AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ದಿನದಿಂದ ಸುರಿಯುತ್ತಿರೋ ಮಳೆಗೆ ಕಂಗಾಲಾದ ರೈತ; ಕಟಾವಿಗೆ ಬಂದಿದ್ದ ಉದ್ದು, ಸೋಯಾ ನೀರಲ್ಲಿ ಮುಳುಗಡೆ

ಕಳೆದ ಮೂರು ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಆ ಭಾಗದ ರೈತರು ರೈತರು ನಲುಗಿಹೋಗಿದ್ದಾರೆ. ನಿರಂತರ ಮಳೆಯಿಂದಾಗಿ ಸೋಯಾ, ಉದ್ದು, ತೊಗರೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂಪಾಯಿ ಹಣ ನಷ್ಟವಾಗಿದೆ. ಸಾಲ ಸೋಲ ಮಾಡಿ ಬಿತ್ತಿದ ಬೆಳೆ ಕೈಗೆ ಬರುವಷ್ಟರಲ್ಲೇ ಮಣ್ಣುಪಾಲಾಗಿದ್ದು, ರೈತರನ್ನ ಸಂಕಷ್ಠಕ್ಕೆ ತಳ್ಳಿದೆ. ವರುಣನ ಆರ್ಭಟಕ್ಕೆ ಬೀದರ್​ ಜಿಲ್ಲೆಯ ರೈತರು ಕಂಗಾಲಾಗಿದ್ದು, ಸರಕಾರ ಕೊಡುವ ಪರಿಹಾರಕ್ಕಾಗಿ ಕಾಯುತ್ತಾ ಕುಳಿತಿದ್ದಾರೆ.

ಮೂರು ದಿನದಿಂದ ಸುರಿಯುತ್ತಿರೋ ಮಳೆಗೆ ಕಂಗಾಲಾದ ರೈತ; ಕಟಾವಿಗೆ ಬಂದಿದ್ದ ಉದ್ದು, ಸೋಯಾ ನೀರಲ್ಲಿ ಮುಳುಗಡೆ
ಬೀದರ್​ನಲ್ಲಿ ಮಳೆಗೆ ನೆಲಕಚ್ಚಿದ ಬೆಳೆಗಳು
ಸುರೇಶ್ ನಾಯಕ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 04, 2024 | 3:23 PM

Share

ಬೀದರ್​, ಸೆ.04: ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಕಟಾವಿಗೆ ಬಂದಿದ್ದ ಜಿಲ್ಲೆಯ ಪ್ರಮುಖ ಬೆಳೆ ಸೋಯಾ, ಉದ್ದು, ಹೆಸರು ಬೆಳೆ ನೀರಿನಲ್ಲಿ ಮುಳುಗಿ ಬೆಳೆ ಹಾಳಾಗಿದೆ. ಬೀದರ್, ಭಾಲ್ಕಿ, ಔರಾದ್, ಬಸವಕಲ್ಯಾಣ ಹಾಗೂ ಹುಮನಾಬಾದ್(Humnabad) ತಾಲೂಕಿನಲ್ಲಿನ ಬಹುತೇಕ ಬೆಳೆ ನೀರಿನಲ್ಲಿ ಮುಳುಗಿ ನಾಶವಾಗಿದೆ. ಸೋಯಾ, ಉದ್ದು, ಸಂಪೂರ್ಣವಾಗಿ ನೆಲ್ಲಕಚ್ಚಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾ ಸ್ಥಿತಿ ನಿರ್ಮಾಣವಾಗಿದೆ.

ಒಂದು ಎಕರೆಗೆ ಕನಿಷ್ಠ ಅಂದರೂ 3 ರಿಂದ 4 ಸಾವಿರ ರೂಪಾಯಿಯನ್ನು ಖರ್ಚು ಮಾಡಿ ಬಿತ್ತಿದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ನಮಗೆ ಸರಕಾರದಿಂದ ಸಹಾಯವಾದರೆ ನಮ್ಮ ಬದುಕು ಕಷ್ಟದಿಂದ ಮುಕ್ತವಾಗುತ್ತದೆ ಎಂಬುವುದು ರೈತರ ಅಳಲಾಗಿದೆ. ಬೀದರ ಜಿಲ್ಲೆಯಲ್ಲಿ ಪದೇ ಪದೇ ಬರಗಾಲ ಎದುರಾಗುತ್ತದೆ. ಆದರೆ, ಈ ವರ್ಷ ಸಕಾಲಕ್ಕೆ ಉತ್ತಮವಾದ ಮಳೆಯಾಗಿದ್ದು, ರೈತರು ಬಿತ್ತಿದ ಬೆಳೆಯೂ ಕೂಡ ಹುಲುಸಾಗಿ ಬೆಳೆದು ರೈತನ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿತ್ತು. ಆದರೆ, ಕಳೆದ ಮೂರು ದಿನಗಳಿಂದ ಸುರಿದ ಭಾರೀ ಮಳೆಗೆ ಫಸಲೆಲ್ಲವು ಕೊಚ್ಚಿಕೊಂಡು ಹೋಗಿದ್ದು, ರೈತ ಕಂಗಾಲಾಗಿದ್ದಾನೆ.

ಇದನ್ನೂ ಓದಿ:ಕಲಬುರಗಿ ಜಿಲ್ಲೆಯಲ್ಲಿ ನಿಲ್ಲದ ಮಳೆ, ಉಕ್ಕಿದ ಕಾಗಿಣ ನದಿ, ಮಳಖೇಡ ಉತ್ತರಾದಿಮಠ ಜಲಾವೃತ

ಬೀದರ್ ತಾಲೂಕಿನ ಕಾಶೆಂಪುರ ಗ್ರಾಮದಲ್ಲಿ ಸುಮಾರು ಇನ್ನೂರಕ್ಕೂ ಹೆಚ್ಚು ಹೆಕ್ಟರ್ ಪ್ರದೇಶದಲ್ಲಿ ನೀರು ನಿಂತಿದ್ದು, ರೈತರಿಗೆ ಬರಸಿಡಿಲು ಬಡಿದಂತಾಗಿ ನಷ್ಟವಾಗಿದೆ ಎಂದು ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ. ಈ ವರ್ಷ ಕೂಡ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮೆಳೆಯಿಂದಾಗಿ ರೈತರು ಬೆಳೆದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ನೀರಿನಲ್ಲಿ ಸೋಯಾ ಬೆಳೆ ಮುಳುಗಿದ್ದರಿಂದ ಸೋಯಾ ಬೀನ್ ಕೊಳೆತು ಹೋಗುವ ಆತಂಕ ರೈತರನ್ನ ಕಾಡುತ್ತಿದೆ. ಒಂದು ಎಕರೆಗೆ ಕನಿಷ್ಠ ಅಂದರೂ 3 ರಿಂದ 4 ಸಾವಿರ ರೂಪಾಯಿಯನ್ನು ಖರ್ಚು ಮಾಡಿ ಬಿತ್ತಿದ ಬೆಳೆ ಸಂಪೂರ್ಣವಾಗಿ ನಾಶವಾಗಿದೆ.

ಈ ಬಾರಿ ಬೀದರ್ ಜಿಲ್ಲೆಯ ರೈತರ ಸ್ಥಿತಿ ಶೋಚನೀಯವಾಗಿದೆ. ಸೋಯಾ, ಅವರೆ, ಉದ್ದು ಬೆಳೆಗಾರರ ಪರಿಸ್ಥಿತಿ ಸಂಪೂರ್ಣವಾಗಿ ಹದೆಗಿಟ್ಟಿದ್ದು, ಮತ್ತೆ ಸಾಲದ ಸುಳಿಯಲ್ಲಿ ಸಿಲುಕುವಂತಹ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಹಲವಾರು ವರ್ಷಗಳಿಂದ ಸೋಯಾ, ಉದ್ದು ಬೆಳೆಯನ್ನೇ ನಂಬಿಕೊಂಡಿದ್ದ ರೈತರಿಗೆ ಬರಸಿಡಿಲಿನಂತೆ ಬಂದ ಮಳೆ, ರೈತರ ಬದುಕನ್ನ ಬರ್ಬಾದ್ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬಾನಿ ಮನೆಯಲ್ಲಿ ಅದ್ದೂರಿ ಗಣೇಶೋತ್ಸವ; ರಾಧಿಕಾ ಮರ್ಚೆಂಟ್​ ನೃತ್ಯ
ಅಂಬಾನಿ ಮನೆಯಲ್ಲಿ ಅದ್ದೂರಿ ಗಣೇಶೋತ್ಸವ; ರಾಧಿಕಾ ಮರ್ಚೆಂಟ್​ ನೃತ್ಯ
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಕೊಪ್ಪಳ ಹಾಸ್ಟೆಲ್​​ಗೆ ಬಂದು ತಿಗಣಿಗೆ ಮದ್ದು ನೀಡಿದ ಚೆನ್ನೈ ತಜ್ಞರು
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಬಿಗ್​​ಬಾಸ್​​ ಮನೆಯಿಂದ ಹೊರಬಂದಿದ್ದಕ್ಕೆ ಕಾರಣ ತಿಳಿಸಿದ ಓಂ ಪ್ರಕಾಶ್ ರಾವ್
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಅರಿಶಿನದ ಕೊಂಬುಗಳಿಂದಲೇ ಸಿದ್ಧವಾದ ಪರಿಸರಸ್ನೇಹಿ ಗಣೇಶನ ಮೂರ್ತಿ!
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ಸಚಿವ ಯು.ಟಿ.ಖಾದರ್ ಗರಂ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
ಗಂಭೀರ ಪಡೆದುಕೊಂಡ ಜಾರಕಿಹೊಳಿ ಕೇಸ್: ಇಡಿ ಸಭೆಯಲ್ಲಿ ಮಹತ್ವದ ಚರ್ಚೆ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
LIVE: ಕೇಂದ್ರ ಸಚಿವ ಜೆ.ಪಿ‌.ನಡ್ಡಾ ಮಹತ್ವದ ಸುದ್ದಿಗೋಷ್ಠಿ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಕ್ಯಾರೆಕ್ಟರ್ ಲೆಸ್ ಎಂದ ಮಂಜ, ಗಂಡಸೇ ಅಲ್ಲ ಎಂದ ಕಾವ್ಯಾ: ವಿಡಿಯೋ
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ಟಿ.ನರಸೀಪುರ ಇನ್ಸ್​​​ಪೆಕ್ಟರ್ ಪರ ಡಿಕೆ ಶಿವಕುಮಾರ್ ಬ್ಯಾಟಿಂಗ್
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ
ವೈಷ್ಣವಿ ಬಟ್ಟೆ ಬಗ್ಗೆ ಅವಿನಾಶ್ ಕಮೆಂಟ್; ಉತ್ತರಿಸಿದ ಪ್ರಥಮಾ