AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಮುಂದೆ ಆಟವಾಡ್ತಿದ್ದ ಮಗು ಅಪಹರಣ; ಮೂರೇ ದಿನದಲ್ಲಿ ಪತ್ತೆ ಹಚ್ಚಿದ ಬೀದರ್​ ಪೊಲೀಸ್

ಮೇ 4 ರಂದು ಬೀದರ್​ನ ಓಲ್ಡ್ ಸಿಟಿಯ ನಯಾಕಮಾನ್​ನಲ್ಲಿ ಮನೆಯ‌ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಅರವಿಂದ್ ಎಂಬ ಮಗು‌ವನ್ನು ಮಹಿಳೆಯೊಬ್ಬಳು ಅಪಹರಿಸಿಕೊಂಡು ‌ಹೋಗಿದ್ದಳು. ಇದೀಗ ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬೀದರ್(Bidar)​ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಮನೆ ಮುಂದೆ ಆಟವಾಡ್ತಿದ್ದ ಮಗು ಅಪಹರಣ; ಮೂರೇ ದಿನದಲ್ಲಿ ಪತ್ತೆ ಹಚ್ಚಿದ ಬೀದರ್​ ಪೊಲೀಸ್
ಬೀದರ್​
ಸುರೇಶ ನಾಯಕ
| Edited By: |

Updated on:May 07, 2024 | 6:46 PM

Share

ಬೀದರ್, ಮೇ.07: ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬೀದರ್(Bidar)​ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೇ 4 ರಂದು ಬೀದರ್​ನ ಓಲ್ಡ್ ಸಿಟಿಯ ನಯಾಕಮಾನ್​ನಲ್ಲಿ ಮನೆಯ‌ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಅರವಿಂದ್ ಎಂಬ ಮಗು‌ವನ್ನು ಮಹಿಳೆಯೊಬ್ಬಳು ಅಪಹರಿಸಿಕೊಂಡು ‌ಹೋಗಿದ್ದಳು. ಈ ಕುರಿತು ನಗರ ಪೊಲೀಸ್ ‌ಠಾಣೆಯಲ್ಲಿ‌ ಮೇ 4ರಂದು ಪ್ರಕರಣ ‌ದಾಖಲಾಗಿತ್ತು. ಈ ಹಿನ್ನಲೆ ತಕ್ಷಣ ‌ಎಚ್ಚೆತ್ತುಕೊಂಡ ಎಸ್ಪಿ ಚೆನ್ನಬಸವಣ್ಣ ಅವರು ಮಗು ಪತ್ತೆಗಾಗಿ 3 ಪೋಲೀಸ್ ತಂಡವನ್ನು ರಚನೆ ಮಾಡಿದ್ದರು. ಇದೀಗ ಪೊಲೀಸರು ಹೈದ್ರಾಬಾದ್​ನಲ್ಲಿ ಮಗುವನ್ನ ರಕ್ಷಣೆ ಮಾಡಿ ತಾಯಿಯ ಮಡಿಲನ್ನು ಸೇರಿಸಿದ್ದಾರೆ.

ಮತ ಹಾಕಲು ತೆರಳಿದ್ದ ವ್ಯಕ್ತಿ ರಸ್ತೆ ಅಪಘಾತದಲ್ಲಿ ಸಾವು

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದ ಬಳಿ ಮತ ಹಾಕಲು ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬ ರಸ್ತೆ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಭದ್ರಾವತಿ ನಿವಾಸಿ ಬೈಕ್ ಸವಾರ ಮಂಜುನಾಥ್ (32) ಮೃತ ರ್ದುದೈವಿ. ಚುರ್ಚಿಗುಂಡಿಯಿಂದ ಭದ್ರಾವತಿಗೆ ತೆರಳುವಾಗ ಖಾಸಗಿ ಬಸ್​ಗೆ ಡಿಕ್ಕಿಯಾಗಿ ಬೈಕ್​ ಸವಾರ ಸಾವನ್ನಪ್ಪಿದ್ದಾರೆ. ಈ ಕುರಿತು ಶಿಕಾರಿಪುರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ದಾವಣಗೆರೆಯಲ್ಲಿ ಕಳ್ಳತನವಾಗಿದ್ದ ಗಂಡು ಮಗುವನ್ನ ಪೊಲೀಸರ ಕೈಗೆ ನೀಡಿ, ಅಪಹರಣ ಪ್ರಕರಣ ಅಂತ್ಯ ಹಾಡಿದ ಗೌರಮ್ಮಗೆ ಸನ್ಮಾನ

ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿ ಸಾವು

ರಾಯಚೂರು: ಜಿಲ್ಲೆಯ ಅರಕೇರಾ ತಾಲೂಕಿನ ಜಾಗಿರ ಜಾಡಲದಿನ್ನಿ ಗ್ರಾಮದಲ್ಲಿ ಬಿಎಲ್​​ಒ ಆಗಿ ನಿಯೋಜನೆಗೊಂಡಿದ್ದ ಬಸವರಾಜ ಜಗ್ಲಿ(53) ಎಂಬುವವರು ಚುನಾವಣಾ ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹೆಡ್​ ಮಾಸ್ಟರ್ ಆಗಿದ್ದ ಬಸವರಾಜ, ಸರ್ಕಾರಿ ಶಾಲೆಯ ಬೂತ್​ಗೆ ಬಿಎಲ್​​ಒ ಆಗಿ ನಿಯೋಜನೆಗೊಂಡಿದ್ದರು. ಮಧ್ಯಾಹ್ನ ಬಿಪಿ ಲೋ ಆಗಿ ಕುಸಿದುಬಿದ್ದಿದ್ದ ಬಸವರಾಜ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಈ ಘಟನೆ ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Tue, 7 May 24

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್