AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕಾಲದಲ್ಲಿ ಇಂತವರು ಇದ್ದಾರೆ: ಕಳಪೆ ಕಾಮಗಾರಿಗೆ ಬೇಸತ್ತು ಪಂಚಾಯ್ತಿ ಸದಸ್ಯತ್ವಕ್ಕೆ ರಾಜೀನಾಮೆ

ಈಗಿನ ಜಮಾನದಲ್ಲಿ ಎಲ್ಲರೂ ಅಧಿಕಾರ ಬೇಕು ಅಂತಾರೆ. ಸಣ್ಣ ಗ್ರಾಮ ಪಂಚಾಯತಿಯಿಂದ ಹಿಡಿದು ಸಿಎಂ ಹುದ್ದೆಯ ಆಕಾಂಕ್ಷಿಗಳಿದ್ದಾರೆ. ಅದೆಷ್ಟೋ ಆರೋಪಗಳು ಬಂದರೂ ರಾಜೀನಾಮೆ ನೀಡಬೇಕಾದರೆ ಹಿಂದೆ ಮುಂದೆ ನೋಡುತ್ತಾರೆ. ಇದರ ಮಧ್ಯ ಕಳಪೆ ಕಾಮಗಾರಿಯಿಂದ ಬೇಸತ್ತು ತನ್ನ ಗ್ರಾಮ ಪಂಚಾಯತಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹೌದು, ಅಚ್ಚರಿ ಎನ್ನಿಸಿದರೂ ಸತ್ಯ. ಕಳಪೆ ಕಾಮಗಾರಿ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸದ ಹಿನ್ನೆಲೆ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅಪರೂಪದ ಘಟನೆ ಬೀದರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಈ ಕಾಲದಲ್ಲಿ ಇಂತವರು ಇದ್ದಾರೆ: ಕಳಪೆ ಕಾಮಗಾರಿಗೆ ಬೇಸತ್ತು ಪಂಚಾಯ್ತಿ ಸದಸ್ಯತ್ವಕ್ಕೆ ರಾಜೀನಾಮೆ
ಮುದೋಳ್​ ಗ್ರಾಮ ಪಂಚಾಯತಿ ಸದಸ್ಯ ಸೋಮನಾಥ ಸ್ವಾಮಿ
ಸುರೇಶ ನಾಯಕ
| Edited By: |

Updated on:Aug 29, 2024 | 3:03 PM

Share

ಬೀದರ್​, ಆ.29: ಕಳಪೆ ಕಾಮಗಾರಿ ವಿರುದ್ಧ ಸಿಡಿದೆದ್ದು ಗ್ರಾ.ಪಂಚಾಯತಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಪರೂಪದ ಘಟನೆಯೊಂದು ಬೀದರ್ ಜಿಲ್ಲೆಯ ಕಮಲನಗರ(Kamalnagar) ತಾಲೂಕಿನ ಮುಧೋಳ ಪಂಚಾಯತಿಯಲ್ಲಿ ನಡೆದಿದೆ. ಮುಧೋಳ ‌ಗ್ರಾಮದ ವಾರ್ಡ್ ನಂ.1ರ ಸದಸ್ಯ ಸೋಮನಾಥ ಸ್ವಾಮಿ ಎಂಬುವವರು ಮುಧೋಳ ಗ್ರಾಮದಲ್ಲಿ ನಡೆಯುತ್ತಿರುವ ಕಳಪೆ ಗುಣಮಟ್ಟದ ಜೆಜೆಎಂ ಕಾಮಗಾರಿ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಸ್ಪಂದಿಸದ ಹಿನ್ನೆಲೆ ಮನನೊಂದು ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

3 ಕೋಟಿ 21 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಜೆಜೆಎಂ ಕಾಮಗಾರಿ ನಡೆಯುತ್ತಿದ್ದು, ಕಳಪೆ ಕಾಮಗಾರಿ ‌ಮಾಡುತ್ತಿರುವುದರಿಂದ ಕೆಲವು ‌ವಾರ್ಡ್​ಗಳಿಗೆ‌ ನೀರು ಬರುತ್ತಿಲ್ಲ. ಈ ಬಗ್ಗೆ ಎಲ್ಲಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಸದಸ್ಯನ ಮನವಿಗೆ ಸ್ಪಂದನೆ ಸಿಗದ ಹಿನ್ನಲೆ ಗ್ರಾಮ ಪಂಚಾಯತಿ ‌ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ವ್ಯವಸ್ಥೆಯ ವಿರುದ್ಧ ಅಸಮಾಧಾನ ‌ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಗ್ರಾಂ.ಪಂ. ಸದಸ್ಯರಿಗೆ ಗೌರವ ಧನ ಹೆಚ್ಚಿಸದ ಕಾರಣ ತನಗೆ ಹೆಚ್ಚುವರಿ ಸಂಬಳ ಬೇಡವೆಂದ MLC ಸುನೀಲ್ ಗೌಡ!

ಇನ್ನು ಈಗಿನ ದಿನಮಾನದಲ್ಲಿ ಅಧಿಕಾರಕ್ಕೊಸ್ಕರ ಕಿತ್ತಾಟ ನಡೆಯುತ್ತಲೇ ಇರುತ್ತದೆ. ಇಂತಹವರ ಮಧ್ಯೆ ಸದಸ್ಯ ಸೋಮನಾಥ ಸ್ವಾಮಿ ಅವರು ಕಳಪೆ ಕಾಮಗಾರಿ ಬಗ್ಗೆ ಅಧಿಕಾರಿಗಳು ಸ್ಪಂಧಿಸದೆ ಇರುವುದಕ್ಕೆ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದಷ್ಟೇ ಅಲ್ಲ, ಈ ಹಿಂದೆ ರಾಜ್ಯದ ಶಾಸಕರಿಗೆ, ಸಚಿವರಿಗೆ ಸಂಬಳ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿ ವಿಜಯಪುರದಲ್ಲಿ MLC ಸುನೀಲ್ ಗೌಡ ಅವರು ಹೆಚ್ಚುವರಿ ಸಂಬಳ ನಿರಾಕರಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Thu, 29 August 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!