AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ಆಟವಾಡ್ತಿದ್ದ ಮಗು ಅಪಹರಣ; ಮೂರೇ ದಿನದಲ್ಲಿ ಪತ್ತೆ ಹಚ್ಚಿದ ಬೀದರ್​ ಪೊಲೀಸ್

ಮೇ 4 ರಂದು ಬೀದರ್​ನ ಓಲ್ಡ್ ಸಿಟಿಯ ನಯಾಕಮಾನ್​ನಲ್ಲಿ ಮನೆಯ‌ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಅರವಿಂದ್ ಎಂಬ ಮಗು‌ವನ್ನು ಮಹಿಳೆಯೊಬ್ಬಳು ಅಪಹರಿಸಿಕೊಂಡು ‌ಹೋಗಿದ್ದಳು. ಇದೀಗ ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬೀದರ್(Bidar)​ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಮನೆ ಮುಂದೆ ಆಟವಾಡ್ತಿದ್ದ ಮಗು ಅಪಹರಣ; ಮೂರೇ ದಿನದಲ್ಲಿ ಪತ್ತೆ ಹಚ್ಚಿದ ಬೀದರ್​ ಪೊಲೀಸ್
ಬೀದರ್​
ಸುರೇಶ್ ನಾಯಕ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:May 07, 2024 | 6:46 PM

Share

ಬೀದರ್, ಮೇ.07: ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬೀದರ್(Bidar)​ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೇ 4 ರಂದು ಬೀದರ್​ನ ಓಲ್ಡ್ ಸಿಟಿಯ ನಯಾಕಮಾನ್​ನಲ್ಲಿ ಮನೆಯ‌ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಅರವಿಂದ್ ಎಂಬ ಮಗು‌ವನ್ನು ಮಹಿಳೆಯೊಬ್ಬಳು ಅಪಹರಿಸಿಕೊಂಡು ‌ಹೋಗಿದ್ದಳು. ಈ ಕುರಿತು ನಗರ ಪೊಲೀಸ್ ‌ಠಾಣೆಯಲ್ಲಿ‌ ಮೇ 4ರಂದು ಪ್ರಕರಣ ‌ದಾಖಲಾಗಿತ್ತು. ಈ ಹಿನ್ನಲೆ ತಕ್ಷಣ ‌ಎಚ್ಚೆತ್ತುಕೊಂಡ ಎಸ್ಪಿ ಚೆನ್ನಬಸವಣ್ಣ ಅವರು ಮಗು ಪತ್ತೆಗಾಗಿ 3 ಪೋಲೀಸ್ ತಂಡವನ್ನು ರಚನೆ ಮಾಡಿದ್ದರು. ಇದೀಗ ಪೊಲೀಸರು ಹೈದ್ರಾಬಾದ್​ನಲ್ಲಿ ಮಗುವನ್ನ ರಕ್ಷಣೆ ಮಾಡಿ ತಾಯಿಯ ಮಡಿಲನ್ನು ಸೇರಿಸಿದ್ದಾರೆ.

ಮತ ಹಾಕಲು ತೆರಳಿದ್ದ ವ್ಯಕ್ತಿ ರಸ್ತೆ ಅಪಘಾತದಲ್ಲಿ ಸಾವು

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದ ಬಳಿ ಮತ ಹಾಕಲು ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಭದ್ರಾವತಿ ನಿವಾಸಿ ಬೈಕ್ ಸವಾರ ಮಂಜುನಾಥ್ (32) ಮೃತ ರ್ದುದೈವಿ. ಚುರ್ಚಿಗುಂಡಿಯಿಂದ ಭದ್ರಾವತಿಗೆ ತೆರಳುವಾಗ ಖಾಸಗಿ ಬಸ್​ಗೆ ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿದ್ದಾರೆ. ಈ ಕುರಿತು ಶಿಕಾರಿಪುರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ದಾವಣಗೆರೆಯಲ್ಲಿ ಕಳ್ಳತನವಾಗಿದ್ದ ಗಂಡು ಮಗುವನ್ನ ಪೊಲೀಸರ ಕೈಗೆ ನೀಡಿ, ಅಪಹರಣ ಪ್ರಕರಣ ಅಂತ್ಯ ಹಾಡಿದ ಗೌರಮ್ಮಗೆ ಸನ್ಮಾನ

ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ಸಾವು

ರಾಯಚೂರು: ಜಿಲ್ಲೆಯ ಅರಕೇರಾ ತಾಲೂಕಿನ ಜಾಗಿರ ಜಾಡಲದಿನ್ನಿ ಗ್ರಾಮದಲ್ಲಿ ಬಿಎಲ್​​ಒ ಆಗಿ ನಿಯೋಜನೆಗೊಂಡಿದ್ದ ಬಸವರಾಜ ಜಗ್ಲಿ(53) ಎಂಬುವವರು ಚುನಾವಣಾ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹೆಡ್​ ಮಾಸ್ಟರ್ ಆಗಿದ್ದ ಬಸವರಾಜ, ಸರ್ಕಾರಿ ಶಾಲೆಯ ಬೂತ್​ಗೆ ಬಿಎಲ್​​ಒ ಆಗಿ ನಿಯೋಜನೆಗೊಂಡಿದ್ದರು. ಮಧ್ಯಾಹ್ನ ಬಿಪಿ ಲೋ ಆಗಿ ಕುಸಿದುಬಿದ್ದಿದ್ದ ಬಸವರಾಜ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಈ ಘಟನೆ ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Tue, 7 May 24

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ