AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Sankalp Yatra: ಅಮಿತ್​ ಶಾ ರಾಜ್ಯ ಪ್ರವಾಸ: ಬೀದರನ ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ ರಥ ಯಾತ್ರಗೆ ಚಾಲನೆ

ಇಂದು ಮತ್ತು ನಾಳೆ (ಮಾರ್ಚ್​ 3, 4) ಕೇಂದ್ರ ಗೃಹ ಸಚಿವ ಅಮಿತ್​ ಶಾ ಬೀದರ್, ಬೆಂಗಳೂರು​ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬಸವಕಲ್ಯಾಣದಿಂದ ಪ್ರಾರಂಭವಾಗುವ ವಿಜಯ ಸಂಕಲ್ಪ ರಥ ಯಾತ್ರಗೆ ಚಾಲನೆ ನೀಡಲಿದ್ದಾರೆ.

Vijay Sankalp Yatra: ಅಮಿತ್​ ಶಾ ರಾಜ್ಯ ಪ್ರವಾಸ: ಬೀದರನ ಬಸವಕಲ್ಯಾಣದಲ್ಲಿ ವಿಜಯ ಸಂಕಲ್ಪ ರಥ ಯಾತ್ರಗೆ ಚಾಲನೆ
ಕೇಂದ್ರ ಗೃಹ ಸಚಿವ ಅಮಿತ್ ಶಾ
ವಿವೇಕ ಬಿರಾದಾರ
|

Updated on:Mar 03, 2023 | 8:02 AM

Share

ಬೀದರ್​: ರಾಜ್ಯದ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ತಾರಕಕ್ಕೇರಿದೆ. ಭಾರತೀಯ ಜನತಾ ಪಾರ್ಟಿ (BJP) ಕೇಂದ್ರ ಮತ್ತು ರಾಜ್ಯ ಡಬಲ್​ ಇಂಜಿನ್​ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುತ್ತಾ ಮತಗಳ ಕ್ರೋಢೀಕರಣ ಮಾಡುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದು, ಇಂದು ಮತ್ತು ನಾಳೆ (ಮಾರ್ಚ್​ 3, 4) ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ಬೀದರ್ (Bidar), ಬೆಂಗಳೂರು​ (Bengaluru) ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬಸವಕಲ್ಯಾಣದಿಂದ ಪ್ರಾರಂಭವಾಗುವ ವಿಜಯ ಸಂಕಲ್ಪ ರಥ ಯಾತ್ರಗೆ ಚಾಲನೆ ನೀಡಲಿದ್ದಾರೆ.

ಅಮಿತ್​ ಶಾ ಬೀದರ್​ ಪ್ರವಾಸ ವೇಳಾಪಟ್ಟಿ

ವಿಶೇಷ ವಿಮಾನದ ಮೂಲಕ ತಡರಾತ್ರಿ 2:30 ಕ್ಕೆ ಬೀದರ್​ಗೆ ಬಂದಿರುವ ಅಮಿತ್ ಶಾ, 11:30 ಕ್ಕೆ ಗುರುನಾನಕ್​ ಝೀರಾಕ್ಕೆ ಭೇಟಿ ಕೊಡುತ್ತಾರೆ. 11:40ಕ್ಕೆ ಬೀದರ್​​ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್​ ಮೂಲಕ ಬಸವಕಲ್ಯಾಣಕ್ಕೆ ತೆರಳುವರು. ಮಧ್ಯಾಹ್ನ 12:10ಕ್ಕೆ ಬಸವಕಲ್ಯಾಣದ ಕ್ರಿಕೆಟ್​ ಸ್ಟೇಡಿಯಂನಿಂದ ಅನುಭವ ಮಂಟಪಕ್ಕೆ ಹೋಗುತ್ತಾರೆ. ಮಧ್ಯಾಹ್ನ 12:30ಕ್ಕೆ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡುತ್ತಾರೆ.

ಮಧ್ಯಾಹ್ನ 12:40ಕ್ಕೆ ಅನುಭವ ಮಂಟಪಕ್ಕೆ ಭೇಟಿ ಕೊಟ್ಟು, 12:45ಕ್ಕೆ ತೇರು ಮೈದಾನಕ್ಕೆ ತೆರಳುವರು. ಮಧ್ಯಾಹ್ನ 1:15ಕ್ಕೆ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3ಕ್ಕೆ ಹುಮನಾಬಾದ್​ನಲ್ಲಿ ರೋಡ್​ ಶೋ ನಡೆಯಲಿದೆ​. ಬಳಿಕ ಬೀದರ್​ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಬರಲಿದ್ದಾರೆ.

ಅಮಿತ್​ ಶಾ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಲಕ್ಷಣ ಸೌದಿ, ಪಶು ಸಂಗೋಪನೆ ಸಚಿವ ಪ್ರಭು ಚವಾಣ್, ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಸಾಥ್​ ನೀಡಲಿದ್ದಾರೆ.

ದೇವನಹಳ್ಳಿಯ ವಿಜಯ ಸಂಕಲ್ಪ ಯಾತ್ರೆಗೆ ಅಮಿತ್​ ಶಾ ಚಾಲನೆ

ಬೆಂಗಳೂರ ದೇವನಹಳ್ಳಿಯಿಂದ ಆರಂಭವಾಗುವ ವಿಜಯ ಸಂಕಲ್ಪ ರಥ ಯಾತ್ರೆಯ 4ನೇ ರಥಕ್ಕೆ ಚುನಾವಣಾ ಚಾಣಕ್ಯ ಅಮಿತ್​ ಶಾ ಇಂದು ಚಾಲನೆ ನೀಡಲಿದ್ದಾರೆ. ಹೀಗಾಗಿ ಬೀದರ್​ನಿಂದ ಹೊರಟು ಸಂಜೆ  4 ಗ‌ಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಲಿದ್ದಾರೆ.  ಮೊದಲಿಗೆ ರಣಬೈರೆಗೌಡರ ಹುಟ್ಟೂರು ಆವತಿಗೆ ಭೇಟಿ ನೀಡಿ ಆವತಿಯ ಚೆನ್ನಕೇಶವ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ರಣ ಬೈರೆಗೌಡ ಪ್ರತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶದಲ್ಲಿ 30 ಸಾವಿರ ಜನರು ಸೇರುವ ನಿರೀಕ್ಷೆ ಇದೆ.

ಬೀದರ್ ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್

ಕೇಂದ್ರ ಗೃಹ ಸಚಿವ ಅಮೀತ್ ಶಾ ಬಸವಕಲ್ಯಾಣಕ್ಕೆ ಆಗಮಿಸುವ ಹಿನ್ನೆಲೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ಮಾಡಲಾಗಿದೆ.  2 ಸಾವಿರಕ್ಕೂ ಹೆಚ್ಚು ಪೊಲೀಸ್​​ರನ್ನು ನಿಯೋಜನೆ ಮಾಡಲಾಗಿದೆ. 2 ಜನ ಎಸ್ಪಿ 4 ಜನ ಸಹಾಯಕ ಸುಪರಿಡೆಂಟ್ ಆಫ್ ಪೋಲಿಸ್,  15 ಜನ ಡಿವೈಎಸ್ಪಿ 40 ಜನ ಸರ್ಕಲ್ ಇನ್ಸ್ ಪೆಕ್ಟರ್ 150 ಜನ ಪಿಎಸ್​ಐ 12 ಕೆಸ್ಆರ್​ಪಿ ತುಕಡಿಯನ್ನು ನಿಯೋಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 am, Fri, 3 March 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ