AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?: ಸ್ಕ್ಯಾನಿಂಗ್​​ ವರದಿ ಕಂಡು ರೋಗಿಗೆ ಶಾಕ್​​!

ಬೀದರ್‌ನ ಮನ್ನಾಖೇಳಿ ಆಸ್ಪತ್ರೆ ವೈದ್ಯರೊಬ್ಬರು ಅಪಘಾತಕ್ಕೀಡಾಗಿದ್ದ ರೋಗಿಗೆ ಆಪರೇಷನ್ ಮಾಡದೆಯೇ ರಾಡ್ ಹಾಕಲಾಗಿದೆ ಎಂದು ಸುಳ್ಳು ಹೇಳಿ, 37 ಸಾವಿರ ರೂಪಾಯಿ ಪಡೆದು ವಂಚಿಸಿರುವ ಗಂಭೀರ ಆರೋಪ ಕೇಳಿಬಂದಿದೆ. ಆಪರೇಷನ್​​ ಆದಮೇಲೂ ಬುಜ ನೋವಾಗುತ್ತಿದ್ದ ಹಿನ್ನೆಲೆ ಸ್ಕ್ಯಾನಿಂಗ್​​ ಮಾಡಿಸಿದಾಗ ಆಪರೇಷನ್ ಮಾಡದೆ ವೈದ್ಯರು ಸುಳ್ಳು ಹೆಳಿರುವುದು ಗೊತ್ತಾಗಿದೆ ಎನ್ನಲಾಗಿದೆ.

ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?: ಸ್ಕ್ಯಾನಿಂಗ್​​ ವರದಿ ಕಂಡು ರೋಗಿಗೆ ಶಾಕ್​​!
ಆಪರೇಷನ್ ಮಾಡದೆ ಸುಳ್ಳು ಹೇಳಿ ಹಣ ಪೀಕಿದ ವೈದ್ಯ?Image Credit source: Tv9 Kannada
ಸುರೇಶ್ ನಾಯಕ್
| Edited By: |

Updated on:May 26, 2026 | 2:18 PM

Share

ಬೀದರ್​​, ಮೇ 26: ವೈದ್ಯೋ ನಾರಾಯಣೋ ಹರಿಃ ಅಂದರೆ ವೈದ್ಯನು ಸಾಕ್ಷಾತ್ ಭಗವಂತನ (ನಾರಾಯಣನ) ಸ್ವರೂಪ ಎಂಬ ಮಾತಿದೆ. ಎಂತಹ ಕಷ್ಟ ಕಾಲದಲ್ಲೂ ಮುಷ್ಯನ ಜೀವ ಉಳಿಸಬಹುದಾದ ಶಕ್ತಿ ವೈದ್ಯರಿಗಿರುವ ಕಾರಣ ಅವರಿಗೆ ದೇವರ ಸ್ಥಾನವನ್ನು ನೀಡಲಾಗಿದೆ. ಆದರೆ ಇದೇ ಪವಿತ್ರವಾದ ವೈದ್ಯಕೀಯ ವೃತ್ತಿಯನ್ನು ಇತ್ತೀಚೆಗೆ ಕೆಲವರು ಹಣ ಮಾಡುವ ಉದ್ಯೋಗವನ್ನಾಗಿಸಿಕೊಂಡಿದ್ದಾರೆ. ರೋಗಿಗೆ ಏನಾದರೂ ಪರವಾಗಿಲ್ಲ ನಮಗೆ ದುಡ್ಡಾದರೆ ಸಾಕು ಎಂಬ ಮನಸ್ಥಿತಿಗೆ ತಲುಪಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಎಂಬಂತಹ ಘಟನೆಯೊಂದು ಬೀದರ್​​ನಲ್ಲಿ ನಡೆದಿದೆ.

ಮುಖ್ಯಾಂಶಗಳು

  • ಆಪರೇಷನ್ ಮಾಡದೆ ಮಾಡಿದ್ದೇವೆಂದು ಹೇಳಿ ಹಣ ವಸೂಲಿ?
  • ಮನ್ನಾಖೇಳಿಯ ಆಸ್ಪತ್ರೆಯ ವೈದ್ಯರಿಂದ ನಡೀತಾ ಕಳ್ಳಾಟ?
  • ಆಪರೇಷನ್​​ ಹೆಸರಲ್ಲಿ ಹಣ ಪಡೆದು ವಂಚಿಸಿತಾ ಆಸ್ಪತ್ರೆ?

ಬೀದರ್ ತಾಲೂಕಿನ ‌ಮನ್ನಾಖೇಳಿ ಗ್ರಾಮದಲ್ಲಿರುವ ಸೇಡಂಕರ್ ಆಸ್ಪತ್ರೆ ವೈದ್ಯರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಆಪರೇಷನ್ ಮಾಡದೆ ಮಾಡಿದ್ದೇವೆಂದು ದುಡ್ಡು ಪಡೆದಿದ್ದಾರೆ ಎಂದು ದೂರಲಾಗಿದೆ. ರೋಗಿಗೆ ಕೇವಲ ಬ್ಯಾಂಡೇಜ್​ ಸುತ್ತಿ 37 ಸಾವಿರ ರೂ. ವಸೂಲಿ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಬುಜ ನೋವಾಗುತ್ತಿದೆ ಎಂದು ಸ್ಕ್ಯಾನ್ ಮಾಡಿಸಿದಾಗ ಆಪರೇಷನ್ ಮಾಡದೆ ಇರುವ ವಿಷಯ ಬಹಿರಂಗವಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಗಾಂಧಿ ಗ್ರಾಮ ಪುರಸ್ಕೃತ ಪಂಚಾಯತ್​​ ವ್ಯಾಪ್ತಿಯಲ್ಲಿಲ್ಲ ಕನಿಷ್ಠ ಮೂಲಸೌಕರ್ಯ; ಹನಿ ನೀರಿಗೂ ಜನರ ಪರದಾಟ!

ಬೀದರ್ ತಾಲೂಕಿನ ಬಸಲಾಪುರ ಗ್ರಾಮದ ಪ್ರಜ್ವಲ್ ಎಂಬವರ ಬುಜದ ಎಲಬು ರಸ್ತೆ ಅಪಘಾತದಲ್ಲಿ ಮುರಿದಿತ್ತು. ಹೀಗಾಗಿ ಚಿಕಿತ್ಸೆಗೆಂದು ತೆರಳಿದ್ದಾಗ ಆಪರೇಷನ್ ಮಾಡಿ ಮುರಿದಿದ್ದ ಎಲುಬಿಗೆ ರಾಡ್ ಹಾಕಬೇಕು ಎಂದು ವೈದ್ಯರು ತಿಳಿಸಿದ್ದರು. ಅದರಂತೆ 37 ಸಾವಿರ ರೂಪಾಯಿಯನ್ನು ಕಟ್ಟಿಸಿಕೊಂಡಿದ್ದರು. ಆದರೆ ಆಪರೇಷನ್​​ ಮಾಡದೆ ಪ್ರಜ್ವಲ್​​ ಕೈಗೆ ಹಾಗೇ ಬ್ಯಾಂಡೇಜ್​​ ಸುತ್ತಲಾಗಿದೆ. ಆಪರೇಷನ್​​ ಆದಮೇಲೂ ಬುಜ ನೋವಾಗುತ್ತಿದ್ದ ಹಿನ್ನೆಲೆ ಸ್ಕ್ಯಾನಿಂಗ್​​ ಮಾಡಿಸಿದಾಗ ಆಪರೇಷನ್ ಮಾಡದೆ ವೈದ್ಯರು ಸುಳ್ಳು ಹೆಳಿರುವುದು ಗೊತ್ತಾಗಿದೆ. ಮುರಿದಿದ್ದ ಬುಜದ ಎಲುಬು ಹಾಗೇ ಇದೆ ಎನ್ನಲಾಗಿದ್ದು, ವೈದ್ಯರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:17 pm, Tue, 26 May 26

Follow Us
ಸುರೇಶ್ ನಾಯಕ್
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಮೇಲ್ಛಾವಣಿ ಕುಸಿತದಿಂದ ಜೀವ ಭಯದಲ್ಲೇ ಸರ್ಕಾರಿ ಶಾಲೆಗೆ ಬರುತ್ತಿರುವ ಮಕ್ಕಳು
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಸೋಲುವ ಪಂದ್ಯವನ್ನು ಟೈ ಮಾಡಿ, ಆಮೇಲೆ ಸೋತ ಟೀಮ್ ಇಂಡಿಯಾ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ