AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್! ಸ್ವೆಟ್ಟರ್‌, ಜರ್ಕಿನ್‌ ಹಾಕಿಯೂ ನಡುಗುತ್ತಿರುವ ಜನ

ತಂಪಾದ ವಾತಾವರಣ.. ಮಂಜಿನ ಮುಸುಕು ಸಿಟಿಗೆ ಮುತ್ತಿಕ್ಕುತ್ತಿದೆ. ಚುಮು ಚುಮು ಚಳಿ ಮೈ ಕೊರೆಯುತ್ತಿದೆ. ತಣ್ಣನೆಯ ತಂಗಾಳಿ ಮಧ್ಯೆ ಸೂರ್ಯರಶ್ಮಿ ಬಿಸಿ ತಟ್ಟುತ್ತಿದ್ರೆ ಸ್ವರ್ಗವೋ ಸ್ವರ್ಗ..

ಬಿರುಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್! ಸ್ವೆಟ್ಟರ್‌, ಜರ್ಕಿನ್‌ ಹಾಕಿಯೂ ನಡುಗುತ್ತಿರುವ ಜನ
ಬಿರುಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್! ಸ್ವೆಟ್ಟರ್‌, ಜರ್ಕಿನ್‌ ಹಾಕಿಯೂ ನಡುಗುತ್ತಿರುವ ಜನ
TV9 Web
| Updated By: ಆಯೇಷಾ ಬಾನು|

Updated on:Dec 24, 2021 | 1:30 PM

Share

ಬೀದರ್: ಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್ ಆಗಿದೆ. ಮುಂಜಾನೆಯ ಮಂಜಿನ ಮುಸುಕು, ತಣ್ಣನೆಯ ಗಾಳಿ ಜನರ ಜೀವನ ಶೈಲಿಯನ್ನೇ ಬದಲಿಸಿದೆ. ಹೌದು.. ಬೀದರ್ನಲ್ಲಿ ಹೆಚ್ಚಿನ ಪ್ರಮಾಣದ ಚಳಿ ದಾಖಲಾಗಿದೆ. ಕಳೆದ 3 ದಿನದಿಂದ 8 ರಿಂದ 9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಜನರು ಗಢಗಢ ನಡುಗುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಾದ್ರೂ ಸೂರ್ಯನ ಬಿಸಿಲೇ ಬೀಳ್ತಿಲ್ಲ. ಸಂಜೆ 5.30ಆಗ್ತಿದ್ದಂತೆ ಮೋಡಗಳಲ್ಲಿ ಸೂರ್ಯ ಮರೆಯಾಗಿ ಚಳಿ ಶುರುವಾಗಿ ಬಿಡುತ್ತೆ. ಬೆಳಗಿನ ಜಾವ ಮಂಜು ಕವಿದ ವಾತಾವರಣ ಆವರಿಸುತ್ತೆ. ಈ ವಾತಾವರಣ ಪ್ರವಾಸಿಗರನ್ನು ಆಕರ್ಷಿಸುತ್ತಿದ್ರೆ, ಸ್ಥಳೀಯರಿಗೆ ಸ್ವಲ್ಪ ಕಿರಿಕಿರಿ ಅನ್ನಿಸುತ್ತಿದೆ.

ಚಳಿಯಿಂದ ಬಚಾವ್ ಆಗಲು ಜನರು ಬೆಂಕಿ ಕಾಯಿಸಿಕೊಳ್ತಿದ್ದಾರೆ. ಇನ್ ಕೆಲವರು ಸ್ವೆಟರ್ನಂತಹ ಉಡುಪುಗಳ ಮೊರೆ ಹೋಗಿದ್ದಾರೆ. ಸ್ವೆಟ್ಟರ್‌, ಜರ್ಕಿನ್‌ ಹಾಕ್ಕೊಂಡು ವಾಕಿಂಗ್, ಜಾಗಿಂಗ್ ಮಾಡ್ಬೇಕಾಗಿದೆ. ಇಂತಹ ಕೂಲ್ ವಾತಾವರಣದಿಂದ ಮಕ್ಕಳು ಹಾಗೂ ವೃದ್ಧರು ಹುಷಾರಾಗಿರಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಅಂತಾ ಹವಾಮಾನ ಇಲಾಖೆ ತಜ್ಞರು ಮುನ್ನೆಚ್ಚರಿಕೆ ನೀಡ್ತಿದ್ದಾರೆ.

ಸದ್ಯ 8 ಡಿಗ್ರಿ ಇರುವ ತಾಪಮಾನ ಜನವರಿ ಮೊದಲ ವಾರದಲ್ಲಿ ಕನಿಷ್ಠ 5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಲಿದ್ಯಂತೆ.. ಆಗ ಬೀದರ್ ಇನ್ನೂ ಕೂಲ್ ಕೂಲ್ ಆಗಿರಲಿದೆ. ಯಾವುದಕ್ಕೂ ಜನರು ಎಚ್ಚರಿಕೆಯಿಂದ ಇರೋದು ಒಳ್ಳೇದು.

ವರದಿ: ಸುರೇಶ್, ಟಿವಿ9 ಬೀದರ್. Bidar Cold city

ಇದನ್ನೂ ಓದಿ: Badava Rascal: ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಮೊದಲಾರ್ಧ ಹೇಗಿದೆ? ಇಲ್ಲಿದೆ ರಿಪೋರ್ಟ್​

Published On - 12:31 pm, Fri, 24 December 21

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ