AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್! ಸ್ವೆಟ್ಟರ್‌, ಜರ್ಕಿನ್‌ ಹಾಕಿಯೂ ನಡುಗುತ್ತಿರುವ ಜನ

ತಂಪಾದ ವಾತಾವರಣ.. ಮಂಜಿನ ಮುಸುಕು ಸಿಟಿಗೆ ಮುತ್ತಿಕ್ಕುತ್ತಿದೆ. ಚುಮು ಚುಮು ಚಳಿ ಮೈ ಕೊರೆಯುತ್ತಿದೆ. ತಣ್ಣನೆಯ ತಂಗಾಳಿ ಮಧ್ಯೆ ಸೂರ್ಯರಶ್ಮಿ ಬಿಸಿ ತಟ್ಟುತ್ತಿದ್ರೆ ಸ್ವರ್ಗವೋ ಸ್ವರ್ಗ..

ಬಿರುಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್! ಸ್ವೆಟ್ಟರ್‌, ಜರ್ಕಿನ್‌ ಹಾಕಿಯೂ ನಡುಗುತ್ತಿರುವ ಜನ
ಬಿರುಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್! ಸ್ವೆಟ್ಟರ್‌, ಜರ್ಕಿನ್‌ ಹಾಕಿಯೂ ನಡುಗುತ್ತಿರುವ ಜನ
TV9 Web
| Edited By: |

Updated on:Dec 24, 2021 | 1:30 PM

Share

ಬೀದರ್: ಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್ ಆಗಿದೆ. ಮುಂಜಾನೆಯ ಮಂಜಿನ ಮುಸುಕು, ತಣ್ಣನೆಯ ಗಾಳಿ ಜನರ ಜೀವನ ಶೈಲಿಯನ್ನೇ ಬದಲಿಸಿದೆ. ಹೌದು.. ಬೀದರ್ನಲ್ಲಿ ಹೆಚ್ಚಿನ ಪ್ರಮಾಣದ ಚಳಿ ದಾಖಲಾಗಿದೆ. ಕಳೆದ 3 ದಿನದಿಂದ 8 ರಿಂದ 9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಜನರು ಗಢಗಢ ನಡುಗುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಾದ್ರೂ ಸೂರ್ಯನ ಬಿಸಿಲೇ ಬೀಳ್ತಿಲ್ಲ. ಸಂಜೆ 5.30ಆಗ್ತಿದ್ದಂತೆ ಮೋಡಗಳಲ್ಲಿ ಸೂರ್ಯ ಮರೆಯಾಗಿ ಚಳಿ ಶುರುವಾಗಿ ಬಿಡುತ್ತೆ. ಬೆಳಗಿನ ಜಾವ ಮಂಜು ಕವಿದ ವಾತಾವರಣ ಆವರಿಸುತ್ತೆ. ಈ ವಾತಾವರಣ ಪ್ರವಾಸಿಗರನ್ನು ಆಕರ್ಷಿಸುತ್ತಿದ್ರೆ, ಸ್ಥಳೀಯರಿಗೆ ಸ್ವಲ್ಪ ಕಿರಿಕಿರಿ ಅನ್ನಿಸುತ್ತಿದೆ.

ಚಳಿಯಿಂದ ಬಚಾವ್ ಆಗಲು ಜನರು ಬೆಂಕಿ ಕಾಯಿಸಿಕೊಳ್ತಿದ್ದಾರೆ. ಇನ್ ಕೆಲವರು ಸ್ವೆಟರ್ನಂತಹ ಉಡುಪುಗಳ ಮೊರೆ ಹೋಗಿದ್ದಾರೆ. ಸ್ವೆಟ್ಟರ್‌, ಜರ್ಕಿನ್‌ ಹಾಕ್ಕೊಂಡು ವಾಕಿಂಗ್, ಜಾಗಿಂಗ್ ಮಾಡ್ಬೇಕಾಗಿದೆ. ಇಂತಹ ಕೂಲ್ ವಾತಾವರಣದಿಂದ ಮಕ್ಕಳು ಹಾಗೂ ವೃದ್ಧರು ಹುಷಾರಾಗಿರಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಅಂತಾ ಹವಾಮಾನ ಇಲಾಖೆ ತಜ್ಞರು ಮುನ್ನೆಚ್ಚರಿಕೆ ನೀಡ್ತಿದ್ದಾರೆ.

ಸದ್ಯ 8 ಡಿಗ್ರಿ ಇರುವ ತಾಪಮಾನ ಜನವರಿ ಮೊದಲ ವಾರದಲ್ಲಿ ಕನಿಷ್ಠ 5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಲಿದ್ಯಂತೆ.. ಆಗ ಬೀದರ್ ಇನ್ನೂ ಕೂಲ್ ಕೂಲ್ ಆಗಿರಲಿದೆ. ಯಾವುದಕ್ಕೂ ಜನರು ಎಚ್ಚರಿಕೆಯಿಂದ ಇರೋದು ಒಳ್ಳೇದು.

ವರದಿ: ಸುರೇಶ್, ಟಿವಿ9 ಬೀದರ್. Bidar Cold city

ಇದನ್ನೂ ಓದಿ: Badava Rascal: ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಮೊದಲಾರ್ಧ ಹೇಗಿದೆ? ಇಲ್ಲಿದೆ ರಿಪೋರ್ಟ್​

Published On - 12:31 pm, Fri, 24 December 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ