AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಂಕೆಗಳ ಕಾಟಕ್ಕೆ ಬೀದರ್ ರೈತರು ಹೈರಾಣ; ಬಿತ್ತದ ಬೆಳೆ ಉಳಿಸಿಕೊಳ್ಳಲು ಪರದಾಟ

ಕಾಡು ಪ್ರಾಣಿಗಳ ಕಾಟದಿಂದ ಬೀದರ್​ ಜಿಲ್ಲೆಯ ರೈತರಿಗೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಲಸೋಲ ಮಾಡಿ ಬಿತ್ತದ ಬೆಳೆಯನ್ನ ತಿಂದು ಹಾಕುತ್ತಿದ್ದು, ರೈತರಿಗೆ ದಿಕ್ಕು ತೋಚದಂತಾಗಿದೆ. ಜಿಂಕೆ-ಕೃಷ್ಣಮೃಗಗಳ ಕಾಟದಿಂದ ಬೇಸತ್ತಿರುವ ರೈತರು ತಮ್ಮ ಬೆಳೆಯನ್ನ ಉಳಿಸಿಕೊಳ್ಳಲು ಪಡಬಾರದ ಕಷ್ಟ ಪಡುತ್ತಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಜಿಂಕೆಗಳ ಕಾಟಕ್ಕೆ ಬೀದರ್ ರೈತರು ಹೈರಾಣ; ಬಿತ್ತದ ಬೆಳೆ ಉಳಿಸಿಕೊಳ್ಳಲು ಪರದಾಟ
ಕಾಡು ಪ್ರಾಣಿಗಳ ಕಾಟಕ್ಕೆ ಬೀದರ್ ರೈತರು ಹೈರಾಣ
ಸುರೇಶ ನಾಯಕ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 30, 2024 | 4:31 PM

Share

ಬೀದರ್, ಜೂ.30: ಕಳೆದ ವರ್ಷ ಮಳೆ ಕೊರತೆಯಿಂದಾಗಿ ಬರಗಾಲಕ್ಕೆ ತುತ್ತಾಗಿ ನಾಟೀ ಮಾಡಿದ ಯಾವುದೇ ಬೆಳೆ ರೈತನ (Farmer) ಕೈಗೆ ಬಾರದೆ ನಷ್ಟವನ್ನ ಅನುಭವಿಸಿದ್ದರು. ಈ ವರ್ಷ ಜಿಲ್ಲೆಯಲ್ಲಿ ಉತ್ತಮವಾದ ಮಳೆಯಾಗಿದ್ದು, ರೈತರು ಬಿತ್ತಿದ ಬೆಳೆ ಚೆನ್ನಾಗಿ ಫಸಲು ಬಂದಿದೆ. ಆದರೆ, ಆ ಬೆಳೆಗಳಿಗೆ ಈಗ ಜಿಂಕೆಗಳ ಕಾಟ ಜಾಸ್ತಿಯಾಗಿದ್ದು, ರೈತರು ಬೆಳೆದ ಬೆಳೆಯನ್ನ ಉಳಿಸಿಕೊಳ್ಳಲು ಹಗಲಿರುಳು ಶ್ರಮಿಸಬೇಕಾಗಿದೆ. ಹೌದು, ಬೀದರ್(Bidar) ಜಿಲ್ಲೆಯಲ್ಲಿ ಜಿಂಕೆ ಹಾಗೂ ಕೃಷ್ಣ ಮೃಗಗಳ ಸಂಖ್ಯೆ ಹೆಚ್ಚಾಗಿದೆ. ಒಂದು ಅಂದಾಜಿನ ಪ್ರಕಾರ ಜಿಲ್ಲೆಯಲ್ಲಿ 20 ಸಾವಿರಕ್ಕೂ ಅಧಿಕ ಜಿಂಕೆ-ಕೃಷ್ಣಮೃಗಳಿರಬಹುದೆಂದು ಅರಣ್ಯ ಇಲಾಖೆಯ ಅಧಿಕಾರಿಗಳು ಅಭಿಪ್ರಾಯವಾಗಿದೆ.

ರೈತರ ಪಾಲಿಗೆ ಶಾಪವಾದ ಜಿಂಕೆಗಳು

ಇನ್ನು ಜಿಂಕೆಗಳು ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿವೆ. ಹಿಂಡು ಹಿಂಡಾಗಿ ಹೊಲಗಳಿಗೆ ನುಗ್ಗುವ ಈ ಕಾಡು ಪ್ರಾಣಿಗಳು ಎಕರೆಗಟ್ಟಲೇ ಬೆಳೆಯನ್ನ ತಿಂದು ನಾಶ ಮಾಡಿಹೋಗುತ್ತವೆ. ಆದರೆ, ರೈತರ ಸಮಸ್ಯೆಗೆ ಸ್ಫಂಧಿಸಬೇಕಾದ ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಕಂಡು ಕಾಣದಂತೆ ಕುಳಿತುಬಿಟ್ಟಿದ್ದಾರೆ. ನಮ್ಮ ನೋವನ್ನ ಯಾರಿಗೆ ಹೇಳಬೇಕೆಂದು ಇಲ್ಲಿನ ರೈತರ ಅಳಲಾಗಿದೆ. ಇದರ ಜೊತೆಗೆ ಜಿಂಕೆಯನ್ನ ಹೊಡೆಯಲು ಬಾರದೆ, ಅವುಗಳನ್ನ ಹೆದರಿಸಲು ಬಾರದಂತಹ ಸ್ಥಿತಿ ನಮ್ಮಲ್ಲಿದೆ, ಒಂದು ವೇಳೆ ಏನಾದರೂ ನಾವೂ ಜಿಂಕೆಯನ್ನ ಹೊಡೆದರೆ, ಇಲ್ಲ, ಅದು ಆಕಸ್ಮಿಕವಾಗಿ ಮರಣಹೊಂದಿದರು ಕೂಡ ನಮ್ಮ ಮೇಲೆ ಕೇಸ್ ಹಾಕುವ ಬೆದರಿಕೆಯನ್ನ ಅರಣ್ಯ ಇಲಾಖೆಯವರು ಮಾಡುತ್ತಿದ್ದಾರೆ. ಜೊತೆಗೆ ಜಿಂಕೆಗಳು ನಮ್ಮ ಬೆಳೆಯನ್ನ ತಿಂದರೂ ಪರವಾಗಿಲ್ಲ, ನಮ್ಮ ಬೆಳೆನಾಶವಾದರೇ ಅದಕ್ಕೆ ಅರಣ್ಯ ಇಲಾಖೆಯವರು ಪರಿಹಾರ ಕೊಡಬೇಕು ಎಂದು ಇಲ್ಲಿನ ರೈತರು ಕೇಳಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:ರಾಯಚೂರಿನಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಗೆ ರೈತರು ಹೈರಾಣು: ರಾತ್ರಿ ವಿದ್ಯುತ್ ಸಮಸ್ಯೆ, ಗೃಹಿಣಿಯರು ಮಕ್ಕಳ ಪರದಾಟ

ಸುತ್ತಮುತ್ತಲೂ ಏನಿಲ್ಲವೆಂದರೂ ಒಂದೊಂದು ಗುಂಪಿನಲ್ಲಿ ಐನೂರರಿಂದ ಸಾವಿರದವರೆಗೆ  ಜಿಂಕೆಗಳಿವೆ. ಒಂದು ಜಿಂಕೆಯ ಹಿಂಡು ರೈತನ ಹೊಲಕ್ಕೆ ನುಗ್ಗಿದರೆ ಸಾಕು ಅರ್ಧ ಗಂಟೆಯಲ್ಲಿ ರೈತನ ಬೆಳೆಯನ್ನೆಲ್ಲ ತಿಂದು ಬಿಡುತ್ತವೆ. ಈ ಗ್ರಾಮ ಅಷ್ಟೇ ಅಲ್ಲ, ಬೀದರ್ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿಯೂ ಚಿಂಕೆಗಳ ಕಾಟ ಜಾಸ್ತಿಯಿದ್ದು, ರೈತರ ಬೆಳೆಯನ್ನೇಲ್ಲ ತಿಂದು ನಾಶ ಮಾಡುತ್ತಿದೆ. ಇನ್ನು ಪದೇ ಪದೇ ಬರಗಾಲದಿಂದ ತತ್ತರಿಸಿಹೋಗಿದ್ದ ನಾವು, ಈ ವರ್ಷ ಉತ್ತಮವಾಗಿ ಮಳೆಯಾಗಿದ್ರಿಂದ ಬೆಳೆ ಚನ್ನಾಗಿ ಬಂದಿದೆ. ಆದರೆ, ಜಿಂಕೆಗಳ ಕಾಟ ಜಾಸ್ತಿಯಾಗಿದೆ ಎಂದು ರೈತರು ತಮ್ಮ ಅಸಮಾದಾನ ತೋಡಿಕೊಳ್ಳುತ್ತಿದ್ದಾರೆ.

ಪ್ರತಿದಿನ ಹೊಲಕ್ಕೆ ಹೋದ್ರೆ ಸಾಕು ಜಿಂಕೆಗಳನ್ನ ಓಡಿಸುವುದೆ ಡ್ಯೂಟಿಯಾಗಿ ಪರಿಣಮಿಸಿದೆ. ಹೊಲಕ್ಕೆ ದಾಳಿ ಮಾಡುವ ಜಿಂಕೆಗಳು ಹೊಲದಲ್ಲಿ ಬೆಳೆದಿರುವ ಹೆಸರು, ಉದ್ದನ್ನ ಖಾಲಿ ಮಾಡುತ್ತಿವೆ. ರೈತರು ಇವುಗಳನ್ನ ಹೊಡೆಯಲು ಹೋದರೆ, ಅರಣ್ಯ ಇಲಾಖೆಯ ಅಧೀಕಾರಿಗಳು ಹೆದರಿಸುತ್ತಿದ್ದಾರೆ. ನಾವು ಏನು ಮಾಡಬೇಕು ನೀವೇ ಹೇಳಿ ಎಂದು ಇಲ್ಲಿನ ರೈತರು ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ. ರೈತರು ಸಾಲಸೋಲ ಮಾಡಿ ಬಿತ್ತಿದ್ದ ಬೆಳೆಯನ್ನ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರಕಾರ ಹಾಗೂ ಅರಣ್ಯ ಇಲಾಖೆ ರೈತರ ಸಮಸ್ಯೆಗೆ ಸ್ಫಂದಿಸಿ ರೈತರ ಬೆಳೆಯನ್ನ ಜಿಂಕೆಯಿಂದ ಕಾಪಾಡಿ ಎಂದು ರೈತರು ಸರಕಾರಕ್ಕೆ ವಿನಂತಿಸಿದ್ದಾರೆ.

ಒಟ್ಟಾರೆ ಗಡಿ ಜಿಲ್ಲೆಯ ರೈತರ ಹೊಲದಲ್ಲಿ ಈಗ ಜಿಂಕೆಗಳದ್ದೆ ಕಾರುಬಾರು. ಜಿಂಕೆಯ ತುಂಟಾಟಕ್ಕೆ ರೈತರು ಕಂಗಾಲಾಗಿದ್ದು, ಬೆಳಿಗ್ಗೆಯಿಂದ ಸಂಜೆಯವರೆಗೆ ಹೊಲಕ್ಕೆ ಬಂದು ಹೋಗೋ ಜಿಂಕೆಗಳು ರೈತರ ಬೆಳೆಯ ಬಂಪರ್ ಬೆಲೆಯ ಆಸೆಗೆ ತಣ್ಣೀರೆರಚಿವೆ. ಜಿಲ್ಲೆಯ ರೈತರು ಜಿಂಕೆಯ ಹಾವಳಿ ತಪ್ಪಿಸಿ ಎಂದು ಅರಣ್ಯ ಇಲಾಖೆಯ ಮೊರೆ ಹೋಗುತ್ತಿದ್ದಾರೆ. ಆದರೆ, ಅರಣ್ಯ ಇಲಾಖೆಯ ಅಧಿಕಾರಿಗಳು ಮಾತ್ರ ರೈತರ ಮನವಿಗೆ ಸ್ಫಂಧಿಸುತ್ತಿಲ್ಲ ಎನ್ನುವುದು ಮಾತ್ರ ದುರದುಷ್ಟಕರ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?