AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್! ಸ್ವೆಟ್ಟರ್‌, ಜರ್ಕಿನ್‌ ಹಾಕಿಯೂ ನಡುಗುತ್ತಿರುವ ಜನ

ತಂಪಾದ ವಾತಾವರಣ.. ಮಂಜಿನ ಮುಸುಕು ಸಿಟಿಗೆ ಮುತ್ತಿಕ್ಕುತ್ತಿದೆ. ಚುಮು ಚುಮು ಚಳಿ ಮೈ ಕೊರೆಯುತ್ತಿದೆ. ತಣ್ಣನೆಯ ತಂಗಾಳಿ ಮಧ್ಯೆ ಸೂರ್ಯರಶ್ಮಿ ಬಿಸಿ ತಟ್ಟುತ್ತಿದ್ರೆ ಸ್ವರ್ಗವೋ ಸ್ವರ್ಗ..

ಬಿರುಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್! ಸ್ವೆಟ್ಟರ್‌, ಜರ್ಕಿನ್‌ ಹಾಕಿಯೂ ನಡುಗುತ್ತಿರುವ ಜನ
ಬಿರುಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್! ಸ್ವೆಟ್ಟರ್‌, ಜರ್ಕಿನ್‌ ಹಾಕಿಯೂ ನಡುಗುತ್ತಿರುವ ಜನ
TV9 Web
| Edited By: |

Updated on:Dec 24, 2021 | 1:30 PM

Share

ಬೀದರ್: ಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್ ಆಗಿದೆ. ಮುಂಜಾನೆಯ ಮಂಜಿನ ಮುಸುಕು, ತಣ್ಣನೆಯ ಗಾಳಿ ಜನರ ಜೀವನ ಶೈಲಿಯನ್ನೇ ಬದಲಿಸಿದೆ. ಹೌದು.. ಬೀದರ್ನಲ್ಲಿ ಹೆಚ್ಚಿನ ಪ್ರಮಾಣದ ಚಳಿ ದಾಖಲಾಗಿದೆ. ಕಳೆದ 3 ದಿನದಿಂದ 8 ರಿಂದ 9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಜನರು ಗಢಗಢ ನಡುಗುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಾದ್ರೂ ಸೂರ್ಯನ ಬಿಸಿಲೇ ಬೀಳ್ತಿಲ್ಲ. ಸಂಜೆ 5.30ಆಗ್ತಿದ್ದಂತೆ ಮೋಡಗಳಲ್ಲಿ ಸೂರ್ಯ ಮರೆಯಾಗಿ ಚಳಿ ಶುರುವಾಗಿ ಬಿಡುತ್ತೆ. ಬೆಳಗಿನ ಜಾವ ಮಂಜು ಕವಿದ ವಾತಾವರಣ ಆವರಿಸುತ್ತೆ. ಈ ವಾತಾವರಣ ಪ್ರವಾಸಿಗರನ್ನು ಆಕರ್ಷಿಸುತ್ತಿದ್ರೆ, ಸ್ಥಳೀಯರಿಗೆ ಸ್ವಲ್ಪ ಕಿರಿಕಿರಿ ಅನ್ನಿಸುತ್ತಿದೆ.

ಚಳಿಯಿಂದ ಬಚಾವ್ ಆಗಲು ಜನರು ಬೆಂಕಿ ಕಾಯಿಸಿಕೊಳ್ತಿದ್ದಾರೆ. ಇನ್ ಕೆಲವರು ಸ್ವೆಟರ್ನಂತಹ ಉಡುಪುಗಳ ಮೊರೆ ಹೋಗಿದ್ದಾರೆ. ಸ್ವೆಟ್ಟರ್‌, ಜರ್ಕಿನ್‌ ಹಾಕ್ಕೊಂಡು ವಾಕಿಂಗ್, ಜಾಗಿಂಗ್ ಮಾಡ್ಬೇಕಾಗಿದೆ. ಇಂತಹ ಕೂಲ್ ವಾತಾವರಣದಿಂದ ಮಕ್ಕಳು ಹಾಗೂ ವೃದ್ಧರು ಹುಷಾರಾಗಿರಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಅಂತಾ ಹವಾಮಾನ ಇಲಾಖೆ ತಜ್ಞರು ಮುನ್ನೆಚ್ಚರಿಕೆ ನೀಡ್ತಿದ್ದಾರೆ.

ಸದ್ಯ 8 ಡಿಗ್ರಿ ಇರುವ ತಾಪಮಾನ ಜನವರಿ ಮೊದಲ ವಾರದಲ್ಲಿ ಕನಿಷ್ಠ 5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಲಿದ್ಯಂತೆ.. ಆಗ ಬೀದರ್ ಇನ್ನೂ ಕೂಲ್ ಕೂಲ್ ಆಗಿರಲಿದೆ. ಯಾವುದಕ್ಕೂ ಜನರು ಎಚ್ಚರಿಕೆಯಿಂದ ಇರೋದು ಒಳ್ಳೇದು.

ವರದಿ: ಸುರೇಶ್, ಟಿವಿ9 ಬೀದರ್. Bidar Cold city

ಇದನ್ನೂ ಓದಿ: Badava Rascal: ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಮೊದಲಾರ್ಧ ಹೇಗಿದೆ? ಇಲ್ಲಿದೆ ರಿಪೋರ್ಟ್​

Published On - 12:31 pm, Fri, 24 December 21

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ