AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?: ಸ್ಕ್ಯಾನಿಂಗ್​​ ವರದಿ ಕಂಡು ರೋಗಿಗೆ ಶಾಕ್​​!

ಬೀದರ್‌ನ ಮನ್ನಾಖೇಳಿ ಆಸ್ಪತ್ರೆ ವೈದ್ಯರೊಬ್ಬರು ಅಪಘಾತಕ್ಕೀಡಾಗಿದ್ದ ರೋಗಿಗೆ ಆಪರೇಷನ್ ಮಾಡದೆಯೇ ರಾಡ್ ಹಾಕಲಾಗಿದೆ ಎಂದು ಸುಳ್ಳು ಹೇಳಿ, 37 ಸಾವಿರ ರೂಪಾಯಿ ಪಡೆದು ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಆಪರೇಷನ್​​ ಆದಮೇಲೂ ಬುಜ ನೋವಾಗುತ್ತಿದ್ದ ಹಿನ್ನೆಲೆ ಸ್ಕ್ಯಾನಿಂಗ್​​ ಮಾಡಿಸಿದಾಗ ಆಪರೇಷನ್ ಮಾಡದೆ ವೈದ್ಯರು ಸುಳ್ಳು ಹೆಳಿರುವುದು ಗೊತ್ತಾಗಿದೆ ಎನ್ನಲಾಗಿದೆ.

ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?: ಸ್ಕ್ಯಾನಿಂಗ್​​ ವರದಿ ಕಂಡು ರೋಗಿಗೆ ಶಾಕ್​​!
ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?Image Credit source: Tv9 Kannada
ಸುರೇಶ್ ನಾಯಕ್
| Edited By: |

Updated on:May 26, 2026 | 2:18 PM

Share

ಬೀದರ್​​, ಮೇ 26: ವೈದ್ಯೋ ನಾರಾಯಣೋ ಹರಿಃ ಅಂದರೆ ವೈದ್ಯನು ಸಾಕ್ಷಾತ್ ಭಗವಂತನ (ನಾರಾಯಣನ) ಸ್ವರೂಪ ಎಂಬ ಮಾತಿದೆ. ಎಂತಹ ಕಷ್ಟ ಕಾಲದಲ್ಲೂ ಮುಷ್ಯನ ಜೀವ ಉಳಿಸಬಹುದಾದ ಶಕ್ತಿ ವೈದ್ಯರಿಗಿರುವ ಕಾರಣ ಅವರಿಗೆ ದೇವರ ಸ್ಥಾನವನ್ನು ನೀಡಲಾಗಿದೆ. ಆದರೆ ಇದೇ ಪವಿತ್ರವಾದ ವೈದ್ಯಕೀಯ ವೃತ್ತಿಯನ್ನು ಇತ್ತೀಚೆಗೆ ಕೆಲವರು ಹಣ ಮಾಡುವ ಉದ್ಯೋಗವನ್ನಾಗಿಸಿಕೊಂಡಿದ್ದಾರೆ. ರೋಗಿಗೆ ಏನಾದರೂ ಪರವಾಗಿಲ್ಲ ನಮಗೆ ದುಡ್ಡಾದರೆ ಸಾಕು ಎಂಬ ಮನಸ್ಥಿತಿಗೆ ತಲುಪಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಎಂಬಂತಹ ಘಟನೆಯೊಂದು ಬೀದರ್​​ನಲ್ಲಿ ನಡೆದಿದೆ.

ಮುಖ್ಯಾಂಶಗಳು

  • ಆಪರೇಷನ್ ಮಾಡದೆ ಮಾಡಿದ್ದೇವೆಂದು ಹೇಳಿ ಹಣ ವಸೂಲಿ?
  • ಮನ್ನಾಖೇಳಿಯ ಆಸ್ಪತ್ರೆಯ ವೈದ್ಯರಿಂದ ನಡೀತಾ ಕಳ್ಳಾಟ?
  • ಆಪರೇಷನ್​​ ಹೆಸರಲ್ಲಿ ಹಣ ಪಡೆದು ವಂಚಿಸಿತಾ ಆಸ್ಪತ್ರೆ?

ಬೀದರ್ ತಾಲೂಕಿನ ‌ಮನ್ನಾಖೇಳಿ ಗ್ರಾಮದಲ್ಲಿರುವ ಸೇಡಂಕರ್ ಆಸ್ಪತ್ರೆ ವೈದ್ಯರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಆಪರೇಷನ್ ಮಾಡದೆ ಮಾಡಿದ್ದೇವೆಂದು ದುಡ್ಡು ಪಡೆದಿದ್ದಾರೆ ಎಂದು ದೂರಲಾಗಿದೆ. ರೋಗಿಗೆ ಕೇವಲ ಬ್ಯಾಂಡೇಜ್​ ಸುತ್ತಿ 37 ಸಾವಿರ ರೂ. ವಸೂಲಿ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಬುಜ ನೋವಾಗುತ್ತಿದೆ ಎಂದು ಸ್ಕ್ಯಾನ್ ಮಾಡಿಸಿದಾಗ ಆಪರೇಷನ್ ಮಾಡದೆ ಇರುವ ವಿಷಯ ಬಹಿರಂಗವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಗಾಂಧಿ ಗ್ರಾಮ ಪುರಸ್ಕೃತ ಪಂಚಾಯತ್​​ ವ್ಯಾಪ್ತಿಯಲ್ಲಿಲ್ಲ ಕನಿಷ್ಠ ಮೂಲಸೌಕರ್ಯ; ಹನಿ ನೀರಿಗೂ ಜನರ ಪರದಾಟ!

ಬೀದರ್ ತಾಲೂಕಿನ ಬಸಲಾಪುರ ಗ್ರಾಮದ ಪ್ರಜ್ವಲ್ ಎಂಬವರ ಬುಜದ ಎಲಬು ರಸ್ತೆ ಅಪಘಾತದಲ್ಲಿ ಮುರಿದಿತ್ತು. ಹೀಗಾಗಿ ಚಿಕಿತ್ಸೆಗೆಂದು ತೆರಳಿದ್ದಾಗ ಆಪರೇಷನ್ ಮಾಡಿ ಮುರಿದಿದ್ದ ಎಲುಬಿಗೆ ರಾಡ್ ಹಾಕಬೇಕು ಎಂದು ವೈದ್ಯರು ತಿಳಿಸಿದ್ದರು. ಅದರಂತೆ 37 ಸಾವಿರ ರೂಪಾಯಿಯನ್ನು ಕಟ್ಟಿಸಿಕೊಂಡಿದ್ದರು. ಆದರೆ ಆಪರೇಷನ್​​ ಮಾಡದೆ ಪ್ರಜ್ವಲ್​​ ಕೈಗೆ ಹಾಗೇ ಬ್ಯಾಂಡೇಜ್​​ ಸುತ್ತಲಾಗಿದೆ. ಆಪರೇಷನ್​​ ಆದಮೇಲೂ ಬುಜ ನೋವಾಗುತ್ತಿದ್ದ ಹಿನ್ನೆಲೆ ಸ್ಕ್ಯಾನಿಂಗ್​​ ಮಾಡಿಸಿದಾಗ ಆಪರೇಷನ್ ಮಾಡದೆ ವೈದ್ಯರು ಸುಳ್ಳು ಹೆಳಿರುವುದು ಗೊತ್ತಾಗಿದೆ. ಮುರಿದಿದ್ದ ಬುಜದ ಎಲುಬು ಹಾಗೇ ಇದೆ ಎನ್ನಲಾಗಿದ್ದು, ವೈದ್ಯರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:17 pm, Tue, 26 May 26

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ