5 ಸ್ಟಾರ್ ಗ್ರೇಡ್ ಹೊಂದಿರುವ ಬೀದರ್ ಪಶು ವಿವಿಗೆ ಸಿಬ್ಬಂದಿಗಳೇ ಇಲ್ಲ, 2 ಸಾವಿರ ಹುದ್ದೆಗಳು ಖಾಲಿ, ಆದರೂ ವಿಶ್ವವಿದ್ಯಾಲಯ ರನ್​ ಆಗ್ತಿದೆ!

ಗಡಿ ಜಿಲ್ಲೆ ಬೀದರ್ ನಲ್ಲಿರುವ ರಾಜ್ಯದ ಏಕೈಕ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಈಗ ಅನಾಥ ಪ್ರಜ್ಞೆ ಕಾಡತೊಡಗಿದೆ. ಈ ವಿಶ್ವವಿದ್ಯಾಲಯ ಆರಂಭವಾದಾಗಿನಿಂದಲೂ ಇಲ್ಲಿ ವಿವಿಧ ಹುದ್ದೆಗಳನ್ನ ಭರ್ತಿ ಮಾಡಿಲ್ಲ. ಇಲ್ಲಿ ಆಫೀಸರ್ಸ್, ಟೀಚಿಂಗ್‌, ಟೆಕ್ನಿಕಲ್‌, ನಾನ್‌ ಟಿಚೀಂಗ್‌ ಹುದ್ದೆಗಳು ಸೇರಿ 2 ಸಾವಿರ ಹುದ್ದೆಗಳು ಖಾಲಿ ಇವೆ. ಹೀಗಾಗಿ ಎಲ್ಲಾ ಕೆಲಸವನ್ನೂ ಕೂಡಾ ಇರುವ ಸಿಬ್ಬಂದಿಯಿಂದಲೇ ಮಾಡಿಸಬೇಕಾಗಿರುವುದರಿಂದ ಕೆಲಸದ ಒತ್ತಡ ಜಾಸ್ತಿಯಾಗಿದ್ದು ಸಮಸ್ಯೆಯಾಗುತ್ತಿದೆ ಎಂದು ಕುಲಪತಿ ಹೇಳುತ್ತಾರೆ.

5 ಸ್ಟಾರ್ ಗ್ರೇಡ್ ಹೊಂದಿರುವ ಬೀದರ್ ಪಶು ವಿವಿಗೆ ಸಿಬ್ಬಂದಿಗಳೇ ಇಲ್ಲ, 2 ಸಾವಿರ ಹುದ್ದೆಗಳು ಖಾಲಿ, ಆದರೂ ವಿಶ್ವವಿದ್ಯಾಲಯ ರನ್​ ಆಗ್ತಿದೆ!
ಬೀದರ್ ಪಶು ವಿವಿಗೆ ಸಿಬ್ಬಂದಿಗಳೇ ಇಲ್ಲ, 2 ಸಾವಿರ ಹುದ್ದೆಗಳು ಖಾಲಿ, ಆದರೂ ವಿಶ್ವವಿದ್ಯಾಲಯ ರನ್​ ಆಗ್ತಿದೆ!
Edited By: ಸಾಧು ಶ್ರೀನಾಥ್​

Updated on: Oct 18, 2023 | 1:40 PM

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸಿಬ್ಬಂದಿಯ ಕೊರತೆ ಕಾಡುತ್ತಿದೆ. ವಿಶ್ವವಿದ್ಯಾಲಯದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇರುವ ಪರಿಣಾಮವಾಗಿ ವ್ಯವಸ್ಥೆ ಹಳ್ಳಹಿಡಿಯುತ್ತಿದೆ. ದೇಶದಲ್ಲಿಯೇ ಅತ್ಯುತ್ತಮ 5 ಸ್ಟಾರ್ ಗ್ರೇಡ್ ಹೊಂದಿರು ವಿಶ್ವವಿದ್ಯಾಲಯಕ್ಕೆ ಸಿಬ್ಬಂದಿಗಳೇ ಇಲ್ಲದಿರುವುದು ಸಾರ್ವಜನಿಕರಿಗೆ ಅಶ್ಚರ್ಯವನ್ನುಂಟುಮಾಡಿದೆ… ಪಶು ವಿವಿನಲ್ಲಿ ಬೋಧಕ ಬೋಧಕೇತರ 1648 ಹುದ್ದೆಗಳು ಖಾಲಿ… ಭೊಧನೆ, ಇನ್ನಿತರೆ ಚಟುವಟಿಕೆಗಳಿಗೆ ತೊಂದರೆ… ಈ ಹುದ್ದೆಗಳು ತುಂಬದೆ ಹೋದರೆ ನಾನಾ ಚಟುವೆಟಿಗಳಿಗೆ ತೊಂದರೆ…ವಿಶ್ವವಿದ್ಯಾಲಯದ ಮಾನ್ಯತೆ ರದ್ದಾಗುವ ಸಾಧ್ಯತೆ.. ಹೌದು ಗಡಿ ಜಿಲ್ಲೆ ಬೀದರ್ ನಲ್ಲಿರುವ ರಾಜ್ಯದ ಏಕೈಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಜಾನಿಗಳ ವಿಶ್ವವಿದ್ಯಾಲಯಕ್ಕೆ ಈಗ ಅನಾಥಪ್ರಜ್ಞೆ ಕಾಡತೊಡಗಿದೆ.

ಈ ವಿಶ್ವವಿದ್ಯಾಲಯ ಆರಂಭವಾದಾಗಿನಿಂದಲೂ ಇಲ್ಲಿ ವಿವಿಧ ಹುದ್ದೆಗಳನ್ನ ಭರ್ತಿ ಮಾಡಿಲ್ಲ. ಹೀಗಾಗಿ ವಿಶ್ವವಿದ್ಯಾಲಯದಲ್ಲಿ ಸುಮಾರು 1648 ಹುದ್ದೆಗಳು ಖಾಲಿಯಿದ್ದು ಇಲ್ಲಿನ ಕೆಲಸ ಕಾರ್ಯಗಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ರಾಜ್ಯದಲ್ಲಿ ಈಗಾಗಲೇ ಐದು ಕಡೆಗಳಲ್ಲಿ ಪಶುವೈದ್ಯಕೀಯ ಕಾಲೇಜುಗಳಿವೆ. ಅಥಣಿ ಮತ್ತು ಪುತ್ತೂರಗಳಲ್ಲಿ ಈಗ ಹೊಸದಾಗಿ ಪಶು ವೈದ್ಯಕೀಯ ಕಾಲೇಜುಗಳು ಆರಂಭವಾಗಿವೆ. ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಈಗ ನೂರಾರು ಸಂಖ್ಯೆಯಲ್ಲಿ ಪದವೀಧರರು, ಸ್ನಾತಕೋತ್ತರ ಪದವೀಧರರು, ಪಿಎಚ್‌ಡಿ ಓದುತ್ತಿರುವವರು, ಡಿಪ್ಲೋಮಾ ವಿದ್ಯಾರ್ಥಿಗಳು ಓದುತ್ತಿದ್ದಾರೆ.

ಹಾವೇರಿ, ಹಾಸನ ಸೇರಿದಂತೆ ರಾಜ್ಯದ ಐದು ಕಡೆಗಳಲ್ಲಿ ಪಾಲಿಟೆಕ್ನಿಕ್‌ ಕೇಂದ್ರಗಳಿವೆ. ಮಂಗಳೂರಿನಲ್ಲಿ ಹೈನುಗಾರಿಕಾ ವಿಜ್ಞಾನ ಮಹಾವಿದ್ಯಾಲಯವಿದೆ. ಈ ವಿಶ್ವವಿದ್ಯಾಲಯದಲ್ಲಿ ಆಫೀಸರ್ಸ್, ಟೀಚಿಂಗ್‌, ಟೆಕ್ನಿಕಲ್‌, ನಾನ್‌ ಟಿಚೀಂಗ್‌ ಹುದ್ದೆಗಳು ಸೇರಿ ಒಟ್ಟು 1648 ಖಾಲಿ ಇವೆ. ಹೀಗಾಗಿ ಎಲ್ಲಾ ಕೆಲಸವನ್ನೂ ಕೂಡಾ ಇರುವ ಸಿಬ್ಬಂದಿಯಿಂದಲೇ ಮಾಡಿಸಬೇಕಾಗಿರುವುದರಿಂದ ಕೆಲಸದ ಒತ್ತಡ ಜಾಸ್ತಿಯಾಗಿದ್ದು ಸಮಸ್ಯೆಯಾಗುತ್ತಿದೆ ಎಂದು ಕುಲಪತಿ ಹೇಳುತ್ತಿದ್ದಾರೆ.

ಬೀದರ್ ನಂದಿನಗರದಲ್ಲಿರುವ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಜಾನಿಗಳ ವಿಶ್ವವಿದ್ಯಾಲಯ ದೇಶದಲ್ಲಿಯೇ 12 ನೇ ಅತ್ಯುತ್ತಮ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆ ಇದರದ್ದಾಗಿದೆ. ಇಲ್ಲಿ ಓದಿದ ಹಲವಾರು ವಿದ್ಯಾರ್ಥಿ ವಿದ್ಯಾರ್ಥಿನೀಯರು ರಾಜ್ಯದಲ್ಲಿ ಮೂಲೇ ಮೂಲೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ವಿಜ್ಜಾನಿಗಳೂ ಕೂಡಾ ಆಗಿದ್ದಾರೆ. ಆದರೆ ಇಂತಹ ವಿವಿಯಲ್ಲಿ ಸಾವಿರಾರು ಹುದ್ದೆಗಳು ಖಾಲಿಯಿದ್ದು ಆಡಳಿತ ಯಂತ್ರವೇ ಇಲ್ಲಿ ಕುಸಿಯುತ್ತಿದೆ. ಇದರ ಜೊತೆಗೆ ಜಿಲ್ಲೆಯಲ್ಲಿರುವ ಪಶು ಸಂಗೋಪನಾ ಇಲಾಖೆಯಲ್ಲಿಯೂ ಕೂಡಾ ಸಿಬ್ಬಂದಿಯ ಕೊರತೆಯಿದೆ. ನೂರಕ್ಕೂ ಹೆಚ್ಚು ಹುದ್ದೆಗಳು ಪಶು ಸಂಗೋಪನಾ ಇಲಾಖೆಯಲ್ಲಿ ಖಾಲಿಯಿವೆ.

ಹೀಗಾಗಿ ರೈತರು ತಾವು ಚಿಕಿತ್ಸೆಗೆ ತಂದ ಜಾನುವಾರುಗಳಿಗೆ ಸರಿಯಾಗಿ ಚಿಕಿತ್ಸೆಯೇ ಸಿಗುತ್ತಿಲ್ಲ. ಸಾಮಾನ್ಯವಾಗಿ ಬೇಸಿಗೆಕಾಲ, ಮಳೆಗಾಲದಲ್ಲಿ ಜಾನುವಾರುಗಳಿಗೆ ನಾನಾ ರೋಗಗಳು ಕಾಣಿಸಿಕೊಳ್ಳುತ್ತವೆ. ಅವುಗಳ ಆರೈಕೆ ಮತ್ತು ಚಿಕಿತ್ಸೆಗೆ ಪಶು ಇಲಾಖೆ ಪಾತ್ರ ಬಹಳ ಮುಖ್ಯವಾಗಿದೆ. ಆದರೆ 114 ಆಸ್ಪತ್ರೆಗಳ ಪೈಕಿ ಒಬ್ಬೊಬ್ಬ ವೈದ್ಯರು ತಲಾ ಎರಡು ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ. ಎಮ್ಮೆ, ಆಕಳು, ಕುರಿ, ಮೇಕೆ ಸೇರಿದಂತೆ ಲಕ್ಷಾಂತರ ಜಾನುವಾರುಗಳಿವೆ. ಅವುಗಳ ಚಿಕಿತ್ಸೆಗೆ ತೊಂದರೆಯಾಗುತ್ತಿದೆ.

ಇದರ ಜೊತೆಗೆ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಪಶು ಸಂಗೋಪನಾ ಇಲಾಖೆ ಜಾರಿಗೆ ತರುತ್ತಿರುವ ನಾನಾ ಯೋಜನೆಗಳ ಅನುಷ್ಠಾನ ಕೂಡ ಕಷ್ಟಕರವಾಗುತ್ತಿದೆ. ಇನ್ನು ವಿಶ್ವ ವಿದ್ಯಾಲಯದಲ್ಲಿ ಬೀದರ್ ಸೇರಿದಂತೆ ರಾಜ್ಯದ ಹಲವಾರು ಜಿಲ್ಲೆಯಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಟೀಚಿಂಗ್ ಹುದ್ದೆಗಳೇ ಇಲ್ಲಿ ಖಾಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ಪಾಠಕ್ಕೂ ಕೂಡಾ ತೊಂದರೆಯಾಗುತ್ತಿದೆ. ಹೀಗಾಗಿ ಖಾಲಿ ಇರುವ ಹುದ್ದೆಗಳನ್ನ ಬೇಗ ಭರ್ತಿ ಮಾಡಿ ಎಂದು ಇಲ್ಲಿನ ಜನರು ಸರಕಾರಕ್ಕೆ ವಿನಂತಿಸುತ್ತಿದ್ದಾರೆ.

ಸಿಬ್ಬಂದಿಯ ಕೊರತೆಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ನಾನಾ ಯೋಜನೆಗಳ ಅನುಷ್ಠಾನಕ್ಕೂ ಕೂಡ ಹಿನ್ನಡೆಯಾಗುತ್ತಿದೆ. ವೈದ್ಯರು ಮತ್ತು ಸಿಬ್ಬಂದಿ ಇಲ್ಲದೇ ಬಹುತೇಕ ಚಿಕಿತ್ಸಾಲಯಗಳಿಗೆ ಬೀಗ ಹಾಕಲಾಗಿದೆ. ವಿಶ್ವ ವಿದ್ಯಾಲಯ ಹಾಗೂ ಪಶು ಇಲಾಖೆಯಲ್ಲಿ ಅಗತ್ಯ ವೈದ್ಯರು ಹಾಗೂ ಸಿಬ್ಬಂದಿ ನೇಮಕವಾದರೆ ಇಲಾಖೆ ಕೆಲಸಗಳು ಸರಾಗವಾಗಿ ನಡೆಯಲು ಸಾಧ್ಯವಾಗುತ್ತದೆ.

Published On - 1:39 pm, Wed, 18 October 23

Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
Follow Us