AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ನಿರ್ಲಕ್ಷ್ಯದಿಂದ ನಶಿಸುತ್ತಿದೆ ಪುರಾತನ ಕಲ್ಮೇಶ್ವರ ದೇವಾಲಯ!

ಜಲಸಂಗ್ವಿ ಗ್ರಾಮದ ಪುರಾತನ ಕಲ್ಮೇಶ್ವರ ದೇವಾಲಯ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಅನಾಥವಾಗಿದೆ. ಒಂಭತ್ತು ಶತಮಾನಗಳ ಇತಿಹಾಸವಿರುವ ಪುರಾತನ ದೇವಾಲಯ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ. ಈ ದೇವಾಲಯ ಪುರಾತತ್ವ ಇಲಾಖೆಯ ಸುಪರ್ದಿಯಲ್ಲಿದ್ದರೂ ಇದರ ಜಿರ್ಣೋದ್ಧಾರ ಕಾರ್ಯ ಮಾತ್ರ ಇಲ್ಲಿಯವರೆಗೂ ಆಗಿಲ್ಲ. ಈ ಮಂದಿರದ ಸುತ್ತಮುತ್ತಲು ಬಿದ್ದಿರುವ ಕಸ ಕಡ್ಡಿಗಳೇ ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಹೌದು ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಜಲಸಂಗ್ವಿ ಗ್ರಾಮದಲ್ಲಿರುವ ಪುರಾತನ ಕಲ್ಮೇಶ್ವರ ದೇವಾಲಯ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಅನಾಥವಾಗಿದೆ. ಸುಮಾರು 900 ವರ್ಷಗಳ ಹಿಂದೆ ಕಲ್ಯಾಣ […]

ಅಧಿಕಾರಿಗಳ ನಿರ್ಲಕ್ಷ್ಯದಿಂದ ನಶಿಸುತ್ತಿದೆ ಪುರಾತನ ಕಲ್ಮೇಶ್ವರ ದೇವಾಲಯ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Jun 11, 2020 | 6:22 PM

Share

ಜಲಸಂಗ್ವಿ ಗ್ರಾಮದ ಪುರಾತನ ಕಲ್ಮೇಶ್ವರ ದೇವಾಲಯ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಅನಾಥವಾಗಿದೆ. ಒಂಭತ್ತು ಶತಮಾನಗಳ ಇತಿಹಾಸವಿರುವ ಪುರಾತನ ದೇವಾಲಯ ತನ್ನ ಕೊನೆಯ ದಿನಗಳನ್ನು ಎಣಿಸುತ್ತಿದೆ. ಈ ದೇವಾಲಯ ಪುರಾತತ್ವ ಇಲಾಖೆಯ ಸುಪರ್ದಿಯಲ್ಲಿದ್ದರೂ ಇದರ ಜಿರ್ಣೋದ್ಧಾರ ಕಾರ್ಯ ಮಾತ್ರ ಇಲ್ಲಿಯವರೆಗೂ ಆಗಿಲ್ಲ. ಈ ಮಂದಿರದ ಸುತ್ತಮುತ್ತಲು ಬಿದ್ದಿರುವ ಕಸ ಕಡ್ಡಿಗಳೇ ಇದಕ್ಕೆ ಉತ್ತಮ ಉದಾಹರಣೆಯಾಗಿದೆ.

ಹೌದು ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಜಲಸಂಗ್ವಿ ಗ್ರಾಮದಲ್ಲಿರುವ ಪುರಾತನ ಕಲ್ಮೇಶ್ವರ ದೇವಾಲಯ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಅನಾಥವಾಗಿದೆ. ಸುಮಾರು 900 ವರ್ಷಗಳ ಹಿಂದೆ ಕಲ್ಯಾಣ ಚಾಲುಕ್ಯರ ಅರಸ 6ನೇ ವಿಕ್ರಮಾದಿತ್ಯನು ಈ ದೇವಾಲಯ ನಿರ್ಮಾಣ ಮಾಡಿದ್ದಾರೆಂದು ಇಲ್ಲಿನ ಶಿಲಾಶಾಸನಗಳು ಹೇಳುತ್ತವೆ. 70 ಅಡಿ ಉದ್ದ 60 ಅಡಿ ಅಗಲ ವಿಸ್ತೀರ್ಣ ಹೊಂದಿರುವ ಈ ದೇವಾಲಯ ದೊಡ್ಡ ಚಪ್ಪಟೆ ಕಲ್ಲುಗಳಿಂದ ನಿರ್ಮಿಸಿಲಾಗಿದೆ. ನಕ್ಷತ್ರ ಆಕಾರದಲ್ಲಿರುವ ಈ ದೇವಾಲಯದ ಗೋಡೆಯಲ್ಲಿ 30 ಕ್ಕೂ ಹೆಚ್ಚು ಆಕರ್ಷಕ ಮದನಿಕಾ ನಾಟ್ಯ ರಾಣಿಯರ ಚಿತ್ರಗಳನ್ನ ಕೆತ್ತಲಾಗಿದೆ.

ನಾಟ್ಯ ಗಣಪತಿಯ ನಟನಾ ಭಂಗಿ ಕಲಾ ಪ್ರೀಯರನ್ನ ಆಕರ್ಷಸಿಸುತ್ತದೆ. ಜೊತೆಗೆ ಸುಂದರ ಭಂಗಿಯಲ್ಲಿರುವ ವೀರಭದ್ರ ದಕ್ಷಿಣಾಮೂರ್ತಿ, ದುರ್ಗಾ, ವರಾಹ, ದರ್ಪಣ ಸುಂದರೀ, ಕಾವ್ಯ ಕಣ್ಣಿಕೆ, ಶಾಸನ ಸುಂದರಿಯ ಮೂರ್ತಿಗಳು ಈ ದೇವಾಲಯದ ಸುತ್ತಲು ಕೆತ್ತಲಾಗಿದ್ದು ದೇವಾಲಯದ ಗತ ಇತಿಹಾಸವನ್ನ ಇವು ಸಾರೀ ಸಾರಿ ಹೇಳುತ್ತವೆ. ಈ ದೇವಾಲಯದ ಇತಿಹಾಸ ಏಳನೇ ತರಗತಿ ಹಾಗು ಪಿಯುಸಿ ಪಠ್ಯಪುಸ್ತಕದಲ್ಲಿ ಮಕ್ಕಳ ಪಾಠವಾಗಿರುವುದು ವಿಶೇಷವಾಗಿದೆ. ಇನ್ನೂ ಈ ದೇವಾಲಯ ಹಲವಾರು ವಿಶೇಷತೆಯನ್ನು ಹೊಂದಿದೆ ದೇವಾಲಯದ ನಾಲ್ಕುದಿಕ್ಕುಗಳಲ್ಲಿಯೂ ಸುಂದರವಾದ ಕೆತ್ತನೆಯನ್ನ ಮಾಡಲಾಗಿದೆ.

ಗರ್ಭಗುಡಿಯಲ್ಲಿ ಶಿವಲಿಂಗ ಮೂರ್ತಿ ಇದ್ದು ಮುಂದುಗಡೆ ನಂದಿ ಬಸವೇಶ್ವರನಿದ್ದಾನೆ. ದೇವಾಸ್ಥಾನದ ಹೊರಗಡೆ 9 ಬೃಹದಾಕಾರದ ಕಲ್ಲಿನ ಕಂಬಗಳಿದ್ದು ಅವುಗಳ ಮೇಲೆ ಸುಂದರ ಶಿಲ್ಪಕಲೆಯ ಕೆತ್ತನೆಯನ್ನ ಮಾಡಲಾಗಿದೆ. ಹಿಂದಿನ ಕಾಲದಲ್ಲಿ ಈ ಕಲ್ಲಿನ ಕಂಭಗಳಿಂದ ಇಂಪಾದ ಸಂಗೀತ ಕೆಳುತ್ತಿತ್ತು ಎಂದು ಪೂರ್ವಜರು ಹೇಳುತ್ತಾರೆ. ಯುಗಾದಿ ಹಬ್ಬದ ದಿನದಂದು ಸೂರ್ಯನ ಕಿರಣಗಳು ಇಲ್ಲಿನ ಶಿವಲಿಂಗದ ಮೇಲೆ ಬೀಳುವುದು ಇಲ್ಲಿನ ಇನ್ನೊಂದು ವಿಶೇಷವಾಗಿದೆ. ಇಂತಹ ಅಪರೂಪದ ದೇವಾಲಯ ಇಂದು ಪುಂಡ್ ಪೋಕರಿಗಳ ಶಾಲಾ ಮಕ್ಕಳು ಆಟವಾಡುವ ಸ್ಥಳವಾಗಿ ಮಾರ್ಪಾಡಾಗಿದೆ ಖೇದಕರ ವಿಚಾರವಾಗಿದೆ.

ಇಲ್ಲಿನ ಕಂಬಗಳು ಅಲ್ಲಲ್ಲಿ ಬಿರುಕುಬಿಟ್ಟಿದ್ದು ದೇವಾಲಯದ ಮೇಲ್ಚಾವಣಿಯು ಕೂಡಾ ಹಾಳಾಗಿದೆ. ಗೋಡೆಯ ಮೇಲೇ ಕೆತ್ತಲಾದ ಸುಂದರ ಕಲಾಕೃತಿಗಳು ಕೂಡಾ ಹಾಳಾಗಿವೆ ಇಂತಹ ಅಪರೂಪದ ದೇವಸ್ಥಾನವನ್ನು ಪುರಾತತ್ವ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ ಮಾಡಿದ್ದಾರೆ. ಈ ದೇವಾಲಯದಲ್ಲಿ ಕೆತ್ತಲಾಗಿರುವ ಶಾಸನ ಸುಂದರಿ ಚಿತ್ರ ಅದೇಷ್ಟೋ ಪುಸ್ತಕಗಳಲ್ಲಿ ಮುಖಪುಟದಲ್ಲಿ ಚಿತ್ರವಾಗಿದೆ. ಇಂತಹ ಅಪುರೂಪದಲ್ಲಿ ಅಪರೂಪವಾದ ದೇವಾಲಯವನ್ನ ಕಾಪಾಡಿಕೊಂಡು ಹೋಗಬೇಕಂದು ಇಲ್ಲಿನ ಜನರು ಸರಕಾರಕ್ಕೆ ವಿನಂತಿಸುತ್ತಿದ್ದಾರೆ. ಈ ಪುರಾತನ ದೇವಾಲಯವನ್ನೋಮ್ಮೆ ಸುತ್ತು ಹಾಕಿದರೆ ಶಿಲ್ಪ ಕಲೆಯ ವೈಭವ ಕಣ್ಣ ಮುಂದೆ ಬಿಚ್ಚಿಕೊಳ್ಳುತ್ತದೆ.

ಈ ಅಪೂರ್ವ ಕೆತ್ತನೆಗಳು ನಿಧಾನವಾಗಿ ನಶಿಸಿಹೋಗುತ್ತಿರುವುದು ಕಲಾ ಪ್ರೀಯರಿಗೆ ನಿರಾಸೆ ಮೂಡಿಸಿದೆ. ಪುರಾತತ್ವ ಇಲಾಕೆಯ ಬೇಜವ್ದಾರಿತನ ಗ್ರಾಮಸ್ಥರ ನಿರ್ಲಕ್ಷದಿಂದ ಕನ್ನಡ ನಾಡಿತ ಗಥ ಇತಿಹಾಸವನ್ನ ಸಾರುವ ದೇವಾಲಯ ಇಂದು ತೆರೆಯ ಮರೆಯಲ್ಲಿ ಸರಿಯುವ ಎಲ್ಲಾ ಲಕ್ಷಣಗಳು ಗೋಚರವಾಗಿದೆ. ಸ್ಥಳಿಯರಿಗೆ ದೇವಾಲಯದ ಬಗ್ಗೆ ಇರುವ ಅಸಡ್ಡೆಯ ನಡುವೆಯೂ ಈ ದೇವಾಲಯದ ಅರ್ಚಕರು ದೇವಾಲಯವನ್ನು ಕಾಪಾಡಿಕೊಂಡು ಬಂದಿರುವುದೇ ಸೂಜಿಗದ ವಿಷಯ.

ಇಂತಹ ಇತಿಹಾಸ ಸಾರುವ ದೇವಾಲಯವನ್ನು ಜಿಲ್ಲಾಡಳಿತ ಹಾಗೂ ಪುರಾತತ್ವ ಇಲಾಖೆ ದೇಗುಲದ ಜಿರ್ಣೋದ್ದಾರಕ್ಕೆ ಸೂಕ್ತ ಕ್ರಮ ಕೈಗೊಂಡು ಅದರ ಸಂರಕ್ಷಣೆಯತ್ತ ಗಮನಹರಿಸಿರುವುದು ಅಗತ್ಯವಾಗಿದೆ. ಅಷ್ಟೇ ಅಲ್ಲದೆ ಇತಿಹಾಸ ಪ್ರಶಿದ್ಧ ದೇವಾಲಯವನ್ನು ಉಳಿಸಿ ಬೇಳೆಸಿಕೊಂಡು ಹೋಗುವುದು ನಮ್ಮ ನಿಮ್ಮೇಲ್ಲರ ಆದ್ಯಕರ್ತವ್ಯವಾಗಿದೆ -ಸುರೇಶ್ ನಾಯಕ್

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​