AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಉದ್ಯಮಿಗೆ ಪಿಸ್ತೂಲ್ ತೋರಿಸಿ ಮೂರೂವರೆ ಕೋಟಿ ರೂ. ದರೋಡೆ, ಮೂವರ ಬಂಧನ

ಉದ್ಯಮಿಯೊಬ್ಬರಿಗೆ ಪಿಸ್ತೂಲು ತೋರಿಸಿ ಬರೋಬ್ಬರಿ ಮೂರೂವರೆ ಕೋಟಿ ರೂಪಾಯಿ ದರೋಡೆ ನಡೆಸಿದ ಘಟನೆ ಬೀದರ್ ಜಿಲ್ಲೆಯಲ್ಲಿ ನಿನ್ನೆ ಬೆಳಗ್ಗೆ ನಡೆದಿತ್ತು. ಈ ಬಗ್ಗೆ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ 24 ಗಂಟೆ ಒಳಗಾಗಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೀದರ್: ಉದ್ಯಮಿಗೆ ಪಿಸ್ತೂಲ್ ತೋರಿಸಿ ಮೂರೂವರೆ ಕೋಟಿ ರೂ. ದರೋಡೆ, ಮೂವರ ಬಂಧನ
ಬೀದರ್​ನಲ್ಲಿ ಉದ್ಯಮಿಗೆ ಪಿಸ್ತೂಲ್ ತೋರಿಸಿ ಮೂರೂವರೆ ಕೋಟಿ ರೂ. ದರೋಡೆ ನಡೆಸಿದ ಮೂವರ ಬಂಧನ (ಸಾಂದರ್ಭಿಕ ಚಿತ್ರ)Image Credit source: Getty Images
Follow us
ಸುರೇಶ ನಾಯಕ
| Updated By: Rakesh Nayak Manchi

Updated on:Nov 30, 2023 | 6:48 AM

ಬೀದರ್, ನ.30: ಉದ್ಯಮಿಯೊಬ್ಬರಿಗೆ ಪಿಸ್ತೂಲು ತೋರಿಸಿ ಬರೋಬ್ಬರಿ ಮೂರೂವರೆ ಕೋಟಿ ರೂಪಾಯಿ ದರೋಡೆ (Robbery) ನಡೆಸಿದ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಣಮಂತವಾಡಿ ಗ್ರಾಮದ ಬಳಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕೇವಲ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

ಉದ್ಯಮಿ ಉಮಾಶಂಕರ್ ಅವರು ಮೂರೂವರೆ ಕೋಟಿ ರೂ. ಸಹಿತ ನವೆಂಬರ್ 28 ರಂದು ರಾತ್ರಿ ಜಿಲ್ಲೆಯ ಬಸವಕಲ್ಯಾಣದ ರಾಷ್ಟ್ರೀಯ ಹೆದ್ದಾರಿ ಮಾರ್ಗದ ಮೂಲಕ ಮಹಾರಾಷ್ಟ್ರದ ಫಂಡರಪುರಕ್ಕೆ ಹೋಗುತ್ತಿದ್ದರು. ಹಣಮಂತವಾಡಿ ಗ್ರಾಮದ ಬಳಿ ಶೌಚಾಲಯಕ್ಕೆಂದು ಕಾರು ನಿಲ್ಲಿಸಿದಾಗ ಪಿಸ್ತೂಲು ತೋರಿಸಿ ಹಣ ದರೋಡೆ ಮಾಡಲಾಗಿತ್ತು.

ಇದನ್ನೂ ಓದಿ: ರಾಕ್​ಲೈನ್ ವೆಂಕಟೇಶ್ ಸಹೋದರನ ಮನೆ ದರೋಡೆ: ಒಂದಲ್ಲ ಎರಡಲ್ಲ 3 ತಿಂಗಳು ಸ್ಕೆಚ್ ಹಾಕಿ ಕಳ್ಳತನ ಮಾಡಿದ್ದ ಗ್ಯಾಂಗ್ ಅರೆಸ್ಟ್

ಗಾಳಿಯಲ್ಲಿ ಗುಂಡು ಹಾರಿಸಿ ಹಣೆಗೆ ಪಿಸ್ತೂಲ್ ಇಟ್ಟು ಸಿನಿಮೀಯ ರೀತಿ 3.50 ಕೋಟಿ ಹಣವನ್ನು ದರೋಡೆ ಮಾಡಲಾಗಿತ್ತು. ಈ ಬಗ್ಗೆ ನಿನ್ನೆ (ನ.29) ರಂದು ಬೆಳಗ್ಗೆ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮೂವರನ್ನು ಪೊಲೀಸರು ಬಂಧಿಸಿದ್ದು, ಒಬ್ಬ ಪರಾರಿಯಾಗಿದ್ದಾನೆ.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗುಂಡುರೆಡ್ಡಿ, ವಿಜಯ್ ರೆಡ್ಡಿ ಮತ್ತು ಸಂಜಯ ರೆಡ್ಡಿ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ 2.62 ಕೋಟಿ ರೂಪಾಯಿಯನ್ನು ವಶಕ್ಕೆ ಪಡೆದ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 am, Thu, 30 November 23

ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್