AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​ನಲ್ಲಿ ಬರೋಬ್ಬರಿ 15 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ NCB ಅಧಿಕಾರಿಗಳು

ಬರೋಬ್ಬರಿ 15 ಕೋಟಿ ರೂಪಾಯಿ ಮೌಲ್ಯದ ಗಾಂಜಾವನ್ನು ಎನ್​ಸಿಬಿ(NCB) ಅಧಿಕಾರಿಗಳು ಜಪ್ತಿ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಔರಾದ್(Aurad) ತಾಲೂಕಿನ ವನಮಾರಪಳ್ಳಿ ಬಳಿ ನಡೆದಿದೆ.​ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಎಸ್‌ಸಿಬಿ ಅಧಿಕಾರಿಗಳು ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ವನಮಾರಪಳ್ಳಿ ಬಳಿ ಜಪ್ತಿ ಮಾಡಿದ್ದು, ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಬೀದರ್​ನಲ್ಲಿ ಬರೋಬ್ಬರಿ 15 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ NCB ಅಧಿಕಾರಿಗಳು
ಔರಾದ್ ತಾಲೂಕಿನ ವನಮಾರಪಳ್ಳಿ ಬಳಿ 15 ಕೋಟಿ ರೂಪಾಯಿ ಗಾಂಜಾ ಜಪ್ತಿ
ಸುರೇಶ ನಾಯಕ
| Updated By: ಕಿರಣ್ ಹನುಮಂತ್​ ಮಾದಾರ್|

Updated on:May 12, 2024 | 9:07 PM

Share

ಬೀದರ್​, ಮೇ.12: ಜಿಲ್ಲೆಯ ಔರಾದ್(Aurad) ತಾಲೂಕಿನ ವನಮಾರಪಳ್ಳಿ ಬಳಿ ಬರೋಬ್ಬರಿ 15 ಕೋಟಿ ರೂಪಾಯಿ ಮೌಲ್ಯದ ಗಾಂಜಾವನ್ನು ಎನ್​ಸಿಬಿ(NCB) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಒಡಿಶಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಲಾರಿಯಲ್ಲಿ 1500 ಕೆ.ಜಿ ಗಾಂಜಾವನ್ನ ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಎಸ್‌ಸಿಬಿ ಅಧಿಕಾರಿಗಳು ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ವನಮಾರಪಳ್ಳಿ ಬಳಿ ಜಪ್ತಿ ಮಾಡಿದ್ದು, ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಾರು ನಿಯಂತ್ರಣ ತಪ್ಪಿ ಮನೆಗಳ ಮುಂದೆ ನಿಂತಿದ್ದ ಬೈಕ್​ಗಳಿಗೆ ಡಿಕ್ಕಿ

ಕಾರು ನಿಯಂತ್ರಣ ತಪ್ಪಿ ಮನೆಗಳ ಮುಂದೆ ನಿಂತಿದ್ದ ಬೈಕ್​ಗಳಿಗೆ ಡಿಕ್ಕಿ ಹೊಡೆದಿದ್ದು, ಒಂದು ಬುಲೆಟ್ ಸೇರಿದಂತೆ 6 ಬೈಕ್​ಗಳು ಫುಲ್​ ಜಖಂಗೊಂಡಿದೆ. ಈ ವೇಳೆ ಬೈಕ್​ಗಳಿಗೆ ಡಿಕ್ಕಿ ಹೊಡೆದು ಮನೆ ಮುಂದೆ ನಿಂತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಕಾರು ನಿಂತಿದೆ. ಈ ವೇಳೆ ಮಕ್ಕಳಿಗೆ ಡಿಕ್ಕಿ ಹೊಡೆದಾಗ ಗಾಬರಿಗೊಂಡ ಆರೋಪಿ ಬಾಲಕ, ತನ್ನ ಮನೆಗೆ ತೆರಳಿದ್ದ. ನಂತರ ಆರೋಪಿ ಕುಟುಂಬಸ್ಥರು ಬಾಲಕನನ್ನ ಮನೆಯಲ್ಲಿ ಇರಿಸಿ ಬೀಗ ಹಾಕಿದ್ದರು. ಈ ಕುರಿತು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಆರೋಪಿ ಬಾಲಕನನ್ನ ವಶಕ್ಕೆ ಪಡೆದು ತೆರಳಿದ್ದು, ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಸಧ್ಯ ಸ್ಥಳದಿಂದ ಕಾರುಗಳು ಮತ್ತು ಜಖಂಗೊಂಡಿದ್ದ ಬೈಕ್​ಗಳನ್ನ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ಪುಷ್ಪ ಸಿನಿಮಾ ಶೈಲಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳ ಬಂಧನ; 1 ಕೋಟಿ ಮೌಲ್ಯದ ಗಾಂಜಾ ಜಪ್ತಿ

ನೀರು ಕೇಳುವ ನೆಪದಲ್ಲಿ ಮನೆಗೆ ಬಂದು ದರೋಡೆ

ಮಂಗಳೂರು: ನೀರು ಕೇಳುವ ಸೋಗಿನಲ್ಲಿ ಬಂದು ದರೋಡೆ‌‌ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದಲ್ಲಿ ನಿನ್ನೆ(ಮೇ.11) ನಡೆದಿದೆ. ಸುಹೈಬಾ (25) ಎಂಬುವರ ಮನೆಗೆ ಬಂದ ಓರ್ವ ಗಂಡಸು ಮತ್ತು ಹೆಂಗಸು, ನೀರು ಕೇಳಿ ಮನೆಯ ಸದಸ್ಯರ ಬಗ್ಗೆ ವಿಚಾರಣೆ ಮಾಡಿದ್ದಾರೆ. ನೀರು ತರಲು ಹೋದಾಗ ಮನೆಗೆ ನುಗ್ಗಿ ಬೀರು ತಗೆದು ಹುಡುಕಾಟ ನಡೆಸಿದ್ದಾರೆ. ಇದನ್ನು ನೋಡಿ ಕಿರುಚಿದ ಸುಹೈಬಾ ಮೇಲೆ ಹಲ್ಲೆ ಮಾಡಿ ಚೂರಿ ತೋರಿಸಿ ಕೂಗಾಡದಂತೆ ಬೆದರಿಕೆ ಹಾಕಿದ್ದಾರೆ. ಜೊತೆಗೆ ಸುಹೈಬಾ ಕೈಯಲ್ಲಿದ್ದ ಎರಡು ಚಿನ್ನದ ಉಂಗುರ ಮತ್ತು ಕರಿಮಣಿ ಕಸಿದು ಪರಾರಿಯಾಗಿದ್ದಾರೆ. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:03 pm, Sun, 12 May 24

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ