AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು, ಉದ್ದು, ಸೋಯಾ ಕೃಷಿಗೆ ಗುಡ್​ ಬೈ;ಈರುಳ್ಳಿ ಬೀಜ ಉತ್ಪಾದಿಸಿ ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿರೋ ರೈತ

ಕಬ್ಬು, ಉದ್ದು, ಸೋಯಾ ಹೆಸರು ಬೆಳೆದು ನಷ್ಟ ಅನುಭವಿಸುತ್ತಿದ್ದ ರೈತನೀಗ, ಅದಕ್ಕೆ ಗುಡ್ ಬೈ ಹೇಳಿದ್ದಾನೆ. ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಕೊಡುವ ಈರುಳ್ಳಿ ಬೀಜ ಉತ್ಪಾದನೆ ಮಾಡುವುದರ ಮೂಲಕ ವರ್ಷಕ್ಕೆ ಲಕ್ಷಾಂತರ ಹಣ ಗಳಿಸುತ್ತಿದ್ದಾನೆ. ಬೀಜ ತಯಾರಿಕೆ ಕಂಪನಿಯ ಜೊತೆಗೆ ಒಪ್ಪಂದ ಮಾಡಿಕೊಂಡು ಈತ ಬೆಳೆಸಿದ ಬೀಜವನ್ನ ಅಲ್ಲಿಯೇ ಮಾರಾಟ ಮಾಡಿ ಲಾಭ ಉತ್ತಮ ಆದಾಯ ಗಳಿಸುತ್ತಿದ್ದಾನೆ.

ಕಬ್ಬು, ಉದ್ದು, ಸೋಯಾ ಕೃಷಿಗೆ ಗುಡ್​ ಬೈ;ಈರುಳ್ಳಿ ಬೀಜ ಉತ್ಪಾದಿಸಿ ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿರೋ ರೈತ
ಈರುಳ್ಳಿ ಬೀಜ ಉತ್ಪಾದನೆ ಮಾಡುತ್ತಿರುವ ಬೀದರ್​ ರೈತ ದೀಲಿಪ್ ಕುಮಾರ್ ನೇಮಿನಾಥ್ ಕಿವುಡೆ
ಸುರೇಶ ನಾಯಕ
| Edited By: |

Updated on: Mar 17, 2024 | 3:16 PM

Share

ಬೀದರ್​, ಮಾ.17: ಈರುಳ್ಳಿ ಬೀಜ ಮಾರಾಟ ಮಾಡಿ ವರ್ಷಕ್ಕೆ ಲಕ್ಷ ಲಕ್ಷ ಆದಾಯ ಗಳಿಸುತ್ತಿದ್ದಾರೆ. ಈ ಪ್ರಗತಿಪರ ರೈತನ ಕೃಷಿಯ ಚಾಣಾಕ್ಷತನಕ್ಕೆ ಅಧಿಕಾರಿಗಳು, ರೈತರು ಫಿದಾ ಆಗಿದ್ದಾರೆ. ಈರುಳ್ಳಿ ಬೆಳೆದರೆ ಸಿಗುವ ಲಾಭಕಿಂತ ಈರುಳ್ಳಿ ಬೀಜ(onion seed) ಉತ್ಪಾದನೆ ಹೆಚ್ಚು ಲಾಭದಾಯಕ ಕೃಷಿಯಾಗಿದೆ. ಹೀಗಾಗಿ ಇದರ ಲಾಭವನ್ನ ಕಂಡುಕೊಂಡ ಬೀದರ್(Bidar) ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಗ್ರಾಮದ ರೈತ ದೀಲಿಪ್ ಕುಮಾರ್ ನೇಮಿನಾಥ್ ಕಿವುಡೆ ಅವರು ತಮ್ಮ 40 ಎಕರೆಯಷ್ಟು ಜಮೀನಿನಲ್ಲಿ ಈರುಳ್ಳಿ ಬೀಜೋತ್ಪಾಧನೆಯಲ್ಲಿ ತೊಡಗಿಕೊಂಡಿದ್ದು, 6 ತಿಂಗಳಿಗೆ ಒಂದು ಕೋಟಿಗೂ ಅಧಿಕ ಲಾಭವನ್ನ ಗಳಿಸುತ್ತಿದ್ದಾರೆ.

ಇನ್ನು ಇವರು ಯಾವುದೇ ಬೀಜೋತ್ಪಾಧನೆ ಕಂಪನಿಯ ಜೊತೆಗೆ ಒಪ್ಪಂದ ಮಾಡಿಕೊಂಡಿಲ್ಲ. ಇವರು ತಯ್ಯಾರಿಸಿದ ಇರುಳ್ಳಿ ಬೀಜವನ್ನ ನೇರವಾಗಿ ರೈತರಿಗೆ ಕೊಡುವುದರಿಂದಾಗಿ ಇವರಿಗೆ ಯಾವುದೆ ಮಾರುಕಟ್ಟೆಯಲ್ಲಿ ದರ ಏರಿಳಿತವಾದರೂ ಕೂಡ ಇವರಿಗೆ ಅಷ್ಟೇನು ನಷ್ಟವಾಗುವುದಿಲ್ಲ. ಇವರು ಉತ್ತಮ ಗುಣಮಟ್ಟದ ಇರುಳ್ಳಿ ಬೀಜವನ್ನ ತಯ್ಯಾರಿಸಿ ಮಾರಾಟ ಮಾಡುವುದರಿಂದಾಗಿ ಇವರು ಉತ್ಪಾಧಿಸುವ ಈರುಳ್ಳಿ ಬೀಜಕ್ಕೆ ಬಾರೀ ಬೇಡಿಕೆಯಿದೆ. ಅತೀ ಹೆಚ್ಚಾಗಿ ಇರುಳ್ಳಿ ಬೆಳೆಸುವ ಬಾಗಲಕೋಟೆ, ವಿಜಯಪುರ, ಬೆಳೆಗಾವಿ ಗದಗ ಜಿಲ್ಲೆಗೆ ಹೋಗಿ ತಾವೇ ನೇರವಾಗಿ ರೈತರಿಗೆ ಬೀಜವನ್ನ ಮಾರಾಟ ಮಾಡುತ್ತಿದ್ದಾರೆ. ಹೀಗಾಗಿ ನಮಗೆ ಹೆಚ್ಚಿನ ಲಾಭವಿದೆ ಎಂದು ರೈತ ದೀಲಿಪ್ ಕುಮಾರ್ ನೇಮಿನಾಥ್ ಕಿವುಡೆ ಹೇಳುತ್ತಿದ್ದಾರೆ.

ಇದನ್ನೂ ಓದಿ:Onion Price: ಈರುಳ್ಳಿ ಬೆಲೆ ಈಗ ಕುಸಿತ; ಆದರೆ ಮಾರ್ಚ್​ನಲ್ಲಿ ಕಣ್ಣೀರು ಬರಿಸಲಿದೆಯಂತೆ ಬೆಲೆ ಏರಿಕೆ

ಈ ರೈತ ದೀಲಿಪ್ ಕುಮಾರ್ ಅವರು ಹದಿನೈದು ವರ್ಷದ ಹಿಂದೆ ತಮ್ಮ ಹೊಲದಲ್ಲಿ ಕಬ್ಬು, ಸೋಯಾ, ಉದ್ದು ಹೆಸರು ಬೆಳೆಗೆ ಮಾತ್ರ ಸಿಮೀತವಾಗಿದ್ದರು. ಆದರೆ, ಅದರಲ್ಲಿ ಅಷ್ಟೇನು ಲಾಭ ಈ ರೈತನಿಗೆ ಆಗಿಲ್ಲ. ಕಬ್ಬು ಬೆಳೆಯಿಂದಲೂ ಕೂಡ ಇವರಿಗೆ ಲಾಭ ಅಷ್ಟಕಷ್ಟೆ, ಹೀಗಾಗಿ ಈ ಬೆಳೆಗಳಿಗೆ ಗುಡ್ ಬೈ ಹೇಳಿ ಕೃಷಿಯಲ್ಲಿ ಏನಾದರೂ ಹೊಸದನ್ನ ಮಾಡಬೇಕು ಅಂದುಕೊಂಡು ಈರುಳ್ಳಿ ಬೀಜೋತ್ಪಾಧನೆ ಮಾಡಿದರೆ ಹೇಗೆ ಎಂದು ಯೋಚನೆ ಮಾಡಿ, ಒಂದು ವರ್ಷ ಹತ್ತು ಎಕರೆಯಷ್ಟು ಪ್ರದೇಶದಲ್ಲಿ ಇರುಳ್ಳಿ ಬೀಜೋತ್ಪಾಧನೆ ಮಾಡಿ, ಕಿಂಟಾಲ್ ಗೆ 20 ಸಾವಿರ ರೂಪಾಯಿಯಂತೆ ಮಾರಾಟ ಮಾಡಿದ್ದಾರೆ.

ಅದರಲ್ಲಿ ಭರ್ಜರಿ ಲಾಭ ಕಂಡು ಕೊಂಡ ಇವರು, ಉತ್ತಮ ಗುಣಮಟ್ಟದ ಬೀಜವನ್ನ ನೋಡಿದ ರೈತರು ಇವರಿಂದ ಹೆಚ್ಚು ಹೆಚ್ಚಾಗಿ ಇರಳ್ಳಿ ಬೀಜವನ್ನ ಖರೀಧಿಸಲು ಶುರುಮಾಡಿದರೂ ಹತ್ತು ಎಕರೆಯಿಂದ ಆರಂಭಿಸಿ ಈಗ 40 ಎಕರೆಯಷ್ಟು ಇರುಳ್ಳಿ ಬೀಜವನ್ನ ಬೆಳೆಸುತ್ತಿದ್ದಾರೆ. ಇನ್ನು ವರ್ಷಕ್ಕೆ ಕನಿಷ್ಟವೆಂದರೂ ಇನ್ನೂರು ಕ್ಷಿಂಟಾಲ್​ವರೆಗೆ ಈರುಳ್ಳಿ ಬೀಜವನ್ನ ಮಾರಾಟ ಮಾಡುತ್ತಿದ್ದಾರೆ. ಎಲ್ಲಾ ಖರ್ಚು ತೆಗೆದರೂ ಕೂಡ ಇವರಿಗೆ ವರ್ಷಕ್ಕೆ 50 ರಿಂದ 60 ಲಕ್ಷ ರೂಪಾಯಿಯಷ್ಟು ಲಾಭವಾಗುತ್ತಿದೆ ಎಂದು ರೈತ ಹೇಳುತ್ತಿದ್ದಾರೆ.

ಇದನ್ನೂ ಓದಿ:Raw Onion: ಹಸಿ ಈರುಳ್ಳಿ ತಿನ್ನುವುದರಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳಿವು

ಒಟ್ಟಿನಲ್ಲಿ ರೈತ ದೀಲಿಪ್ ಕುಮಾರ್ ಈರುಳ್ಳಿ ಬೀಜೋತ್ಪಾಧನೆ ಕೃಷಿಯಲ್ಲಿ ಯಶಸ್ಸು ಕಂಡಿದ್ದಾರೆ. ಎಲ್ಲ ರೈತರು ಪ್ರಯೋಗಾತ್ಮಕ ಕೃಷಿ, ಬೆಳೆ ಬೆಳೆಯಲು ಅನುಕೂಲ ಮಾಡಿಕೊಳಬೇಕು. ತೋಟಗಾರಿಕೆ ಇಲಾಖೆಯ ಸಹಾಯ ಪಡೆದು ಉತ್ತಮ ಆದಾಯ ಗಳಿಸೋ ತೋಟಗಾರಿಕೆ ಬೆಳೆ ಬೆಳೆಯಲು ಎಲ್ಲ ರೈತರು ಯಶಸ್ಸು ಆಗಬೇಕು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್