ಸಚಿವ ಈಶ್ವರ್ ಖಂಡ್ರೆ ಸಹೋದರ ಅಧ್ಯಕ್ಷತೆಯ ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ

IT Raids On Bidar DCC Bank: ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಬ್ಯಾಂಕ್​ನ ಅಕೌಂಟ್​ಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಸದ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ಸಹೋದರ ಅಮರ ಖಂಡ್ರೆ ಅವರು ಡಿಸಿಸಿ ಬ್ಯಾಂಕ್​ನ ಅಧ್ಯಕ್ಷರಾಗಿದ್ದಾರೆ.

ಸಚಿವ ಈಶ್ವರ್ ಖಂಡ್ರೆ ಸಹೋದರ ಅಧ್ಯಕ್ಷತೆಯ ಬೀದರ್ ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ
ಬೀದರ್ ಡಿಸಿಸಿ ಬ್ಯಾಂಕ್
Edited By:

Updated on: Apr 12, 2024 | 2:02 PM

ಬೀದರ್, (ಏಪ್ರಿಲ್ 12): ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಅವರ ಸಹೋದರ ಅಧ್ಯಕ್ಷರಾಗಿರುವ ಬೀದರ್ ಡಿಸಿಸಿ ಬ್ಯಾಂಕ್(Bidar DCC Bank)​ ಮೇಲೆ ಐಟಿ ಅಧಿಕಾರಿಗಳು ದಾಳಿ ( Income tax raids) ಮಾಡಿದ್ದಾರೆ. ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ರೈತರಿಗೆ ಲೋನ್ ಕೊಡುತ್ತಿದ್ದಾರೆಂಬ ಆರೋಪದ ಮೇಲೆ ದಾಳಿಯಾಗಿದೆ. ಬೀದರ್ ನಗರದ ಹೈದ್ರಾಬಾದ್ ರಸ್ತೆಯಲ್ಲಿರು ಡಿಸಿಸಿ ಬ್ಯಾಂಕ್ ಮೇಲೆ 15ಕ್ಕೂ ಅಧಿಕ ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಬ್ಯಾಂಕ್ ಅಕೌಂಟ್ ಪರಿಶೀಲನೆ ನಡೆಸಿದ್ದಾರೆ.

ತೆಲಂಗಾಣ, ಯಾದಗಿರಿ ಕಲಬುರಗಿಯಿಂದ ಬಂದಿರುವ ಐಡಿ ಅಧಿಕಾರಿಗಳು ಬ್ಯಾಂಕ್​ನ ಅಕೌಂಟ್ಸ್​ಗಳನ್ನು ಪರಿಶೀನಲೆ ಮಾಡುತ್ತಿದ್ದಾರೆ. ಇನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಸಹೋದರ ಅಮರ ಖಂಡ್ರೆ ಬೀದರ್​ ಡಿಸಿಸಿ ಬ್ಯಾಂಕ್​ನ ಅಧ್ಯಕ್ಷರಾಗಿದ್ದಾರೆ. ಬ್ಯಾಂಕ್​ ಸಿಬ್ಬಂದಿಯ ಮೊಬೈಲ್​ಗಳನ್ನು ಆಫ್​ ಮಾಡಿಸಿ ಕೂಲಂಕುಶವಾಗಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Web contact

TV9 Kannada

Read More
Follow Us