AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​ನಲ್ಲಿ ನಾಯಿಕೊಡೆಯಂತೆ ತಲೆ ಎತ್ತುತ್ತಿವೆ ಅಕ್ರಮ ಮೊಬೈಲ್ ಟವರ್​ಗಳು: ತೆರಿಗೆ ಕಟ್ಟದೆ ಸರ್ಕಾರಕ್ಕೂ ವಂಚನೆ

ಬೀದರ್ ನಗರದಲ್ಲಿ 110ಕ್ಕೂ ಹೆಚ್ಚು ಮೊಬೈಲ್ ಟವರ್‌ಗಳು ಅನುಮತಿಯಿಲ್ಲದೆ ತಲೆ ಎತ್ತಿವೆ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಜೊತೆಗೆ ಲಕ್ಷಾಂತರ ರೂ ತೆರಿಗೆ ವಂಚನೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಅನಧಿಕೃತ ಟವರ್ ನಿರ್ಮಾಣವಾಗುತ್ತಿದ್ದರೂ ನಗರಸಭೆ ಅಧಿಕಾರಿಗಳು ಮಾತ್ರ ಕಂಡುಕಾಣದಂತೆ ಕುಳಿತಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ.

ಬೀದರ್​ನಲ್ಲಿ ನಾಯಿಕೊಡೆಯಂತೆ ತಲೆ ಎತ್ತುತ್ತಿವೆ ಅಕ್ರಮ ಮೊಬೈಲ್ ಟವರ್​ಗಳು: ತೆರಿಗೆ ಕಟ್ಟದೆ ಸರ್ಕಾರಕ್ಕೂ ವಂಚನೆ
ಮೊಬೈಲ್ ಟವರ್‌ಗಳು
Follow us
ಸುರೇಶ ನಾಯಕ
| Updated By: ಗಂಗಾಧರ​ ಬ. ಸಾಬೋಜಿ

Updated on:Apr 18, 2025 | 2:58 PM

ಬೀದರ್, ಏಪ್ರಿಲ್​ 18: ಜಿಲ್ಲೆಯಲ್ಲಿ ಅನಧಿಕೃತ ಹಾಗೂ ಅಕ್ರಮವಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ನಾಯಿಕೊಡೆಗಳಂತೆ ಆಕಾಶದೆತ್ತರಕ್ಕೆ ಮೊಬೈಲ್ ಟವರ್​ಗಳು (Mobile Towers) ತಲೆ ಎತ್ತುತ್ತಿವೆ. ಸರ್ಕಾರದ (Government) ಮಾರ್ಗಸೂಚಿಯನ್ನು ಪಾಲಿಸಲಾಗಿಲ್ಲ. ಬೀದರ್ ನಗರಸಭೆಯ ವ್ಯಾಪ್ತಿಯೊಂದರಲ್ಲಿಯೇ 110 ವಿವಿಧ ಕಂಪನಿಯ ಮೊಬೈಲ್ ಟವರ್​ಗಳಿದ್ದು, 90 ಮೊಬೈಲ್ ಟವರ್ ಅಳವಡಿಸಲು ಅನುಮತಿಯನ್ನೇ ಪಡೆದುಕೊಂಡಿಲ್ಲ. ಟವರ್​ಗಳು ಅಕ್ರಮವಾಗಿ ತಲೆ ಎತ್ತುವ ಮೂಲಕ ಮೊಬೈಲ್ ಟವರ್ ನಿರ್ಮಾಣ ದೊಡ್ಡ ಮಾಫಿಯಾದಂತೆ ಬೆಳೆದಿದೆ.

ಸರ್ಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚನೆ

ನಗರದಲ್ಲಿ ಪೈಪೋಟಿಯ ಮೇಲೆ ಟವರ್‌ಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಟವರ್ ನಿರ್ಮಾಣಕ್ಕಿರುವ ಮಾರ್ಗಸೂಚಿಗಳನ್ನು ಗಾಳಿಗೆ ತೂರಲಾಗುತ್ತಿದೆ. ಆದರೆ, ಅಕ್ರಮವಾಗಿ ಟವರ್‌ಗಳ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಯಾರೂ ಪ್ರಶ್ನೆ ಮಾಡುತ್ತಿಲ್ಲ. ಯಾವುದೇ ಮೊಬೈಲ್ ಟವರ್ ನಿರ್ಮಿಸಬೇಕಾದರೆ ಸ್ಥಳೀಯ ಸಂಸ್ಥೆಗಳಾದ ನಗರ ಸಭೆ, ಪುರಸಭೆ ಅಗ್ನಿಶಾಮಕ ದಳ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ (ಎನ್‌ಒಸಿ) ಪಡೆಯುವುದು ಕಡ್ಡಾಯ. ಆದರೆ ಇಲ್ಲಿ ಈ ನಿಯಮಗಳನ್ನು ಗಾಳಿಗೆ ತೂರಿ, ಖಾಸಗಿ ಮೊಬೈಲ್ ಕಂಪೆನಿಗಳು ಟವರ್ ನಿರ್ಮಿಸುತ್ತಿದ್ದು, ಇದೊಂದು ದೊಡ್ಡ ಮಾಫಿಯಾವಾಗಿದೆ. ಹೀಗೆ ಅಕ್ರಮವಾಗಿ ಮೊಬೈಲ್ ಟವರ್ ಅಳವಡಿಸಿದ್ದರ ಪರಿಣಾಮವಾಗಿ ಸರಕಾರದ ಬೊಕ್ಕಸಕ್ಕೆ ಕೂಡ ಲಕ್ಷಾಂತರ ರೂ. ತೆರಿಗೆ ವಂಚಿಸಲಾಗುತ್ತಿದೆ.

ಇದನ್ನೂ ಓದಿ: Bidar Bangalore Flight: ಬೀದರ್‌ ಬೆಂಗಳೂರು ವಿಮಾನ ಹಾರಾಟ ಇಂದಿನಿಂದ ಶುರು: ಇಲ್ಲಿದೆ ವೇಳಾಪಟ್ಟಿ

ಕೆವಲ ರಿಲಯನ್ಸ್ ಕಂಪನಿಯವರು ಮಾತ್ರ ನಗರದಲ್ಲಿ ಅಳವಡಿಸಿರುವ ಟವರ್​ಗೆ ನಗರ ಸಭೆಯಿಂದ ಪರವಾನಿಗೆ ಪಡೆದುಕೊಂಡು ಸರಕಾರದ ಮಾರ್ಗಸೂಚಿಯನ್ವಯ ಟವರ್ ಅಳವಡಿಸಿದ್ದಾರೆ. ಇನ್ನುಳಿದ ಮೊಬೈಲ್ ಟವರ್ ಕಂಪನಿಯವರು ನಗರ ಸಭೆಯಿಂದ ಅನುಮತಿಯನ್ನೇ ಪಡೆದುಕೊಳ್ಳದೆ ನಗರದಲ್ಲಿ ಎಲ್ಲೆಂದರಲ್ಲಿ ಟವರ್ ನಿರ್ಮಾಣ ಮಾಡಿದ್ದು, ನಗರ ಸಭೆಗೆ ಲಕ್ಷಾಂತರ ರೂ ತೆರಿಗೆ ವಂಚಿಸುತ್ತಿದ್ದಾರೆ. ಇದರ ಜೊತೆಗೆ ಇಂತಿಷ್ಟೂ ಅಂತರದಲ್ಲಿ ಟವರ್ ನಿರ್ಮಾಣ ಮಾಡಬೇಕು ಅನ್ನೋ ನಿಯಮವಿದೆ. ಆದರೆ ಆ ನಿಯಮಗಳನ್ನು ಇಲ್ಲಿ ಗಾಳಿಗೆ ತೂರಲಾಗಿದೆ.

ನಗರದಲ್ಲಿ ಅನಧಿಕೃತವಾಗಿ ಅಳವಡಿಸಿರುವ ಮೊಬೈಲ್‌ ಟವರ್‌ಗಳನ್ನು ಘೋಷಿಸಿಕೊಳ್ಳದ ಟೆಲಿಕಾಂ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳು ಧೈರ್ಯ ಮಾಡುತ್ತಿಲ್ಲ. ಇದರಿಂದ ಸರಕಾಕ್ಕೆ ಲಕ್ಷಾಂತರ ರೂ ತೆರಿಗೆ ವಂಚಿಸಲಾಗುತ್ತಿದೆ. ಏರ್‌ಟೆಲ್‌, ವೊಡಾಫೋನ್‌, ರಿಲಯನ್ಸ್‌, ಬಿಎಸ್‌ಎನ್‌ಎಲ್‌, ಸೇರಿದಂತೆ ಇತರೆ ಟೆಲಿಕಾಂ ಕಂಪನಿಗಳು ನಗರದಲ್ಲಿ ಸುಮಾರು ನೂರಕ್ಕೂ ಹೆಚ್ಚು ಮೊಬೈಲ್‌ ಟವರ್‌ಗಳನ್ನು ಅಳವಡಿಸಿವೆ. ಇವುಗಳಲ್ಲಿ 20 ಟವರ್‌ಗಳಿಂದ ಮಾತ್ರ ತೆರಿಗೆ ಸಂಗ್ರಹವಾಗುತ್ತಿದೆ. ಉಳಿದ ಟವರ್‌ಗಳ ಬಗ್ಗೆ ನಗರ ಸಭೆಯ ಬಳಿ ನಿಖರ ಮಾಹಿತಿಯಿಲ್ಲ.

ಆಯುಕ್ತ ಶಿವರಾಜ್ ರಾಥೋಡ್​ ಹೇಳಿದ್ದಿಷ್ಟು

ಇನ್ನೂ ನಗರದಲ್ಲಿನ ಅನಧಿಕೃತ ಮೊಬೈಲ್ ಟವರ್ ಬಗ್ಗೆ ನಗರ ಸಭೆಯ ಆಯುಕ್ತ ಶಿವರಾಜ್ ರಾಥೋಡ್​ಕೇಳಿದರೆ, ನಮ್ಮಲ್ಲಿ 20 ಕಂಪನಿಗಳು ಅನುಮತಿ ಪಡೆದಿದ್ದು, ಅವುಗಳಿವೆ ಮಾತ್ರ ಟವರ್ ಅಳವಡಿಸಲು ಅನುಮತಿ ನೀಡಿದ್ದೇವೆ. ಬಾಕಿ 110 ಟೌವರ್​ಗಳು ಅನುಮತಿ ಪಡೆಯದೆ ಮೊಬೈಲ್ ಟವರ್ ಅಳವಡಿಸಿದ್ದು, ಅವರಿಗೆ ನೋಟಿಸ್​ ಜಾರಿ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೀದರ್​ ಜಿಲ್ಲೆಯಲ್ಲಿ ಜಾನುವಾರು ಸಂತತಿ ಗಣನೀಯ ಇಳಿಕೆ!

ಜಿಲ್ಲೆಯಲ್ಲಿ ಮಾತ್ರ ಸರಕಾರದ ಈ ಆದೇಶಕ್ಕೆ ಬೆಲೆನೇ ಇಲ್ಲವಾದಂತಾಗಿದೆ. ಟವರ್ ಅಳವಡಿಕೆಗೆ ಅನುಮತಿಗೆ ಅರ್ಜಿ ಸಲ್ಲಿಸುವ ವೇಳೆ ಸ್ಥಳ ನಕ್ಷೆ, ನಿವೇಶನ ನಕ್ಷೆ, ಅಗ್ನಿಶಾಮಕ ದಳದಿಂದ ನಿರಾಕ್ಷೇಪಣಾ ಪತ್ರ, ಎಆರ್‌ಎಐನಿಂದ ವಿತರಿಸಿರುವ ದಾಖಲೆ ಪತ್ರ ಒದಗಿಸಬೇಕು. ಅನಧಿಕೃತ ಟವರ್ ನಿರ್ಮಾಣ ಎಗ್ಗಿಲ್ಲದೆ ನಡೆಯುತ್ತಿದ್ದರು ನಗರಸಭೆ ಅಧಿಕಾರಿಗಳು ಮಾತ್ರ ಕಂಡುಕಾಣದಂತೆ ಕುಳಿತಿರುವುದು ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:54 pm, Fri, 18 April 25

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ