ಬೀದರ್​: ನೈತಿಕ ಪೊಲೀಸ್​ಗಿರಿ ಪ್ರಕರಣ; ಮೂವರು ಯುವಕರ ಬಂಧನ

ಇದೇ ಮೇ.10 ರಂದು ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಮುಸ್ಲಿಂ ಧರ್ಮೀಯ ಮಹಿಳೆ ಕುಳಿತಿದ್ದರು. ಈ ವೇಳೆ ಅದೇ ಧರ್ಮದ ಕೆಲ ಯುವಕರು ಬಂದು ಹಲ್ಲೆ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಬಸವಕಲ್ಯಾಣದಲ್ಲಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಮೂವರು ಅರೆಸ್ಟ್ ಆಗಿದ್ದಾರೆ.

ಬೀದರ್​: ನೈತಿಕ ಪೊಲೀಸ್​ಗಿರಿ ಪ್ರಕರಣ; ಮೂವರು ಯುವಕರ ಬಂಧನ
ಬೀದರ್​ನಲ್ಲಿ ನೈತಿಕ ಪೊಲೀಸ್​ಗಿರಿ ಪ್ರಕರಣ; ಮೂವರು ಯುವಕರ ಬಂಧನ
Edited By: ಕಿರಣ್ ಹನುಮಂತ್​ ಮಾದಾರ್

Updated on: May 12, 2024 | 10:21 PM

ಬೀದರ್, ಮೇ.12: ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆದಿದ್ದ ನೈತಿಕ ಪೊಲೀಸ್​ಗಿರಿ(Moral Policing) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಸವಕಲ್ಯಾಣ ಠಾಣೆ ಪೊಲೀಸರು(Basavakalyan Police Station) ಮೂವರು ಯುವಕರನ್ನು ಬಂಧಿಸಿದ್ದಾರೆ. ವಾರದ ಹಿಂದೆ ಬಸವಕಲ್ಯಾಣದ ಸಾಲುಮರದ ತಿಮ್ಮಕ್ಕ ಪಾರ್ಕ್​ನಲ್ಲಿ ಹಿಂದೂ ವ್ಯಕ್ತಿ ಜೊತೆ ಮುಸ್ಲಿಂ ಮಹಿಳೆ ಕುಳಿತಿದ್ದಕ್ಕೆ ಮುಸ್ಲಿಂ ಯುವಕರು ಸೇರಿಕೊಂಡು ಹಿಂದೂ ವ್ಯಕ್ತಿ ಹಾಗೂ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ಹಲ್ಲೆ ಸಂಬಂಧ ಬಸವಕಲ್ಯಾಣ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು(ಮೇ.12) ಮುಸ್ಲಿಂ ಸಮುದಾಯದ ಮೂವರು ಯುವಕರನ್ನು ಬಂಧಿಸಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ.

ಘಟನೆ ವಿವರ

ಇದೇ ಮೇ.10 ರಂದು ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಮುಸ್ಲಿಂ ಧರ್ಮೀಯ ಮಹಿಳೆ ಕುಳಿತಿದ್ದರು. ಈ ವೇಳೆ ಅದೇ ಧರ್ಮದ ಕೆಲ ಯುವಕರು ಬಂದು ಹಲ್ಲೆ ಮಾಡಿದ್ದರು. ಈತನ ಜೊತೆಗೆ ನೀನು ಅನೈತಿಕ ಸಂಬಂಧ ಇಟ್ಟುಕೊಂಡಿದ್ದೀಯಾ, ಮುಸ್ಲಿಮರ ಹೆಸರು ಹಾಳು ಮಾಡುತ್ತೀಯಾ ಎಂದು ಕೆಲ ಮುಸ್ಲಿಂ ಯುವಕರು ಹಲ್ಲೆ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಕುರಿತು ಪ್ರಕರಣ ದಾಖಲಾಗಿದ್ದು, ಇದೀಗ ಮೂವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಹಾವೇರಿಯಲ್ಲಿ ನೈತಿಕ ಪೊಲೀಸ್​ಗಿರಿ: ಲಾಡ್ಜ್​ನಲ್ಲಿ ಅನ್ಯಕೋಮಿನ ಮಹಿಳೆಯೊಂದಿಗೆ ಸಿಕ್ಕಿಬಿದ್ದ ವ್ಯಕ್ತಿಗೆ ಥಳಿತ

ಸಿಡಿಲು ಬಡಿದು ರೈತ ಸಾವು

ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಗೋಗಿ ಗ್ರಾಮದ ಹೊರವಲಯದಲ್ಲಿ ಸಿಡಿಲು ಬಡಿದು ರೈತ ಸಾವನ್ನಪ್ಪಿದ್ದಾನೆ. ಮಳೆಯಿಂದ ಆಶ್ರಯ ಪಡೆಯಲು ಮರದಡಿ ನಿಂತಿದ್ದಾಗ ಈ ಘಟನೆ ನಡೆದಿದೆ. ಸಿಡಿಲು ಬಡಿದು ರೈತ ಅಪ್ಪರಾಯ ಕಲಮೂಡ್(48) ಸಾವು. ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Sun, 12 May 24

Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us