AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈರುಳ್ಳಿ ಬೀಜ ಮಾರಾಟ ಮಾಡಿ ಕೋಟ್ಯಂತರ ರೂ ಆದಾಯ ಗಳಿಸಿದ ಬೀದರ್​ನ ರೈತ

ಬೀದರ್‌ನ ಹುಮ್ನಾಬಾದ್ ತಾಲೂಕಿನ ರೈತ 40 ಎಕರೆಯಲ್ಲಿ ಈರುಳ್ಳಿ ಬೀಜೋತ್ಪಾದನೆ ಮಾಡಿ ಐದು ತಿಂಗಳಲ್ಲಿ ಕೋಟ್ಯಂತರ ರೂಪಾಯಿ ಲಾಭ ಗಳಿಸಿದ್ದಾರೆ. ಕಿಂಟಾಲ್‌ಗೆ 50 ಸಾವಿರ ರೂ ಗೆ ಮಾರಾಟ ಮಾಡುವ ಮೂಲಕ ಅವರು ಭರ್ಜರಿ ಲಾಭ ಗಳಿಸುತ್ತಿದ್ದಾರೆ. ಅವರ ಉತ್ತಮ ಗುಣಮಟ್ಟದ ಬೀಜಕ್ಕೆ ರಾಜ್ಯದಾದ್ಯಂತ ಬೇಡಿಕೆಯಿದೆ.

ಈರುಳ್ಳಿ ಬೀಜ ಮಾರಾಟ ಮಾಡಿ ಕೋಟ್ಯಂತರ ರೂ ಆದಾಯ ಗಳಿಸಿದ ಬೀದರ್​ನ ರೈತ
ಈರುಳ್ಳಿ ಬೀಜೋತ್ಪಾದನೆ
ಸುರೇಶ ನಾಯಕ
| Updated By: ಗಂಗಾಧರ​ ಬ. ಸಾಬೋಜಿ|

Updated on:May 14, 2025 | 3:12 PM

Share

ಬೀದರ್​, ಮೇ 14: ಕೃಷಿ ಅಂದರೆ ಲಾಭಕ್ಕಿಂತ ನಷ್ಟ ಜಾಸ್ತಿ ಅಂತಾ ನಾವೆಲ್ಲಾ ಕೆಳಿದ್ದೇವೆ. ಆದರೆ ಬೀದರ್​ನ ಈ ರೈತ (farmer) ಅದೇ ಕೃಷಿಯಿಂದ ಐದು ತಿಂಗಳಲ್ಲಿ ಭರ್ಜರಿ ಲಾಭ ಗಳಿಸಿದ್ದಾರೆ. ಈರುಳ್ಳಿ ಬೀಜ (onion seeds) ಮಾರಾಟ ಮಾಡಿ ಭರ್ಜರಿ ಲಾಭ ಗಳಿಸುತ್ತಿದ್ದಾರೆ. ಈ ಪ್ರಗತಿಪರ ರೈತನ ಕೃಷಿಯ ಚಾಣಾಕ್ಷತನಕ್ಕೆ ಅಧಿಕಾರಿಗಳು ಮತ್ತು ರೈತರು ಕೂಡ ಫಿದಾ ಆಗಿದ್ದಾರೆ. ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಗ್ರಾಮದ ರೈತ ದೀಲಿಪ್ ಕುಮಾರ್ ನೇಮಿನಾಥ್ ಕಿವುಡೆ ಅವರು ತಮ್ಮ 40 ಎಕರೆಯಷ್ಟು ಜಮೀನಿನಲ್ಲಿ ಈರುಳ್ಳಿ ಬೀಜೋತ್ಪಾದನೆಯಲ್ಲಿ ತೊಡಗಿಸಿಕೊಂಡಿದ್ದು, 5 ತಿಂಗಳಿಗೆ ಒಂದು ಕೋಟಿ ರೂ ಅಧಿಕ ಲಾಭವನ್ನ ಗಳಿಸಿದ್ದಾರೆ. ಇಡೀ ಕರ್ನಾಟಕದಲ್ಲಿಯೇ 40 ಎಕರೆಯಷ್ಟು ಜಮೀನಿನಲ್ಲಿ ಈರುಳ್ಳಿ ಬೀಜೋತ್ಪಾದನೆ ಮಾಡುವ ಏಕೈಕ ರೈತರೆಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

ಪ್ರತಿ ವರ್ಷ ಕೂಡ ಈರುಳ್ಳಿ ಬೀಜ ತಯಾರಿಸಿ ಅದನ್ನ ನೇರವಾಗಿ ರೈತರಿಗೆ ಮಾರಾಟ ಮಾಡುತ್ತಿದ್ದಾರೆ. ಹೀಗಾಗಿ ಇವರಿಗೆ ಬೀಜೋತ್ಪಾದನೆಯಿಂದಲೇ ಹೆಚ್ಚಿನ ಲಾಭ ಉಂಟಾಗುತ್ತಿದೆ. ಇನ್ನು ಇವರ ಈರುಳ್ಳಿ ಬೀಜ ಗುಣಮಟ್ಟದಿಂದ ಕೂಡಿದ್ದು, ರೈತರು ಇವರ ಬಳಿ ಬೀಜ ಖರೀದಿಸಿ, ಈರುಳ್ಳಿ ನಾಟಿ ಮಾಡಿದರೆ ಹೆಚ್ಚಿನ ಇಳುವರಿ ಬರುತ್ತದೆಂದು ರೈತರು ಕೂಡ ನಂಬಿಕೊಂಡಿದ್ದಾರೆ. ಇವರ ಬಳಿ ಬಂದು ಈರುಳ್ಳಿ ಬೀಜ ಖರೀದಿಸಿ ಬಿತ್ತನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬಿಸಿಲು ನಾಡು ಬೀದರ್​ನಲ್ಲಿ ಗೋಡಂಬಿ ಬಳೆದ ರೈತ: ಅಪಾರ ಆದಾಯ

ಇನ್ನು ಇವರು ಒಂದು ಕೆಜಿಯಷ್ಟು ಈರುಳ್ಳಿ ಬೀಜವನ್ನ ಪ್ಯಾಕ್ ಮಾಡಿ ರಾಜ್ಯದ ಮೂಲೆ ಮೂಲೆಗೂ ಮಾರಾಟ ಮಾಡುತ್ತಾರೆ. ಪಕ್ಕದ ಮಹಾರಾಷ್ಟ್ರ, ತೆಲಂಗಾಣಕ್ಕೂ ಕೂಡ ಬೀಜವನ್ನ ಮಾರಾಟ ಮಾಡುತ್ತಿದ್ದು, ಕೆಜಿಗೆ ಒಂದು ಸಾವಿರ ರೂಪಾಯಿವರೆಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ನಮಗೆ ಲಾಭ ಜಾಸ್ತಿಯಿದೆ ಎಂದು ರೈತ ನೇಮಿನಾಥ್ ಕಿವುಡೆ ಹೇಳುತ್ತಾರೆ.

ಕಿಂಟಾಲ್​ಗೆ 50 ಸಾವಿರ ರೂ ಲಾಭ

ರೈತ ನೇಮಿನಾಥ್ ಅವರು ಹದಿನೈದು ವರ್ಷದ ಹಿಂದೆ ತಮ್ಮ ಹೊಲದಲ್ಲಿ ಕಬ್ಬು, ಸೋಯಾ, ಉದ್ದು ಹೆಸರು ಬೆಳೆಗೆ ಮಾತ್ರ ಸಿಮೀತವಾಗಿದ್ದರು. ಆದರೆ, ಅದರಲ್ಲಿ ಅಷ್ಟೇನು ಲಾಭವಾಗಿಲ್ಲ. ಕಬ್ಬು ಬೆಳೆಯಿಂದಲೂ ಕೂಡ ಇವರಿಗೆ ಲಾಭ ಅಷ್ಟಕಷ್ಟೆ. ಹೀಗಾಗಿ ಈ ಬೆಳೆಗಳಿಗೆ ಗುಡ್ ಬೈ ಹೇಳಿ ಕೃಷಿಯಲ್ಲಿ ಏನಾದರೂ ಹೊಸದನ್ನ ಮಾಡಬೇಕು ಅಂದುಕೊಂಡು ಈರುಳ್ಳಿ ಬೀಜೋತ್ಪಾದನೆ ಮಾಡಿದರೆ ಹೇಗೆ ಎಂದು ಯೋಚನೆ ಮಾಡಿ, ಒಂದು ವರ್ಷ ಹತ್ತು ಎಕರೆ ಪ್ರದೇಶದಲ್ಲಿ ಈರುಳ್ಳಿ ಬೀಜೋತ್ಪಾದನೆ ಮಾಡಿ, ಕಿಂಟಾಲ್​ಗೆ 50 ಸಾವಿರ ರೂ. ಅಂತೆ ಮಾರಾಟ ಮಾಡಿದ್ದಾರೆ. ಅದರಲ್ಲಿ ಭರ್ಜರಿ ಲಾಭ ಕಂಡುಕೊಂಡಿದ್ದಾರೆ.

Onion Seeds

ರೈತ ದೀಲಿಪ್ ಕುಮಾರ್ ನೇಮಿನಾಥ್ ಕಿವುಡೆ

ಉತ್ತಮ ಗುಣಮಟ್ಟದ ಬೀಜವನ್ನ ನೋಡಿದ ರೈತರು ಇವರಿಂದ ಹೆಚ್ಚು ಹೆಚ್ಚಾಗಿ ಈರುಳ್ಳಿ ಬೀಜವನ್ನ ಖರೀದಿಸಲು ಶುರುಮಾಡಿದರೂ ಹತ್ತು ಎಕರೆಯಿಂದ ಆರಂಭಿಸಿ ಈಗ 40 ಎಕರೆಯಷ್ಟು ಈರುಳ್ಳಿ ಬೀಜವನ್ನ ಬೆಳೆಸುತ್ತಿದ್ದಾರೆ. ಇನ್ನು ವರ್ಷಕ್ಕೆ ಕನಿಷ್ಟವೆಂದರೂ ಇನ್ನೂರು ಕ್ಷಿಂಟಾಲ್​ವರೆಗೆ ಈರುಳ್ಳಿ ಬೀಜವನ್ನ ಮಾರಾಟ ಮಾಡುತ್ತಿದ್ದಾರೆ.

ಇವರು ಯಾವುದೆ ಕಂನಪನಿಯ ಜೊತೆಗೆ ಒಪ್ಪಂದ ಮಾಡಿಕೊಂಡಿಲ್ಲ. ತಾವೆ ಬೆಳೆಸಿದ ಈರುಳ್ಳಿ ಬೀಜವನ್ನ ತಾವೆ ಮಾರಾಟ ಮಾಡುವುದರಿಂದಾಗಿ ಮಾರುಕಟ್ಟೆಯಲ್ಲಿ ದರದಲ್ಲಿ ಬದಲಾವಣೆಯಾದರೂ ಕೂಡ ಇವರಿಗೆ ಏನೂ ಸಮಸ್ಯೆಯಾಗುವುದಿಲ್ಲ. ಹೀಗಾಗಿ ಈರುಳ್ಳಿ ಬೀಜದಿಂದ ರೈತ ನೇಮಿನಾಥ್ ಕೋಟ್ಯಾಧಿಪತಿಯಾಗಿದ್ದು, 40 ಎಕರೆಯಲ್ಲಿ ಎಲ್ಲಾ ಖರ್ಚು ತೆಗೆದರು ಕೂಡ ಇವರಿಗೆ ಐದು ತಿಂಗಳಲ್ಲಿ 60 ರಿಂದ 70 ಲಕ್ಷ ರೂ. ಲಾಭವಾಗುತ್ತಿದೆ ಎಂದು ರೈತ ಹೇಳಿದ್ದಾರೆ.

ಇದನ್ನೂ ಓದಿ: ನಾನಾ ಕಾರಣಗಳಿಂದ ರಜೆಗೆ ಬಂದಿದ್ದ ಕರ್ನಾಟಕದ ಯೋಧರು ದೇಶ ಸೇವೆಗೆ ವಾಪಸ್

ಒಟ್ಟಿನಲ್ಲಿ ರೈತ ನೇಮಿನಾಥ್ ಈರುಳ್ಳಿ ಬೀಜೋತ್ಪಾದನೆ ಕೃಷಿಯಲ್ಲಿ ಯಶಸ್ಸು ಕಂಡಿದ್ದಾರೆ. ಎಲ್ಲ ರೈತರು ಪ್ರಯೋಗಾತ್ಮಕ ಕೃಷಿ, ಬೆಳೆ ಬೆಳೆಯಲು ಅನುಕೂಲ ಮಾಡಿಕೊಳಬೇಕು. ತೋಟಗಾರಿಕೆ ಇಲಾಖೆಯ ಸಹಾಯ ಪಡೆದು ಉತ್ತಮ ಆದಾಯ ಗಳಿಸುವ ತೋಟಗಾರಿಕೆ ಬೆಳೆ ಬೆಳೆಯಲು ಎಲ್ಲ ರೈತರು ಯಶಸ್ಸು ಆಗಬೇಕು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:48 pm, Wed, 14 May 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ