AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆದು ಕಾರ್ಖಾನೆಗೆ ಹಾಕಿದ ರೈತರು; ತಿಂಗಳು ಕಳೆದರೂ ಅನ್ನದಾತನ ಕೈ ಸೇರಿಲ್ಲ, ಕಾರ್ಖಾನೆಯಿಂದ ಬರಬೇಕಾದ ಹಣ

ಕಬ್ಬು ಬೆಳೆದು ಖುಷಿಯಿಂದ ಸಕ್ಕರೆ ಕಾರ್ಖಾನೆಗೆ ರೈತರು ಕಬ್ಬು ಹಾಕಿದರು. ಆದರೆ, ರೈತರಿಗೆ ಸಕ್ಕರೆ ಕಾರ್ಖಾನೆಯಿಂದ ಬರಬೇಕಾದ ಹಣ ಮಾತ್ರ ರೈತರ ಕೈ ಸೇರಿಲ್ಲ. ವರ್ಷವಿಡೀ ಕಷ್ಟಪಟ್ಟು ಬೆಳೆದ ಕಬ್ಬನ್ನ ಕಾರ್ಖಾನೆಗೆ ಹಾಕಿದರೇ, ಕಾರ್ಖಾನೆಯ ಮಾಲೀಕರು ಮಾತ್ರ ರೈತರಿಗೆ ಹಣ ಕೊಡದೇ ಸತಾಯಿಸುತ್ತಿದ್ದಾರೆ. ಇದನ್ನ ಪ್ರಶ್ನೀಸಬೇಕಾದ ಅಧಿಕಾರಿಗಳು ಮಾತ್ರ ಕಂಡು ಕಾಣದಂತೆ ಕುಳಿತಿದ್ದು, ರೈತರ ಆಕ್ರೋಶ ಹೆಚ್ಚಿಸುವಂತೆ ಮಾಡಿದೆ.

ಕಬ್ಬು ಬೆಳೆದು ಕಾರ್ಖಾನೆಗೆ ಹಾಕಿದ ರೈತರು; ತಿಂಗಳು ಕಳೆದರೂ ಅನ್ನದಾತನ ಕೈ ಸೇರಿಲ್ಲ, ಕಾರ್ಖಾನೆಯಿಂದ ಬರಬೇಕಾದ ಹಣ
ಬೀದರ್​ ಸಕ್ಕರೆ ಕಾರ್ಖಾನೆ
ಸುರೇಶ ನಾಯಕ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 09, 2023 | 7:35 AM

Share

ಬೀದರ್: ಜಿಲ್ಲೆಯಲ್ಲಿರುವ 2 ಸಕ್ಕರೆ ಕಾರ್ಖಾನೆ(Sugar Factory)ಗಳಿಂದ ಪ್ರಸಕ್ತ ಹಂಗಾಮು ವರ್ಷದಲ್ಲಿ ರೈತರ ಕೈಗೆ ಸೇರಬೇಕಾದ 7.36 ಕೋಟಿ ರೂಪಾಯಿ ಹಣ ಕೈ ಸೇರಿಲ್ಲ. ಕೆಲವೂಂದು ಕಾರ್ಖಾನೆಯ ಮಾಲೀಕರು ಕೆಲವು ರೈತರಿಗೆ ಇಂತಿಷ್ಟೂ ಹಣವನ್ನ ಹಾಕಿ ಸುಮ್ಮನಿದ್ದರೇ, ಇನ್ನೂ ಕೆಲವೂ ರೈತರಿಗೆ ಹಣ ಬಾರದೇ ಇರುವುದರಿಂದ ಸಾಲ ಮಾಡಿಯೇ ಜೀವನ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಸಾಲ ಸೋಲ ಮಾಡಿ ಬೆಳೆದ ಕಬ್ಬನ್ನ ಮಾರಾಟ ಮಾಡಿದರೇ, ಮಾಲೀಕರು ಮಾತ್ರ ಅದರ ಹಣವನ್ನ ರೈತರಿಗೆ ಕೊಡುತ್ತಿಲ್ಲ. ಹೀಗಾಗಿ ರೈತರು ಕಬ್ಬಿನ ಸಾಲ ಮಾಡಿಕೊಂಡು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ.

ಕ್ರಷಿಂಗ್ ಮುಗಿದು ಮೂರುವರೆ ತಿಂಗಳಾದರೂ ಹಣ ಬಾಕಿ ಉಳಿಸಿಕೊಂಡ ಮಾಲೀಕರು

ಇನ್ನು ಬೀದರ್ ತಾಲೂಕಿನ ಮೊಗದಾಳ ಬಳಿಯ ಕಿಸಾನ್ ಸಕ್ಕರೆ ಕಾರ್ಖಾನೆ ಮತ್ತು ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದ ಬಳಿಯ ಭಾಲ್ಕೇಶ್ವರ ಶುಗರ್ಸ್, ಈ ಎರಡು ಸಕ್ಕರೆ ಕಾರ್ಖಾನೆಗಳು ಕ್ರಷಿಂಗ್ ಮುಗಿದು ಮೂರುವರೆ ತಿಂಗಳಾದರೂ ಕೂಡ, ರೈತರಿಗೆ ಕೊಡಬೇಕಾದ ಸುಮಾರು 7.36 ಕೋಟಿಯಷ್ಟು ಹಣವನ್ನ ಭಾಕಿ ಇಟ್ಟುಕೊಂಡಿದೆ. ಇಂದು ಕೊಡುತ್ತೇನೆ, ನಾಳೆ ಕೊಡುತ್ತೇನೆಂದು ರೈತರಿಗೆ ಸುಳ್ಳು ಭರವಸೆಯನ್ನ ಕೊಟ್ಟು ದಿನದೂಡುತ್ತಿವೆ.

ಇದನ್ನೂ ಓದಿ:ವಿಜಯನಗರದಲ್ಲಿ ಹಂಪಿ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಅನುಮೋದನೆ; ಸಚಿವ ಸಂಪುಟದ ಪ್ರಮುಖ ನಿರ್ಧಾರಗಳ ವಿವರ ಇಲ್ಲಿದೆ

ಕಾರ್ಖಾನೆಗೆ ಕಬ್ಬು ಹಾಕಿದ ಎರಡು ವಾರದೊಳಗಡೆ ಹಣ ಪಾವತಿ ನಿಯಮ

ಯಾವುದೇ ಸಕ್ಕರೆ ಕಾರ್ಖಾನೆಗೆ ರೈತರು ಕಬ್ಬು ಹಾಕಿದರೆ, ಎರಡು ವಾರದಲ್ಲಿ ರೈತರಿಗೆ ಕೊಡಬೇಕಾದ ಹಣವನ್ನ ಪಾವತಿ ಮಾಡಬೇಕೆನ್ನುವ ನಿಯಮವಿದೆ. ಆದರೆ, ಮೂರುವರೆ ತಿಂಗಳು ಕಳೆದರೂ ಕೂಡ ರೈತರಿಗೆ ಕೊಡಬೇಕಾದ ಹಣ ಕೊಡುತ್ತಿಲ್ಲ. ಈಗ ರೈತರು ಬಿತ್ತನೆ ಮಾಡುತ್ತಿದ್ದಾರೆ. ಅವರಿಗೆ ಬಿತ್ತನೆ ಬೀಜ ರಸಗೊಬ್ಬರ ಕೊಳ್ಳಲು ಹಣವಿಲ್ಲ. ಹೀಗಾಗಿ ಬೇಗ ರೈತರಿಗೆ ಕೊಡಬೇಕಾದ ಹಣವನ್ನ ಎರಡು ದಿನದಲ್ಲಿ ಕೊಡದೆ ಹೋದರೆ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನ ರೈತರ ಮುಂಖಡರಾದ ದಯಾನಂದ ಸ್ವಾಮಿಯವರು ಕೊಟ್ಟಿದ್ದಾರೆ.

ರೈತರಿಗೆ ಕೊಡಬೇಕಾದ ಬಾಕಿ ಉಳಿಸಿಕೊಂಡ ಕಾರ್ಖಾನೆ

ಪ್ರಸಕ್ತ ಹಂಗಾಮಿನಲ್ಲಿ ಬೀದರ್ ಕಿಸಾನ್ ಸಕ್ಕರೆ ಕಾರ್ಖಾನೆ 6052 ರೈತರಿಂದ 4.32 ಲಕ್ಷ ಟನ್ ಕಬ್ಬು ನುರಿಸಿದ್ದು, ಬರೊಬ್ಬರಿ 121.38 ಕೋಟಿ ರೂಪಾಯಿಯನ್ನ ರೈತರಿಗೆ ಕೊಡಬೇಕಾಗಿತ್ತು. ಇಲ್ಲಿಯವರೆಗೆ 116.71 ಕೋಟಿ ರೂಪಾಯಿ ಹಣವನ್ನ ಪಾವತಿಸಿದ್ದು, 4.66 ಕೋಟಿ ರೂಪಾಯಿಯನ್ನ ಬಾಕಿಯಿಟ್ಟುಕೊಂಡಿದೆ. ಇನ್ನೂ ಭಾಲ್ಕೇಶ್ವರ ಸಕ್ಕರೆ ಕಾರ್ಖಾನೆಯೂ 4299 ರೈತರಿಂದ 3.38 ಲಕ್ಷ ಟನ್ ಕಬ್ಬನ್ನ ನುರಿಸಿದ್ದು, 95.56 ಕೋಟಿ ರೂಪಾಯಿಗಳ ಪೈಕಿ ಇಲ್ಲಿಯವರೆಗೂ 92.85 ಕೋಟಿ ರೂಪಾಯಿಯನ್ನ ರೈತರ ಖಾತೆಗೆ ಜಮೆ ಮಾಡಿದೆ. ಆದರೆ, 2.71 ಕೋಟಿ ರೂಪಾಯಿ ಹಣವನ್ನ ಬಾಕಿ ಉಳಿಸಿಕೊಂಡಿದ್ದು, ರೈತರಿಗೆ ಹಣ ಕೊಡಲು ಸತಾಯಿಸುತ್ತಿದ್ದಾರೆ.

ಇದನ್ನೂ ಓದಿ:ಉತ್ತರ ಕನ್ನಡ: ಇಐಡಿ ಸಕ್ಕರೆ ಕಾರ್ಖಾನೆ ವಿರುದ್ದ 65 ಸಾವಿರ ಟನ್ ಕಬ್ಬನ್ನ ಲೂಟಿ ಮಾಡಿದ ಆರೋಪ; ಲೋಕಾಯುಕ್ತರಿಗೆ ದೂರು ನೀಡಿದ ರೈತರು

ರೈತರ ಬೆನ್ನಿಗೆ ನಿಂತ ಬೀದರ್ ಜಿಲ್ಲಾಧಿಕಾರಿ

ಇನ್ನು ರೈತರ ಬೆನ್ನಿಗೆ ಬೀದರ್ ಜಿಲ್ಲಾಧಿಕಾರಿಗಳು ನಿಂತುಕೊಂಡಿದ್ದು, ಎರಡು ವಾರದೊಳಗಾಗಿ ರೈತರಿಗೆ ಬಾಕಿ ಹಣ ಕೊಡದಿದ್ದರೇ, ತಕ್ಕ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿಯ ಈ ನಡೆಯಿಂದ ರೈತರು ಖುಷಿ ಪಡುತ್ತಿದ್ದಾರೆ. ಇದರ ಜೊತೆಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ರೈತರಿಗೆ ಕಾರ್ಖಾನೆಗಳಿಂದ ಕಬ್ಬನ ಹಣ ಪಡೆದುಕೊಂಡು, ರೈರಿಗೆ ಹಣ ಪಾವತಿಸುವಂತೆ ಒತ್ತಾಡಹಾಕುತ್ತಿದ್ದರೂ ಕೂಡ ಇನ್ನೂ ರೈತರಿಗೆ ಹಣ ಮಾತ್ರ ಸಂದಾಯ ಮಾಡಲು ಕಾರ್ಖಾನೆಯ ಮಾಲೀಕರು ತಯ್ಯಾರಿಲ್ಲ. ಇದು ಸಹಜವಾಗಿಯೇ ರೈತರ ಆಕ್ರೋಶಕ್ಕೆ ಕಾರಣವಾಗಿದ್ದು, ಶೀಘ್ರದಲ್ಲಿ ರೈತರ ಹಣವನ್ನ ಜಿಲ್ಲಾಢಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕಾಳಜಿವಹಿಸಿ ನಮಗೆ ಸೇರಬೇಕಾದ ಹಣವನ್ನ ಕೊಡಿಸಿ ಎಂದು ಮನವಿ ಮಾಡುತ್ತಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More