AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್ ಮದರಸಾದಲ್ಲಿ ಪೂಜೆ ಮಾಡಿದ 9 ಮಂದಿಯ ವಿರುದ್ಧ ಪ್ರಕರಣ, ನಾಲ್ವರ ಬಂಧನ: ಪ್ರತಿಭಟನೆ ನಿರ್ಧಾರ ಕೈಬಿಟ್ಟ ಮುಸ್ಲಿಮರು

ಘಟನೆ ಖಂಡಿಸಿ ಮುಸ್ಲಿಮರು ಪ್ರತಿಭಟನೆಗೆ ಮುಂದಾಗಿದ್ದರು. ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ ನಂತರ ಪ್ರತಿಭಟನೆ ನಿರ್ಧಾರ ಹಿಂಪಡೆದರು.

ಬೀದರ್ ಮದರಸಾದಲ್ಲಿ ಪೂಜೆ ಮಾಡಿದ 9 ಮಂದಿಯ ವಿರುದ್ಧ ಪ್ರಕರಣ, ನಾಲ್ವರ ಬಂಧನ: ಪ್ರತಿಭಟನೆ ನಿರ್ಧಾರ ಕೈಬಿಟ್ಟ ಮುಸ್ಲಿಮರು
ಬೀದರ್​ನ ಮೊಹಮದ್ ಗವಾನ್ ಮದರಸಾ ಪ್ರವೇಶಿಸುತ್ತಿರುವ ದೃಶ್ಯ
TV9 Web
| Edited By: |

Updated on:Oct 07, 2022 | 12:57 PM

Share

ಬೀದರ್: ಪುರಾತತ್ವ ಇಲಾಖೆ ಸಂರಕ್ಷಣೆಯಲ್ಲಿರುವ ನಗರದ ಪಾರಂಪರಿಕ ಕಟ್ಟಡ ಮೊಹಮದ್ ಗವಾನ್ ಯೂನಿವರ್ಸಿಟಿ (ಮದರಸಾ) ಹಿಂದೂಗಳು ಪೂಜೆ ನಡೆಸಿ, ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣೆಯ ಪೊಲೀಸರು 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ನಾಲ್ವರನ್ನು ಬಂಧಿಸಿದ್ದಾರೆ. ಮುನ್ನಾ, ನರೇಶ್, ಯಲ್ಲಾಲಿಂಗ, ಪ್ರಕಾಶ್ ಬಂಧಿತರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮಹಮ್ಮದ್ ಗವಾನ್ ಯುನಿವರ್ಸಿಟಿ ಮುಂದೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: ಬೀದರ್​ನಲ್ಲಿ ಪಾರಂಪರಿಕ ಮದರಸಾಗೆ ನುಗ್ಗಿ ದುರ್ಗಾ ಪೂಜೆ ನೆರವೇರಿಸಿದ ಗುಂಪು

ದಸರಾ ಹಬ್ಬದ ಹಿನ್ನೆಲೆಯಲ್ಲಿ ಭವಾನಿ ಮಾತೆಯ ಪಲ್ಲಕಿ ಮೆರವಣಿಗೆ ನಡೆಸುತ್ತಿದ್ದ ಗುಂಪು ಏಕಾಏಕಿ ಮೊಹಮದ್ ಗವಾನ್ ಯುನಿವರ್ಸಿಟಿಗೆ ತೆರಳಿ ಪೂಜೆ ನಡೆಸಿತು. ಪೂಜೆ ವೇಳೆ ಭಾರತ ಮಾತಾಕಿ ಜೈ, ಹಿಂದೂ ಧರ್ಮಕ್ಕಿ ಜೈ ಎಂದು ಕೂಗಿದ ಹಿಂದೂ ಯುವಕರು ಘೋಷಣೆ ಕೂಗಿದ್ದರು. ಅನುಮತಿ ಇಲ್ಲದೆ ಮದರಸಾಕ್ಕೆ ನುಗ್ಗಿದ್ದನ್ನು ಪ್ರಶ್ನಿಸಿ ಮುಸ್ಲಿಂ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಯಾರನ್ನೂ ಬಂಧಿಸದ ಹಿನ್ನೆಲೆಯಲ್ಲಿ ಸ್ಥಳೀಯ ಮುಸ್ಲಿಮರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆಗೆ ಮುಂದಾಗಿದ್ದರು. ನಾಲ್ವರು ಆರೋಪಿಗಳನ್ನು ಬಂಧಿಸಿದ ನಂತರ ಪ್ರತಿಭಟನೆ ನಿರ್ಧಾರ ಹಿಂಪಡೆದರು.

ದಸರಾ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ 9 ಗಂಟೆ ವೇಳೆಯಲ್ಲಿ ಐತಿಹಾಸಿಕ ಬೀದರ್ ಕೋಟೆಯ ಒಳಗಿರುವ ಒಳಕೋಟೆ ಗ್ರಾಮಸ್ಥರು ಭವಾನಿ ದೇವಿಯ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ರಾತ್ರಿ 9 ಗಂಟೆ ಸುಮಾರಿಗೆ ಮದರಸಾ ಪ್ರವೇಶಿಸಿ ಪೂಜೆ ಮಾಡಿದ್ದರು. ಈ ವಿಷಯ ಮುಸ್ಲಿಂ ‌ಮುಖಂಡರ ಗಮನಕ್ಕೆ ಬಂದ ನಂತರ ನಗರದ ಎಲ್ಲ ಮುಸ್ಲಿಮ್ ಪ್ರಮುಖರು ಮದರಸಾದಲ್ಲಿ ಸಭೆ ನಡೆಸಿದರು. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ದೂರು ನೀಡಲು ತೀರ್ಮಾನಿಸಿದರು. ಅದರಂತೆ ಮೊಹಮದ್ ಷಫಿಯುದ್ದೀನ್ ಎನ್ನುವವರು 9 ಜನರ ವಿರುದ್ಧ ನಗರ ಪೊಲೀಸ್ ‌ಠಾಣೆಗೆ ದೂರು ನೀಡಿದರು.

ಘಟನೆ ಕುರಿತು ಹೈದರಾಬಾದ್​ನ ರಾಜಕೀಯ ನಾಯಕ ಅಸಾದುದ್ದೀನ್ ಓವೈಸಿ ಟ್ವೀಟ್ ಮಾಡಿದ ನಂತರ ಈ ಪ್ರಕರಣವು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಯಿತು. ದೂರು ಆಧರಿಸಿ, ರಾತ್ರಿ 10 ಗಂಟೆ ಸುಮಾರಿಗೆ ಪೊಲೀಸರು ನಾಲ್ವರನ್ನು ಬಂಧಿಸಿದರು. ದಸರಾ ಹಬ್ಬದ ಪ್ರಯುಕ್ತ ಕಾಳಿಕಾಮಾತೆ ಪಲ್ಲಕ್ಕಿ ಮೆರವಣಿಗೆ ನಡೆಸಿದ್ದ ಸ್ಥಳೀಯರು ಮಸೀದಿಯಲ್ಲಿ ಕಾಯಿ ಒಡೆದು, ಕುಂಕುಮ ಹಚ್ಚಿದ್ದರು. ಪೊಲೀಸರು ಸಕಾಲದಲ್ಲಿ ಮಧ್ಯಪ್ರವೇಶಿಸಿ ಕ್ರಮ ಜರುಗಿಸಿದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂತು.

Published On - 12:51 pm, Fri, 7 October 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್