AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೈಲ ಬೆಲೆ ಏರಿಕೆ ಬಿಸಿ: ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಮರಳಿದ ರೈತರು; ಟ್ರ್ಯಾಕ್ಟರ್ ಬದಲಾಗಿ ಎತ್ತುಗಳಿಂದ ಉಳುಮೆ

ತೈಲ ಬೆಲೆ ಏರಿಕೆ ಕೃಷಿ ಕ್ಷೇತ್ರದ ಮೇಲೂ ಪರಿಣಾಮ ಬೀರಿದೆ. ಡೀಸೆಲ್ ದರ ಏರಿಕೆಯಿಂದ ಟ್ರ್ಯಾಕ್ಟರ್ ಬಾಡಿಗೆ ದುಬಾರಿಯಾಗಿದ್ದು, ರೈತರು ಕೃಷಿ ವೆಚ್ಚ ತಗ್ಗಿಸಲು ಮತ್ತೆ ಎತ್ತುಗಳ ಉಳುಮೆಯತ್ತ ಮುಖ ಮಾಡುತ್ತಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಈ ಬದಲಾವಣೆ ಸ್ಪಷ್ಟವಾಗಿದ್ದು, ಉಳುಮೆ ಎತ್ತುಗಳ ಖರೀದಿ ಜೋರಾಗಿದೆ.

ತೈಲ ಬೆಲೆ ಏರಿಕೆ ಬಿಸಿ: ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಮರಳಿದ ರೈತರು; ಟ್ರ್ಯಾಕ್ಟರ್ ಬದಲಾಗಿ ಎತ್ತುಗಳಿಂದ ಉಳುಮೆ
ಎತ್ತುಗಳಿಂದ ಉಳುಮೆ ಮಾಡುತ್ತಿರುವುದು Image Credit source: tv9 kannada
ಸುರೇಶ್ ನಾಯಕ್
| Edited By: |

Updated on:May 25, 2026 | 4:34 PM

Share

ಬೀದರ್​​, ಮೇ 25: ರಾಜ್ಯದಲ್ಲಿ ತೈಲ ಬೆಲೆ ಏರಿಕೆಯ ಬಿಸಿ (Fuel Price Hike) ಇದೀಗ ನೇರವಾಗಿ ದೇಶದ ಅನ್ನದಾತನಿಗೂ ತಟ್ಟಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದಾಗಿ ಕೃಷಿ ಚಟುವಟಿಕೆಗಳ ವೆಚ್ಚ ಗಗನಕ್ಕೇರಿದ್ದು, ರೈತರು ಕಂಗಾಲಾಗಿದ್ದಾರೆ. ಟ್ರ್ಯಾಕ್ಟರ್ ಬಾಡಿಗೆ ದರ ದುಬಾರಿಯಾದ ಹಿನ್ನೆಲೆಯಲ್ಲಿ, ಬೀದರ್ (bidar) ಜಿಲ್ಲೆಯ ರೈತರು ಮತ್ತೆ ಹಳೆಯ ಸಾಂಪ್ರದಾಯಿಕ ಕೃಷಿ ಪದ್ಧತಿಯತ್ತ ಮುಖ ಮಾಡಿದ್ದಾರೆ. ಟ್ರ್ಯಾಕ್ಟರ್ ಬದಲಿಗೆ ಎತ್ತುಗಳನ್ನು ಖರೀದಿಸಿ ಉಳುಮೆ ಮಾಡಲು ಮುಂದಾಗಿದ್ದು, ಜಾನುವಾರು ಮಾರುಕಟ್ಟೆಯಲ್ಲಿ ಎತ್ತುಗಳ ಖರೀದಿಗೆ ರೈತರು ಮುಗಿಬಿದ್ದಿದ್ದಾರೆ.

ಮುಖ್ಯಾಂಶಗಳು

  • ಬೀದರ್‌ನಲ್ಲಿ ಗಗನಕ್ಕೇರಿದ ಟ್ರ್ಯಾಕ್ಟರ್ ಬಾಡಿಗೆ
  • ಎತ್ತುಗಳ ಖರೀದಿಗೆ ಮುಗಿಬಿದ್ದ ರೈತರು
  • ಎತ್ತುಗಳಿಂದ ಉಳುಮೆಗೆ ಮುಂದಾದ ಅನ್ನದಾತರು

ಕೃಷಿ ಕ್ಷೇತ್ರಕ್ಕೂ ಹೊಡೆದ ನೀಡಿದ ತೈಲ ಬೆಲೆ ಏರಿಕೆ

ರಾಜ್ಯದಲ್ಲಿ ತೈಲ ಬೆಲೆ ಏರಿಕೆಯಾಗಿರುವುದು ಕೃಷಿ ಕ್ಷೇತ್ರದ ಮೇಲೂ ಗಂಭೀರ ಪರಿಣಾಮ ಬೀರಿದೆ. ಬಿತ್ತನೆಗೂ ಮುನ್ನ ಹೊಲ ಹದಗೊಳಿಸಲು ಬಳಸುವ ಟ್ರ್ಯಾಕ್ಟರ್ ಬಾಡಿಗೆ ದರದಲ್ಲಿ ಭಾರೀ ಏರಿಕೆಯಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿಂದೆ ಒಂದು ಎಕರೆ ಹೊಲಕ್ಕೆ ನೇಗಿಲು ಹೊಡೆಯಲು ಎರಡು ಸಾವಿರ ರೂ. ಒಳಗೇ ಟ್ರ್ಯಾಕ್ಟರ್ ಸಿಗುತ್ತಿತ್ತು. ಆದರೆ ಇದೀಗ ಅದೇ ಕೆಲಸಕ್ಕೆ ಎರಡೂವರೆ ಸಾವಿರ ರೂಪಾಯಿವರೆಗೂ ಬಾಡಿಗೆ ವಸೂಲಿ ಮಾಡಲಾಗುತ್ತಿದೆ. ಇದರಿಂದ ಬೇಸತ್ತ ರೈತರು, ಕೃಷಿ ವೆಚ್ಚವನ್ನು ಕಡಿಮೆ ಮಾಡಲು ಮತ್ತೆ ಸಾಂಪ್ರದಾಯಿಕ ಎತ್ತುಗಳ ಉಳುಮೆಯತ್ತ ಒಲವು ತೋರುತ್ತಿದ್ದಾರೆ. ಟ್ರ್ಯಾಕ್ಟರ್ ಬಾಡಿಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ, ಎತ್ತುಗಳನ್ನು ಖರೀದಿಸುವುದೇ ದೀರ್ಘಾವಧಿ ಲಾಭಕ್ಕೆ ಸೂಕ್ತ ಎಂಬ ನಿರ್ಧಾರಕ್ಕೆ ಅನ್ನದಾತರು ಬಂದಿದ್ದಾರೆ.

ಜೋಡೆತ್ತುಗಳಿಗೆ ನಾಲ್ಕು ಲಕ್ಷ ರೂ 

ಇನ್ನು ಬೀದರ್ ಜಿಲ್ಲೆಯ ಔರಾದ್ ಎಪಿಎಂಸಿ ಜಾನುವಾರು ಮಾರುಕಟ್ಟೆಯಲ್ಲಿ ಉಳುಮೆ ಎತ್ತುಗಳ ಖರೀದಿ ಜೋರಾಗಿ ನಡೆಯುತ್ತಿದೆ. ಕೇವಲ ಸ್ಥಳೀಯ ರೈತರು ಮಾತ್ರವಲ್ಲದೆ, ನೆರೆಯ ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದಲೂ ನೂರಾರು ರೈತರು ಇಲ್ಲಿಗೆ ಆಗಮಿಸಿ ಎತ್ತುಗಳನ್ನು ಖರೀದಿಸುತ್ತಿದ್ದಾರೆ.

Bullock

ಎತ್ತುಗಳ ಮಾರಾಟ ಜೋರು

ಪ್ರಸ್ತುತ ಮಾರುಕಟ್ಟೆಯಲ್ಲಿ ಒಂದು ಜೋಡಿ ಉಳುಮೆ ಎತ್ತುಗಳ ಬೆಲೆ ಒಂದೂವರೆ ಲಕ್ಷ ರೂಪಾಯಿಯಿಂದ ಬರೋಬ್ಬರಿ ನಾಲ್ಕು ಲಕ್ಷ ರೂಪಾಯಿವರೆಗೆ ಮಾರಾಟವಾಗುತ್ತಿದೆ. ತೀವ್ರ ಬಿರು ಬಿಸಿಲಿನಿಂದಾಗಿ ಮೇವು ಮತ್ತು ನೀರಿನ ಕೊರತೆ ಎದುರಾಗುತ್ತಿದ್ದರೂ ಸಹ, ಕೃಷಿ ವೆಚ್ಚವನ್ನು ಸರಿದೂಗಿಸಲು ರೈತರು ಎತ್ತುಗಳನ್ನು ಸಾಕಲು ತೀವ್ರ ಆಸಕ್ತಿ ತೋರಿಸುತ್ತಿದ್ದಾರೆ.

ಇದನ್ನೂ ಓದಿ: ದೇಶಕ್ಕೆ ಅನ್ನ ನೀಡುವ ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ

ಸುಮಾರು 15 ವರ್ಷಗಳ ಹಿಂದೆ ಬಹುತೇಕ ರೈತರು ಎತ್ತುಗಳನ್ನೇ ಬಳಸಿ ಕೃಷಿ ಮಾಡುತ್ತಿದ್ದರು. ಆ ಬಳಿಕ ಆಧುನಿಕತೆಗೆ ತೆರೆದುಕೊಂಡು ಯಾಂತ್ರೀಕೃತ ಕೃಷಿಯತ್ತ ಮುಖ ಮಾಡಿದ್ದ ರೈತರು, ಈಗ ತೈಲ ಬೆಲೆ ಏರಿಕೆಯ ಹೊಡೆತಕ್ಕೆ ಸಿಲುಕಿ ಮತ್ತೆ ಸಾಂಪ್ರದಾಯಿಕ ಉಳುಮೆ ಪದ್ಧತಿಗೆ ಮರಳುವಂತಾಗಿದೆ. ಒಟ್ಟಾರೆಯಾಗಿ, ಡೀಸೆಲ್ ಬೆಲೆ ಏರಿಕೆಯ ಪರಿಣಾಮ ಕೃಷಿ ಕ್ಷೇತ್ರದ ಚಿತ್ರಣವನ್ನೇ ಬದಲಿಸುತ್ತಿದ್ದು, ಯಾಂತ್ರೀಕೃತ ಕೃಷಿಯಿಂದ ಸಾಂಪ್ರದಾಯಿಕ ಕೃಷಿಯತ್ತ ಅನ್ನದಾತರು ಮರಳುತ್ತಿರುವುದು ಬೀದರ್ ಜಿಲ್ಲೆಯಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:24 pm, Mon, 25 May 26

Follow Us
ಸುರೇಶ್ ನಾಯಕ್
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ