AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈರುಳ್ಳಿ ಬೀಜ ಮಾರಾಟ ಮಾಡಿ ಕೋಟ್ಯಂತರ ರೂ ಆದಾಯ ಗಳಿಸಿದ ಬೀದರ್​ನ ರೈತ

ಬೀದರ್‌ನ ಹುಮ್ನಾಬಾದ್ ತಾಲೂಕಿನ ರೈತ 40 ಎಕರೆಯಲ್ಲಿ ಈರುಳ್ಳಿ ಬೀಜೋತ್ಪಾದನೆ ಮಾಡಿ ಐದು ತಿಂಗಳಲ್ಲಿ ಕೋಟ್ಯಂತರ ರೂಪಾಯಿ ಲಾಭ ಗಳಿಸಿದ್ದಾರೆ. ಕಿಂಟಾಲ್‌ಗೆ 50 ಸಾವಿರ ರೂ ಗೆ ಮಾರಾಟ ಮಾಡುವ ಮೂಲಕ ಅವರು ಭರ್ಜರಿ ಲಾಭ ಗಳಿಸುತ್ತಿದ್ದಾರೆ. ಅವರ ಉತ್ತಮ ಗುಣಮಟ್ಟದ ಬೀಜಕ್ಕೆ ರಾಜ್ಯದಾದ್ಯಂತ ಬೇಡಿಕೆಯಿದೆ.

ಈರುಳ್ಳಿ ಬೀಜ ಮಾರಾಟ ಮಾಡಿ ಕೋಟ್ಯಂತರ ರೂ ಆದಾಯ ಗಳಿಸಿದ ಬೀದರ್​ನ ರೈತ
ಈರುಳ್ಳಿ ಬೀಜೋತ್ಪಾದನೆ
ಸುರೇಶ ನಾಯಕ
| Edited By: |

Updated on:May 14, 2025 | 3:12 PM

Share

ಬೀದರ್​, ಮೇ 14: ಕೃಷಿ ಅಂದರೆ ಲಾಭಕ್ಕಿಂತ ನಷ್ಟ ಜಾಸ್ತಿ ಅಂತಾ ನಾವೆಲ್ಲಾ ಕೆಳಿದ್ದೇವೆ. ಆದರೆ ಬೀದರ್​ನ ಈ ರೈತ (farmer) ಅದೇ ಕೃಷಿಯಿಂದ ಐದು ತಿಂಗಳಲ್ಲಿ ಭರ್ಜರಿ ಲಾಭ ಗಳಿಸಿದ್ದಾರೆ. ಈರುಳ್ಳಿ ಬೀಜ (onion seeds) ಮಾರಾಟ ಮಾಡಿ ಭರ್ಜರಿ ಲಾಭ ಗಳಿಸುತ್ತಿದ್ದಾರೆ. ಈ ಪ್ರಗತಿಪರ ರೈತನ ಕೃಷಿಯ ಚಾಣಾಕ್ಷತನಕ್ಕೆ ಅಧಿಕಾರಿಗಳು ಮತ್ತು ರೈತರು ಕೂಡ ಫಿದಾ ಆಗಿದ್ದಾರೆ. ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಗ್ರಾಮದ ರೈತ ದೀಲಿಪ್ ಕುಮಾರ್ ನೇಮಿನಾಥ್ ಕಿವುಡೆ ಅವರು ತಮ್ಮ 40 ಎಕರೆಯಷ್ಟು ಜಮೀನಿನಲ್ಲಿ ಈರುಳ್ಳಿ ಬೀಜೋತ್ಪಾದನೆಯಲ್ಲಿ ತೊಡಗಿಸಿಕೊಂಡಿದ್ದು, 5 ತಿಂಗಳಿಗೆ ಒಂದು ಕೋಟಿ ರೂ ಅಧಿಕ ಲಾಭವನ್ನ ಗಳಿಸಿದ್ದಾರೆ. ಇಡೀ ಕರ್ನಾಟಕದಲ್ಲಿಯೇ 40 ಎಕರೆಯಷ್ಟು ಜಮೀನಿನಲ್ಲಿ ಈರುಳ್ಳಿ ಬೀಜೋತ್ಪಾದನೆ ಮಾಡುವ ಏಕೈಕ ರೈತರೆಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

ಪ್ರತಿ ವರ್ಷ ಕೂಡ ಈರುಳ್ಳಿ ಬೀಜ ತಯಾರಿಸಿ ಅದನ್ನ ನೇರವಾಗಿ ರೈತರಿಗೆ ಮಾರಾಟ ಮಾಡುತ್ತಿದ್ದಾರೆ. ಹೀಗಾಗಿ ಇವರಿಗೆ ಬೀಜೋತ್ಪಾದನೆಯಿಂದಲೇ ಹೆಚ್ಚಿನ ಲಾಭ ಉಂಟಾಗುತ್ತಿದೆ. ಇನ್ನು ಇವರ ಈರುಳ್ಳಿ ಬೀಜ ಗುಣಮಟ್ಟದಿಂದ ಕೂಡಿದ್ದು, ರೈತರು ಇವರ ಬಳಿ ಬೀಜ ಖರೀದಿಸಿ, ಈರುಳ್ಳಿ ನಾಟಿ ಮಾಡಿದರೆ ಹೆಚ್ಚಿನ ಇಳುವರಿ ಬರುತ್ತದೆಂದು ರೈತರು ಕೂಡ ನಂಬಿಕೊಂಡಿದ್ದಾರೆ. ಇವರ ಬಳಿ ಬಂದು ಈರುಳ್ಳಿ ಬೀಜ ಖರೀದಿಸಿ ಬಿತ್ತನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಿಸಿಲು ನಾಡು ಬೀದರ್​ನಲ್ಲಿ ಗೋಡಂಬಿ ಬಳೆದ ರೈತ: ಅಪಾರ ಆದಾಯ

ಇನ್ನು ಇವರು ಒಂದು ಕೆಜಿಯಷ್ಟು ಈರುಳ್ಳಿ ಬೀಜವನ್ನ ಪ್ಯಾಕ್ ಮಾಡಿ ರಾಜ್ಯದ ಮೂಲೆ ಮೂಲೆಗೂ ಮಾರಾಟ ಮಾಡುತ್ತಾರೆ. ಪಕ್ಕದ ಮಹಾರಾಷ್ಟ್ರ, ತೆಲಂಗಾಣಕ್ಕೂ ಕೂಡ ಬೀಜವನ್ನ ಮಾರಾಟ ಮಾಡುತ್ತಿದ್ದು, ಕೆಜಿಗೆ ಒಂದು ಸಾವಿರ ರೂಪಾಯಿವರೆಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ನಮಗೆ ಲಾಭ ಜಾಸ್ತಿಯಿದೆ ಎಂದು ರೈತ ನೇಮಿನಾಥ್ ಕಿವುಡೆ ಹೇಳುತ್ತಾರೆ.

ಕಿಂಟಾಲ್​ಗೆ 50 ಸಾವಿರ ರೂ ಲಾಭ

ರೈತ ನೇಮಿನಾಥ್ ಅವರು ಹದಿನೈದು ವರ್ಷದ ಹಿಂದೆ ತಮ್ಮ ಹೊಲದಲ್ಲಿ ಕಬ್ಬು, ಸೋಯಾ, ಉದ್ದು ಹೆಸರು ಬೆಳೆಗೆ ಮಾತ್ರ ಸಿಮೀತವಾಗಿದ್ದರು. ಆದರೆ, ಅದರಲ್ಲಿ ಅಷ್ಟೇನು ಲಾಭವಾಗಿಲ್ಲ. ಕಬ್ಬು ಬೆಳೆಯಿಂದಲೂ ಕೂಡ ಇವರಿಗೆ ಲಾಭ ಅಷ್ಟಕಷ್ಟೆ. ಹೀಗಾಗಿ ಈ ಬೆಳೆಗಳಿಗೆ ಗುಡ್ ಬೈ ಹೇಳಿ ಕೃಷಿಯಲ್ಲಿ ಏನಾದರೂ ಹೊಸದನ್ನ ಮಾಡಬೇಕು ಅಂದುಕೊಂಡು ಈರುಳ್ಳಿ ಬೀಜೋತ್ಪಾದನೆ ಮಾಡಿದರೆ ಹೇಗೆ ಎಂದು ಯೋಚನೆ ಮಾಡಿ, ಒಂದು ವರ್ಷ ಹತ್ತು ಎಕರೆ ಪ್ರದೇಶದಲ್ಲಿ ಈರುಳ್ಳಿ ಬೀಜೋತ್ಪಾದನೆ ಮಾಡಿ, ಕಿಂಟಾಲ್​ಗೆ 50 ಸಾವಿರ ರೂ. ಅಂತೆ ಮಾರಾಟ ಮಾಡಿದ್ದಾರೆ. ಅದರಲ್ಲಿ ಭರ್ಜರಿ ಲಾಭ ಕಂಡುಕೊಂಡಿದ್ದಾರೆ.

Onion Seeds

ರೈತ ದೀಲಿಪ್ ಕುಮಾರ್ ನೇಮಿನಾಥ್ ಕಿವುಡೆ

ಉತ್ತಮ ಗುಣಮಟ್ಟದ ಬೀಜವನ್ನ ನೋಡಿದ ರೈತರು ಇವರಿಂದ ಹೆಚ್ಚು ಹೆಚ್ಚಾಗಿ ಈರುಳ್ಳಿ ಬೀಜವನ್ನ ಖರೀದಿಸಲು ಶುರುಮಾಡಿದರೂ ಹತ್ತು ಎಕರೆಯಿಂದ ಆರಂಭಿಸಿ ಈಗ 40 ಎಕರೆಯಷ್ಟು ಈರುಳ್ಳಿ ಬೀಜವನ್ನ ಬೆಳೆಸುತ್ತಿದ್ದಾರೆ. ಇನ್ನು ವರ್ಷಕ್ಕೆ ಕನಿಷ್ಟವೆಂದರೂ ಇನ್ನೂರು ಕ್ಷಿಂಟಾಲ್​ವರೆಗೆ ಈರುಳ್ಳಿ ಬೀಜವನ್ನ ಮಾರಾಟ ಮಾಡುತ್ತಿದ್ದಾರೆ.

ಇವರು ಯಾವುದೆ ಕಂನಪನಿಯ ಜೊತೆಗೆ ಒಪ್ಪಂದ ಮಾಡಿಕೊಂಡಿಲ್ಲ. ತಾವೆ ಬೆಳೆಸಿದ ಈರುಳ್ಳಿ ಬೀಜವನ್ನ ತಾವೆ ಮಾರಾಟ ಮಾಡುವುದರಿಂದಾಗಿ ಮಾರುಕಟ್ಟೆಯಲ್ಲಿ ದರದಲ್ಲಿ ಬದಲಾವಣೆಯಾದರೂ ಕೂಡ ಇವರಿಗೆ ಏನೂ ಸಮಸ್ಯೆಯಾಗುವುದಿಲ್ಲ. ಹೀಗಾಗಿ ಈರುಳ್ಳಿ ಬೀಜದಿಂದ ರೈತ ನೇಮಿನಾಥ್ ಕೋಟ್ಯಾಧಿಪತಿಯಾಗಿದ್ದು, 40 ಎಕರೆಯಲ್ಲಿ ಎಲ್ಲಾ ಖರ್ಚು ತೆಗೆದರು ಕೂಡ ಇವರಿಗೆ ಐದು ತಿಂಗಳಲ್ಲಿ 60 ರಿಂದ 70 ಲಕ್ಷ ರೂ. ಲಾಭವಾಗುತ್ತಿದೆ ಎಂದು ರೈತ ಹೇಳಿದ್ದಾರೆ.

ಇದನ್ನೂ ಓದಿ: ನಾನಾ ಕಾರಣಗಳಿಂದ ರಜೆಗೆ ಬಂದಿದ್ದ ಕರ್ನಾಟಕದ ಯೋಧರು ದೇಶ ಸೇವೆಗೆ ವಾಪಸ್

ಒಟ್ಟಿನಲ್ಲಿ ರೈತ ನೇಮಿನಾಥ್ ಈರುಳ್ಳಿ ಬೀಜೋತ್ಪಾದನೆ ಕೃಷಿಯಲ್ಲಿ ಯಶಸ್ಸು ಕಂಡಿದ್ದಾರೆ. ಎಲ್ಲ ರೈತರು ಪ್ರಯೋಗಾತ್ಮಕ ಕೃಷಿ, ಬೆಳೆ ಬೆಳೆಯಲು ಅನುಕೂಲ ಮಾಡಿಕೊಳಬೇಕು. ತೋಟಗಾರಿಕೆ ಇಲಾಖೆಯ ಸಹಾಯ ಪಡೆದು ಉತ್ತಮ ಆದಾಯ ಗಳಿಸುವ ತೋಟಗಾರಿಕೆ ಬೆಳೆ ಬೆಳೆಯಲು ಎಲ್ಲ ರೈತರು ಯಶಸ್ಸು ಆಗಬೇಕು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:48 pm, Wed, 14 May 25

Follow Us
Suresh Naik
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?