AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ಹಿದೆಸೆಗೆ ತೆರಳಿದ್ದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ; ಯುವಕ ಪರಾರಿ

ಬೀದರ್ ತಾಲೂಕಿನ ‌ಚಾಂಬೋಳ ಗ್ರಾಮದಲ್ಲಿ ಬರ್ಹಿದೆಸೆಗೆ ಹೋದ ಮಹಿಳೆ ಮೇಲೆ ಯುವಕನೊಬ್ಬ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದ್ದು, ಆರೋಪಿ ಯುವಕ ಪರಾರಿಯಾಗಿದ್ದಾನೆ. ಈ ಕುರಿತು ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇನ್ನು ಸಂತ್ರಸ್ಥೆ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬರ್ಹಿದೆಸೆಗೆ ತೆರಳಿದ್ದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಆರೋಪ; ಯುವಕ ಪರಾರಿ
ಸುರೇಶ್ ನಾಯಕ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 12, 2024 | 5:05 PM

Share

ಬೀದರ್, ಏ.12: ಬೀದರ್(Bidar) ತಾಲೂಕಿನ ‌ಜನವಾಡ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ವಿವಾಹಿತ ಮಹಿಳೆ ಮೇಲೆ ಯುವಕನಿಂದ ಅತ್ಯಾಚಾರ ಆರೋಪ ಕೇಳಿಬಂದಿದೆ. ಯುಗಾದಿ ಹಬ್ಬದ ದಿನ ನಡೆದ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಸಂತ್ರಸ್ತೆಗೆ ಬೀದರ್​ನ ಬ್ರಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬರ್ಹಿದೆಸೆಗೆ ಹೋದಾಗ ಮಹಿಳೆ ಮೇಲೆ ಯುವಕ ಅತ್ಯಾಚಾರ ಮಾಡಿದ್ದಾನೆಂದು ಆರೋಪಿಸಿ, ಯುವಕನ ಮೇಲೆ ಕೊಲೆ ಯತ್ನ ಮತ್ತು ರೇಪ್ ಕೇಸ್ ದಾಖಲು ಮಾಡಲಾಗಿದೆ. ಇತ್ತ ದೂರು ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಹೃದಯಾಘಾತಕ್ಕೆ ಪೊಲೀಸ್ ಪೇದೆ‌ ಬಲಿ

ಕೊಡಗು: ವಿರಾಜಪೇಟೆಯಲ್ಲಿ ಹೃದಯಾಘಾತದಿಂದ ಕಾನ್ಸ್​ಟೇಬಲ್ ಸಾವನ್ನಪ್ಪಿದ್ದಾನೆ. ಆನಂದ್ ಡೊಳ್ಳಿನ್​(42) ಮೃತ ವ್ಯಕ್ತಿ. ವಿರಾಜಪೇಟೆ ಡಿವೈಎಸ್​ಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಆನಂದ್, ವಸತಿ ಗೃಹದಲ್ಲಿದ್ದಾಗ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾನೆ.

ಇದನ್ನೂ ಓದಿ:ತಾಯಿಯ ಸ್ನೇಹಿತನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಅಪರಾಧ ಮರೆಮಾಚಲು ಚಿತ್ರಹಿಂಸೆ

ಕಾರು ಡಿಕ್ಕಿಯಾಗಿ ಆಟೋ ಚಾಲಕನ ಸ್ಥಿತಿ ಗಂಭೀರ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಬಳಿ ಕಾರು ಮತ್ತು ಅಟೋ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಆಟೋ ಸಂಪೂರ್ಣ ಜಖಂ ಆಗಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ಕೂಡಲೇ ಆತನನ್ನು  ಖಾಸಗಿ ಅಸ್ಪತ್ರೆಗೆ ರವಾನಿಸಲಾಗಿದೆ. ಇತ್ತ ಏರ್ ಬಲೂನ್ ಒಪನ್ ಆಗಿದ್ದರಿಂದ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಈ ಕುರಿತು ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:21 pm, Fri, 12 April 24

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ