ.

ಬೀದರ್​​ನಲ್ಲಿ ಘೋರ ದುರಂತ: ಒಂದೇ ಕುಟುಂಬ ನಾಲ್ವರು ಆತ್ಮಹತ್ಯೆ, ಕಾರಣವೇನು?
Bidar Suicide
Edited By:

Updated on: Sep 09, 2025 | 7:20 PM

ಬೀದರ್, (ಸೆಪ್ಟೆಂಬರ್ 09): ಕಾಲುವೆಗೆ ಜಿಗಿದು ಒಂದೇ ಕುಟುಂಬದ  (Family) ನಾಲ್ವರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘೋರ ದುರಂತ ಬೀದರ್ (Bidar) ಜಿಲ್ಲೆ ಭಾಲ್ಕಿ ತಾಲೂಕಿನ ಮರೂರು ಬಳಿ ನಡೆದಿದೆ. ನಾಲ್ವರು ಮಕ್ಕಳ ಹಾಗೂ ದಂಪತಿ ಸೇರಿ ಒಟ್ಟು 6 ಜನರು ಕಾರಂಜಾ ಜಲಾಶಯದ ಎಡದಂಡೆ ಕಾಲುವೆಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. 6 ಜನರ ಪೈಕಿ ನಾಲ್ವರು ಸಾವಪ್ಪಿದ್ದು, ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಬೀದರ್​ ​ಮೈಲೂರಿನ ಶಿವಮೂರ್ತಿ(45), ಶ್ರೀಕಾಂತ್(8), ಹೃತಿಕ್(4), 7 ತಿಂಗಳ ಮಗು ರಾಕೇಶ್ ಮೃತ ದುರ್ವೈವಿಗಳು. ಅದೃಷ್ಟವಶಾತ್ ತಾಯಿ ರಮಾಬಾಯಿ(42) ಹಾಗೂ ಪುತ್ರ ಶ್ರೀಕಾಂತ್(7) ಬದುಕಿಳಿದಿದ್ದಾರೆ.

ಬೀದರ್ ನಗರದ ಮೈಲೂರಿನಲ್ಲಿ ವಾಸ ಮಾಡುತ್ತಿದ್ದ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳಲು ದಂಪತಿ ತಮ್ಮ ನಾಲ್ವರು ಮಕ್ಕಳೊಂದಿಗೆ ಒಂದೇ ಸಾರಿ ಕ್ಯಾನಲ್ ಗೆ ಹಾರಿದ್ದು, ತಂದೆ ಹಾಗೂ ಪುಟ್ಟ ಮಗು ಸಾರಿ ಮೂರು ಮಕ್ಕಳು‌ ನಾಲೆಯಲ್ಲೇ ದಾರುಣವಾಗಿ ಸಾವುಕಂಡಿದ್ದಾರೆ. ಇನ್ನು ತಾಯಿ ಹಾಗೂ ಇನ್ನೊಬ್ಬ ಮಗನನ್ನು ಸ್ಥಳೀಯರು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಸಾಲಬಾದೆಗೆ ಮನನೊಂದು ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ಇನ್ನು ಘಟನಾ ಸ್ಥಳಕ್ಕೆ ಧನ್ನೂರು ಪೊಲೀಸರು ಹಾಗೂ  ಸಚಿವ ಈಶ್ವರ್ ಖಂಡ್ರೆ ಭೇಟಿ ಪರಿಶೀಲನೆ ನಡೆಸಿದ್ದು, ಸದ್ಯ ಮೃತದೇಹಗಳನ್ನು ಭಾಲ್ಕಿ ತಾಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

Published On - 7:16 pm, Tue, 9 September 25

ಸುರೇಶ ನಾಯಕ

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us