AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿರುಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್! ಸ್ವೆಟ್ಟರ್‌, ಜರ್ಕಿನ್‌ ಹಾಕಿಯೂ ನಡುಗುತ್ತಿರುವ ಜನ

ತಂಪಾದ ವಾತಾವರಣ.. ಮಂಜಿನ ಮುಸುಕು ಸಿಟಿಗೆ ಮುತ್ತಿಕ್ಕುತ್ತಿದೆ. ಚುಮು ಚುಮು ಚಳಿ ಮೈ ಕೊರೆಯುತ್ತಿದೆ. ತಣ್ಣನೆಯ ತಂಗಾಳಿ ಮಧ್ಯೆ ಸೂರ್ಯರಶ್ಮಿ ಬಿಸಿ ತಟ್ಟುತ್ತಿದ್ರೆ ಸ್ವರ್ಗವೋ ಸ್ವರ್ಗ..

ಬಿರುಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್! ಸ್ವೆಟ್ಟರ್‌, ಜರ್ಕಿನ್‌ ಹಾಕಿಯೂ ನಡುಗುತ್ತಿರುವ ಜನ
ಬಿರುಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್! ಸ್ವೆಟ್ಟರ್‌, ಜರ್ಕಿನ್‌ ಹಾಕಿಯೂ ನಡುಗುತ್ತಿರುವ ಜನ
TV9 Web
| Updated By: ಆಯೇಷಾ ಬಾನು|

Updated on:Dec 24, 2021 | 1:30 PM

Share

ಬೀದರ್: ಬಿಸಿಲಿಗೆ ಕುಖ್ಯಾತಿಯಾದ ಬೀದರ್ ಜಿಲ್ಲೆ ಈಗ ಕೂಲ್ ಕೂಲ್ ಆಗಿದೆ. ಮುಂಜಾನೆಯ ಮಂಜಿನ ಮುಸುಕು, ತಣ್ಣನೆಯ ಗಾಳಿ ಜನರ ಜೀವನ ಶೈಲಿಯನ್ನೇ ಬದಲಿಸಿದೆ. ಹೌದು.. ಬೀದರ್ನಲ್ಲಿ ಹೆಚ್ಚಿನ ಪ್ರಮಾಣದ ಚಳಿ ದಾಖಲಾಗಿದೆ. ಕಳೆದ 3 ದಿನದಿಂದ 8 ರಿಂದ 9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಜನರು ಗಢಗಢ ನಡುಗುತ್ತಿದ್ದಾರೆ. ಬೆಳಗ್ಗೆ 7 ಗಂಟೆಯಾದ್ರೂ ಸೂರ್ಯನ ಬಿಸಿಲೇ ಬೀಳ್ತಿಲ್ಲ. ಸಂಜೆ 5.30ಆಗ್ತಿದ್ದಂತೆ ಮೋಡಗಳಲ್ಲಿ ಸೂರ್ಯ ಮರೆಯಾಗಿ ಚಳಿ ಶುರುವಾಗಿ ಬಿಡುತ್ತೆ. ಬೆಳಗಿನ ಜಾವ ಮಂಜು ಕವಿದ ವಾತಾವರಣ ಆವರಿಸುತ್ತೆ. ಈ ವಾತಾವರಣ ಪ್ರವಾಸಿಗರನ್ನು ಆಕರ್ಷಿಸುತ್ತಿದ್ರೆ, ಸ್ಥಳೀಯರಿಗೆ ಸ್ವಲ್ಪ ಕಿರಿಕಿರಿ ಅನ್ನಿಸುತ್ತಿದೆ.

ಚಳಿಯಿಂದ ಬಚಾವ್ ಆಗಲು ಜನರು ಬೆಂಕಿ ಕಾಯಿಸಿಕೊಳ್ತಿದ್ದಾರೆ. ಇನ್ ಕೆಲವರು ಸ್ವೆಟರ್ನಂತಹ ಉಡುಪುಗಳ ಮೊರೆ ಹೋಗಿದ್ದಾರೆ. ಸ್ವೆಟ್ಟರ್‌, ಜರ್ಕಿನ್‌ ಹಾಕ್ಕೊಂಡು ವಾಕಿಂಗ್, ಜಾಗಿಂಗ್ ಮಾಡ್ಬೇಕಾಗಿದೆ. ಇಂತಹ ಕೂಲ್ ವಾತಾವರಣದಿಂದ ಮಕ್ಕಳು ಹಾಗೂ ವೃದ್ಧರು ಹುಷಾರಾಗಿರಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಅಂತಾ ಹವಾಮಾನ ಇಲಾಖೆ ತಜ್ಞರು ಮುನ್ನೆಚ್ಚರಿಕೆ ನೀಡ್ತಿದ್ದಾರೆ.

ಸದ್ಯ 8 ಡಿಗ್ರಿ ಇರುವ ತಾಪಮಾನ ಜನವರಿ ಮೊದಲ ವಾರದಲ್ಲಿ ಕನಿಷ್ಠ 5 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಲಿದ್ಯಂತೆ.. ಆಗ ಬೀದರ್ ಇನ್ನೂ ಕೂಲ್ ಕೂಲ್ ಆಗಿರಲಿದೆ. ಯಾವುದಕ್ಕೂ ಜನರು ಎಚ್ಚರಿಕೆಯಿಂದ ಇರೋದು ಒಳ್ಳೇದು.

ವರದಿ: ಸುರೇಶ್, ಟಿವಿ9 ಬೀದರ್. Bidar Cold city

ಇದನ್ನೂ ಓದಿ: Badava Rascal: ಧನಂಜಯ​ ನಟನೆಯ ‘ಬಡವ ರಾಸ್ಕಲ್​’ ಮೊದಲಾರ್ಧ ಹೇಗಿದೆ? ಇಲ್ಲಿದೆ ರಿಪೋರ್ಟ್​

Published On - 12:31 pm, Fri, 24 December 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ