ಬೀದರ್: ಉದ್ಯಮಿಗೆ ಪಿಸ್ತೂಲ್ ತೋರಿಸಿ ಮೂರೂವರೆ ಕೋಟಿ ರೂ. ದರೋಡೆ, ಮೂವರ ಬಂಧನ

ಉದ್ಯಮಿಯೊಬ್ಬರಿಗೆ ಪಿಸ್ತೂಲು ತೋರಿಸಿ ಬರೋಬ್ಬರಿ ಮೂರೂವರೆ ಕೋಟಿ ರೂಪಾಯಿ ದರೋಡೆ ನಡೆಸಿದ ಘಟನೆ ಬೀದರ್ ಜಿಲ್ಲೆಯಲ್ಲಿ ನಿನ್ನೆ ಬೆಳಗ್ಗೆ ನಡೆದಿತ್ತು. ಈ ಬಗ್ಗೆ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ 24 ಗಂಟೆ ಒಳಗಾಗಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೀದರ್: ಉದ್ಯಮಿಗೆ ಪಿಸ್ತೂಲ್ ತೋರಿಸಿ ಮೂರೂವರೆ ಕೋಟಿ ರೂ. ದರೋಡೆ, ಮೂವರ ಬಂಧನ
ಬೀದರ್​ನಲ್ಲಿ ಉದ್ಯಮಿಗೆ ಪಿಸ್ತೂಲ್ ತೋರಿಸಿ ಮೂರೂವರೆ ಕೋಟಿ ರೂ. ದರೋಡೆ ನಡೆಸಿದ ಮೂವರ ಬಂಧನ (ಸಾಂದರ್ಭಿಕ ಚಿತ್ರ)
Image Credit source: Getty Images
Edited By: Rakesh Nayak Manchi

Updated on: Nov 30, 2023 | 6:48 AM

ಬೀದರ್, ನ.30: ಉದ್ಯಮಿಯೊಬ್ಬರಿಗೆ ಪಿಸ್ತೂಲು ತೋರಿಸಿ ಬರೋಬ್ಬರಿ ಮೂರೂವರೆ ಕೋಟಿ ರೂಪಾಯಿ ದರೋಡೆ (Robbery) ನಡೆಸಿದ ಘಟನೆ ಬೀದರ್ (Bidar) ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಣಮಂತವಾಡಿ ಗ್ರಾಮದ ಬಳಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕೇವಲ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

ಉದ್ಯಮಿ ಉಮಾಶಂಕರ್ ಅವರು ಮೂರೂವರೆ ಕೋಟಿ ರೂ. ಸಹಿತ ನವೆಂಬರ್ 28 ರಂದು ರಾತ್ರಿ ಜಿಲ್ಲೆಯ ಬಸವಕಲ್ಯಾಣದ ರಾಷ್ಟ್ರೀಯ ಹೆದ್ದಾರಿ ಮಾರ್ಗದ ಮೂಲಕ ಮಹಾರಾಷ್ಟ್ರದ ಫಂಡರಪುರಕ್ಕೆ ಹೋಗುತ್ತಿದ್ದರು. ಹಣಮಂತವಾಡಿ ಗ್ರಾಮದ ಬಳಿ ಶೌಚಾಲಯಕ್ಕೆಂದು ಕಾರು ನಿಲ್ಲಿಸಿದಾಗ ಪಿಸ್ತೂಲು ತೋರಿಸಿ ಹಣ ದರೋಡೆ ಮಾಡಲಾಗಿತ್ತು.

ಇದನ್ನೂ ಓದಿ: ರಾಕ್​ಲೈನ್ ವೆಂಕಟೇಶ್ ಸಹೋದರನ ಮನೆ ದರೋಡೆ: ಒಂದಲ್ಲ ಎರಡಲ್ಲ 3 ತಿಂಗಳು ಸ್ಕೆಚ್ ಹಾಕಿ ಕಳ್ಳತನ ಮಾಡಿದ್ದ ಗ್ಯಾಂಗ್ ಅರೆಸ್ಟ್

ಗಾಳಿಯಲ್ಲಿ ಗುಂಡು ಹಾರಿಸಿ ಹಣೆಗೆ ಪಿಸ್ತೂಲ್ ಇಟ್ಟು ಸಿನಿಮೀಯ ರೀತಿ 3.50 ಕೋಟಿ ಹಣವನ್ನು ದರೋಡೆ ಮಾಡಲಾಗಿತ್ತು. ಈ ಬಗ್ಗೆ ನಿನ್ನೆ (ನ.29) ರಂದು ಬೆಳಗ್ಗೆ ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮೂವರನ್ನು ಪೊಲೀಸರು ಬಂಧಿಸಿದ್ದು, ಒಬ್ಬ ಪರಾರಿಯಾಗಿದ್ದಾನೆ.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗುಂಡುರೆಡ್ಡಿ, ವಿಜಯ್ ರೆಡ್ಡಿ ಮತ್ತು ಸಂಜಯ ರೆಡ್ಡಿ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ 2.62 ಕೋಟಿ ರೂಪಾಯಿಯನ್ನು ವಶಕ್ಕೆ ಪಡೆದ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 am, Thu, 30 November 23

Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us