AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rajyotsava 2021: ಸಾವಯವ ಕೃಷಿಕನಿಗೆ ಒಲಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಗುರುಲಿಂಗಪ್ಪ ಮೇಲ್ದೊಡ್ಡಿ ಮಾಡುವ ಸಾವಯವ ಕೃಷಿಯ ಬಗ್ಗೆ ಅಧ್ಯಯನ ನಡೆಸಲು ಕರ್ನಾಟಕ, ಆಂಧ್ರ ಪ್ರದೇಶ, ಓಡಿಸಾ, ತೆಲಂಗಾಣ ಸೇರಿದಂತೆ ಐದಾರು ರಾಜ್ಯದಿಂದ ಕೃಷಿ ಅಧಿಕಾರಿಗಳು, ವಿಜ್ಜಾನಿಗಳು ಇವರ ಹೊಲಕ್ಕೆ ಭೇಟಿಕೊಟ್ಟು ಅಧ್ಯಯನ ನಡೆಸಿದ್ದಾರೆ.

Karnataka Rajyotsava 2021: ಸಾವಯವ ಕೃಷಿಕನಿಗೆ ಒಲಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ
ಗುರುಲಿಂಗಪ್ಪ ಮೇಲ್ದೊಡ್ಡಿ
TV9 Web
| Updated By: preethi shettigar|

Updated on: Nov 01, 2021 | 9:25 AM

Share

ಬೀದರ್: ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಹುಡಗಿ ಗ್ರಾಮದ ರೈತ ಗುರುಲಿಂಗಪ್ಪ ಮೇಲ್ದೊಡ್ಡಿ ಅವರು 2020-21ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ‍ಪ್ರಶಸ್ತಿಗೆ ಭಾಜನವಾಗಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಸರ್ಕಾರವು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಬಹು ಬೆಳೆ ಹಾಗೂ ದ್ವಿದಳ ಧಾನ್ಯ ಬೆಳೆದು ರೈತರಿಗೆ ಮಾದರಿಯಾಗಿದ್ದಾರೆ. 65 ವರ್ಷದ ಹಿರಿಯ ಜೀವಿಯಾದ ಇವರು ಪಿಯುಸಿವರೆಗೆ ಶಿಕ್ಷಣ ಒಡೆದುಕೊಂಡಿದ್ದು, ಕಳೆದ 45 ವರ್ಷದಿಂದ ಮಿಶ್ರ ಬೆಳೆಯಲ್ಲಿದೆ. ವಿಶೇಷವಾಗಿ ನಾಟಿ ತೊಗರಿಗೆ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಕಳೆದ 20 ವರ್ಷದಿಂದ ಸಾವಯವ ಕೃಷಿಯಲ್ಲಿ ತೊಡಗಿಕೊಂಡಿದ್ದು, 11 ವರ್ಷದಿಂದ ರೈತರು ಹಾಗೂ ಸಾರ್ವಜನಿಕರಿಗೆ ಸಾವಯವ ಕೃಷಿಯ ಬಗ್ಗೆ ತಿಳುವಳಿಕೆ ನೀಡುತ್ತಿದ್ದಾರೆ.

ಕೃಷಿ ಅಧಿಕಾರಿಗಳು ಭೇಟಿ ಗುರುಲಿಂಗಪ್ಪ ಮೇಲ್ದೊಡ್ಡಿ ಮಾಡುವ ಸಾವಯವ ಕೃಷಿಯ ಬಗ್ಗೆ ಅಧ್ಯಯನ ನಡೆಸಲು ಕರ್ನಾಟಕ, ಆಂಧ್ರ ಪ್ರದೇಶ, ಓಡಿಸಾ, ತೆಲಂಗಾಣ ಸೇರಿದಂತೆ ಐದಾರು ರಾಜ್ಯದಿಂದ ಕೃಷಿ ಅಧಿಕಾರಿಗಳು, ವಿಜ್ಜಾನಿಗಳು ಇವರ ಹೊಲಕ್ಕೆ ಭೇಟಿಕೊಟ್ಟು ಅಧ್ಯಯನ ನಡೆಸಿದ್ದಾರೆ.

ಗುರುಲಿಂಗಪ್ಪ ಮೇಲ್ದೊಡ್ಡಿ ಪಡೆದ ಪ್ರಶಸ್ತಿಗಳು ಗುರುಲಿಂಗಪ್ಪ ಮೇಲ್ದೊಡ್ಡಿ ಅವರ ಕೃಷಿ ಸೇವೆ ಪರಿಗಣಿಸಿ ರಾಜ್ಯ ಕೃಷಿ ಪಂಡಿತ್, ಸಾವಯವ ಕೃಷಿ ಪಂಡಿತ, ಧಾರವಾಡ ವಿಶ್ವವಿದ್ಯಾಲಯ ಶ್ರೇಷ್ಠ ಕೃಷಿ ಪ್ರಶಸ್ತಿ, 2013 ರಲ್ಲಿ ಗುಜರಾತ್​ನಲ್ಲಿ ಉತ್ತಮ ಕೃಷಿಕ ಪ್ರಶಸ್ತಿ, 2017 ಮುಂಬೈನಲ್ಲಿ ಆಸ್ಪಿ ಕಂಪನಿಯಿಂದ ನಿವೃತ್ತ ಕೃಷಿ ಆಯುಕ್ತ ಪ್ರೋ, ಕೆಎಲ್ ಚಂದಾ ಅವರು 1 ಲಕ್ಷ ರೂಪಾಯಿ ನಗದಿನೊಂದಿಗೆ ಉತ್ತಮ ರೈತ ಪ್ರಶಸ್ತಿ ನೀಡಿ ಅಭಿನಂದಿಸಿದ್ದಾರೆ. ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ಎಸ್ಪೀ) ಕೃಷಿ ಹಾಗೂ ತೋಟಗಾರಿಕೆ ಕ್ಷೇತ್ರದಲ್ಲಿ ಸಲ್ಲಿಸಿದವರಿಗೆ ನೀಡುವ 2017ನೇ ಸಾಲಿನ ಎಲ್‌.ಎಂ.ಪಟೇಲ್‌ ಪ್ರಶಸ್ತಿ ಲಭಿಸಿದೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ 2021: ನಾಡಿನ ಸಮಸ್ತ ಜನತೆಗೆ ಶುಭಾಶಯ ತಿಳಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ

Karnataka Rajyotsava 2021: ಕನ್ನಡಕ್ಕಿದೆ ಪ್ರಾದೇಶಿಕತೆಯ ಛಾಪು; ಆಯಾ ಸ್ಥಳ, ಜನಾಂಗಕ್ಕೆ ಅನುಗುಣವಾಗಿ ಬದಲಾಗುತ್ತದೆ ಆಡುನುಡಿ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!