AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೀನವಾಗ್ತಿದೆ ಐತಿಹಾಸಿಕ ಪಾಪವಿನಾಶ ಮಂದಿರದ ಕೆರೆ; ವಿಷಕಾರಿ ನೀರು ಕುಡಿದು ಮೀನು, ಪಕ್ಷಿಗಳು ಸಾವು

ಅದು ನೂರಾರು ವರ್ಷದಷ್ಟು ಪುರಾತನ ಕೆರೆ. ಕೆರೆಯ ಸುತ್ತಮುತ್ತಲೂ ನೂರಾರು ಎಕರೆಯಷ್ಟು ಸುಂದರ ಅರಣ್ಯ ಪ್ರದೇಶವಿದೆ. ಇಲ್ಲಿನ ಅರಣ್ಯದಲ್ಲಿ ನೂರಾರು ವಿವಿಧ ಜಾತಿ ಔಷಧಿ ಸಸ್ಯಗಳು, ಹತ್ತಾರು ಬಗೆಯ ಪಕ್ಷಿಗಳು ಇಲ್ಲಿವೆ. ಆದರೆ, ಇಂದು ಇಂತಹ ಐತಿಹಾಸಿಕ ಕೆರೆ ಮಲೀನವಾಗುತ್ತಿದ್ದು, ಕೆರೆ ತನ್ನ ಅಂಧವನ್ನೇ ಕಳೆದುಕೊಂಡಿದೆ.

ಮಲೀನವಾಗ್ತಿದೆ ಐತಿಹಾಸಿಕ ಪಾಪವಿನಾಶ ಮಂದಿರದ ಕೆರೆ; ವಿಷಕಾರಿ ನೀರು ಕುಡಿದು ಮೀನು, ಪಕ್ಷಿಗಳು ಸಾವು
ಮಲೀನವಾಗ್ತಿದೆ ಐತಿಹಾಸಿಕ ಪಾಪವಿನಾಶ ಮಂದಿರದ ಕೆರೆ
ಸುರೇಶ ನಾಯಕ
| Edited By: |

Updated on:May 01, 2024 | 7:09 PM

Share

ಬೀದರ್, ಮೇ.01: ನಗರದಲ್ಲಿರುವ ಪಾಪವಿನಾಶ ಮಂದಿರ(papvinash temple) ಒಂದು ಶತಮಾನದಷ್ಟು ಹಳೆಯದಾದ ದೇವಸ್ಥಾನ, ಶ್ರೀರಾಮ ಚಂದ್ರ ರಾವಣನನ್ನ ಯುದ್ದದಲ್ಲಿ ಹತ್ಯೆ ಮಾಡಿದಾಗ ರಾವಣ ಶ್ರೀರಾಮನಿಗೆ ಭ್ರಹ್ಮಹತ್ಯೆ ದೋಷದ ಶಾಪ ಕೊಡುತ್ತಾನೆ. ಬಳಿಕ ಶ್ರಿರಾಮ ತಪ್ಪಸ್ಸು ಮಾಡಿ ಈ ಕೆರೆಯಲ್ಲಿ ಸ್ನಾನ ಮಾಡಿ ಪಾಪನಾಶ ಮಾಡಿಕೊಂಡು ಹೋಗುತ್ತಾನೆ. ಇದರಿಂದ ಅಂದಿನಿಂದ ಈ ದೇವಸ್ಥಾನಕ್ಕೆ ಪಾಪನಾಶ ಮಂದಿರ ಎಂದು ಹೆಸರು ಬಂದಿದೆ. ಆದರೆ, ಇಂತಹ ಐತಿಹಾಸಿಕ ಪಾಪವಿನಾಶ ಮಂದಿರದ ಕೆರೆ, ಇಲ್ಲಿಗೆ ಬರುವ ಭಕ್ತರಿಂದಲೇ ಮಲೀನವಾಗುತ್ತಿದೆ. ಹೌದು, ಪೂಜೆ ಪುನಸ್ಕಾರ ಮಾಡಿದ ವಸ್ತುಗಳನ್ನ ಕೆರೆಗೆ ತಂದು ಹಾಕುತ್ತಿರುವ ಹಿನ್ನಲೆ ನೀರು ವಿಷಕಾರಿಯಾಗಿ ಮೀನುಗಳು, ಪಕ್ಷಿಗಳು ಸಾವನ್ನಪ್ಪುತ್ತಿವೆ.

ಈ ದೇವಸ್ಥಾನದಲ್ಲಿ ಉದ್ಭವ ಲಿಂಗವಿದ್ದು ರಾಜ್ಯವಷ್ಟೇ ಅಲ್ಲದೇ ನರೆಯ ರಾಜ್ಯಗಳಾದ ಆಂಧ್ರಪ್ರದೇಶ, ಮಹಾರಾಷ್ಟ್ರದಿಂದ ಈ ಶ್ರಾವಣ ಮಾಸದಲ್ಲಿ ಸಾಗೋರಾಪಾದಿಯಲ್ಲಿ ಭಕ್ತರ ದಂಡು ಇಲ್ಲಿಗೆ ಆಗಮಿಸಿ ದೇವರ ದರ್ಶನ ಪಡೆದುಕೊಂಡು ಹೋಗುತ್ತಾರೆ. ಈ ಐತಿಹಾಸಿಕ ಕೆರೆಯ ಸುತ್ತಮುತ್ತಲೂ ಸುಂದರವಾದ ಪರಿಸರವಿದ್ದು, ನೂರಾರು ಬಗೆಯ ಪಕ್ಷಿಗಳು ಇಲ್ಲಿ ವಾಸವಾಗಿವೆ. ಈ ಕೆರೆಯ ನೀರು ಮಲೀನವಾಗುತ್ತಿದೆ ಜನರು ಪಾಪವಿನಾಶ ಕೆರೆಯನ್ನ ಮಲೀನ ಮಾಡಬೇಡಿ ಎಂದು ಅರ್ಚಕರು ಮನವಿ ಮಾಡುತ್ತಿದ್ದಾರೆ.

ಇದನ್ನೂ ಓದಿ:ದೊಡ್ಡಬಳ್ಳಾಪುರ: ಕೈಗಾರಿಕಾ ಪ್ರದೇಶದ ಕೆಮಿಕಲ್​ನಿಂದ ಐತಿಹಾಸಿಕ ಕೆರೆ ಮಲೀನ. ಕೆರೆಯನ್ನ ಉಳಿಸಲು ಕಾಲುವೆಗೆ ಮಣ್ಣು ಸುರಿದು ರೈತರ ಆಕ್ರೋಶ

ಕೆರೆಯ ಸುತ್ತಮುತ್ತಲಿದೆ ಸುಂದರ ಪರಿಸರ

ಇನ್ನು ಐತಿಹಾಸಿಕ ದೇವಸ್ಥಾನದ ಪಕ್ಕದಲ್ಲಿಯೇ ಸುಮಾರು 125 ಎಕರೆ ವಿಸ್ತೀರ್ಣದ ಬೃಹತ್ತಾದ ಐತಿಹಾಸಿ ಕೆರೆಯಿದೆ. ಕೆರೆಯ ಸುತ್ತಮುತ್ತ ನೂರಾರು ಎಕರೆಯಷ್ಟೂ ಸುಂದರ ಪರಿಸರ ಕಾಡಿದೆ. ಇಲ್ಲಿನ ಮಾನವ ನಿರ್ಮಿತ ಕಾಡಿನಲ್ಲಿ ನೂರಾರು ಔಷಧಿಯ ಸಸ್ಯಗಳಿವೆ. ಇದರ ಜೊತೆಗೆ ವಿವಿಧ ಬಗೆಯ ಚಿಟ್ಟೆಗಳು, ಪಕ್ಷಿಗಳು, ನವಿಲುಗಳ ವಾಸಸ್ಥಾನ ಇದಾಗಿದೆ. ಆದರೆ ಇಂದು ಈ ಕೆರೆ ಮಲೀನವಾಗುತ್ತಿದ್ದು, ಜಲಚರ, ಪಕ್ಷಿಗಳ ಸಾವಿಗೆ ಕಾರಣವಾಗುತ್ತಿದೆ. ಜೊತೆಗೆ ದೇವಸ್ಥಾನದ ಪಕ್ಕದಲ್ಲಿರುವ ಶಿವನಗರದ ಬಡಾವಣೆಯ ಸಾವಿರಾರು ಲೀಟರ್ ಡ್ರೈನೇಜ್ ನೀರು ಇಲ್ಲಿನ ಕೆರೆಗೆ ಸೇರುತ್ತಿದೆ. ಸುಂದರವಾದ ಪರಿಸರ ಕಾಪಾಡಿ ಎಂದು ಇಲ್ಲಿನ ಭಕ್ತರು ವಿನಂತಿಸುತ್ತಿದ್ದಾರೆ.

ಪ್ರತಿವರ್ಷ ಈ ದೇವಾಲಯಕ್ಕೆ ಲಕ್ಷಾಂತರ ರೂಪಾಯಿ ಹಣವನ್ನ ದೇಣಿಗೆ ರೂಪದಲ್ಲಿ ಕೊಡುತ್ತಿದ್ದಾರೆ. ಆದರೆ ಇಲ್ಲಿಗೆ ಬಂದಿರುವ ಹಣವನ್ನ ಸರಕಾರ ಪಡೆದುಕೊಳ್ಳುತ್ತಿದ್ದು, ದೇವಾಲಯದ ಕೆರೆಯ ಸ್ವಚ್ಚತೆಗೆ ಮಾತ್ರ ಗಮನಹರಿಸದಿರುವುದು ವಿರ್ಯಾಸವೇ ಸರಿ. ಲಕ್ಷಾಂತರ ಭಕ್ತರನ್ನ ಹೊಂದಿರುವ ಈ ದೇವಾಲಯಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವ ಅನಿವಾರ್ಯತೆ ಈಗ ಸರಕಾರದ ಮೇಲಿದೆ. ಏನೇ ಇರಲಿ ಕೆರೆಗೆ ಸೇರುತ್ತಿರುವ ವಿಷಕಾರಿ ನೀರನ್ನ ತಡೆದು ಕೆರೆಯ ನೀರು ಶುಚಿತ್ವವಾಗಿ ಇಡಿ ಎಂದು ಇಲ್ಲಿನ ಭಕ್ತರು ಮನವಿ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:06 pm, Wed, 1 May 24

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ