AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೆಚ್ಚಾದ ತೆರಿಗೆ ಕಳ್ಳರು: ಅಕ್ಕ-ಪಕ್ಕದ ರಾಜ್ಯಗಳಲ್ಲಿ ವಾಹನಗಳ ರಿಜಿಸ್ಟ್ರೇಷನ್​!

ಬೀದರ್​: ಬೇರೆ ರಾಜ್ಯದ ರಿಜಿಸ್ಟ್ರೇಷನ್ ನಂಬರ್ ಹೊಂದಿರುವ ವಾಹನಗಳು ಕಂಡು ಬರೋದು ರಾಜ್ಯದ ಬೀದರ್ ಜಿಲ್ಲೆಯಲ್ಲಿ. ಎಪಿ, ಎಂಹೆಚ್, ಪುದುಚೇರಿ, ಕೇರಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ವಾಹನಗಳ ನೋಂದಣಿ ಮಾಡಿಸಿ ಬೀದರ್​ನಲ್ಲಿ ಓಡಾಡಿಸುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಐಷಾರಾಮಿ ವಾಹನ ಖರೀದಿಸುವ ಕೆಲವು ಉದ್ಯಮಿಗಳು ಕರ್ನಾಟಕಕ್ಕೆ ತೆರಿಗೆ ವಂಚಿಸುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಐಷಾರಾಮಿ ವಾಹನಗಳ ನೋಂದಣಿ: ಐಷಾರಾಮಿ ವಾಹನಗಳಿಗೆ ಕರ್ನಾಟಕದಲ್ಲಿ 10ರಿಂದ 15 ಲಕ್ಷದಷ್ಟು ತೆರಿಗೆ ಇದ್ರೆ, ಪುದುಚೇರಿಯಲ್ಲಿ ಕೇವಲ 75 ಸಾವಿರ ರೂಪಾಯಿಗಳು. ಹೀಗೆ […]

ರಾಜ್ಯದಲ್ಲಿ ಹೆಚ್ಚಾದ ತೆರಿಗೆ ಕಳ್ಳರು: ಅಕ್ಕ-ಪಕ್ಕದ ರಾಜ್ಯಗಳಲ್ಲಿ ವಾಹನಗಳ ರಿಜಿಸ್ಟ್ರೇಷನ್​!
ಸಾಧು ಶ್ರೀನಾಥ್​
|

Updated on: Jan 13, 2020 | 10:38 AM

Share

ಬೀದರ್​: ಬೇರೆ ರಾಜ್ಯದ ರಿಜಿಸ್ಟ್ರೇಷನ್ ನಂಬರ್ ಹೊಂದಿರುವ ವಾಹನಗಳು ಕಂಡು ಬರೋದು ರಾಜ್ಯದ ಬೀದರ್ ಜಿಲ್ಲೆಯಲ್ಲಿ. ಎಪಿ, ಎಂಹೆಚ್, ಪುದುಚೇರಿ, ಕೇರಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ವಾಹನಗಳ ನೋಂದಣಿ ಮಾಡಿಸಿ ಬೀದರ್​ನಲ್ಲಿ ಓಡಾಡಿಸುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಐಷಾರಾಮಿ ವಾಹನ ಖರೀದಿಸುವ ಕೆಲವು ಉದ್ಯಮಿಗಳು ಕರ್ನಾಟಕಕ್ಕೆ ತೆರಿಗೆ ವಂಚಿಸುತ್ತಿದ್ದಾರೆ.

ಬೇರೆ ರಾಜ್ಯದಲ್ಲಿ ಐಷಾರಾಮಿ ವಾಹನಗಳ ನೋಂದಣಿ: ಐಷಾರಾಮಿ ವಾಹನಗಳಿಗೆ ಕರ್ನಾಟಕದಲ್ಲಿ 10ರಿಂದ 15 ಲಕ್ಷದಷ್ಟು ತೆರಿಗೆ ಇದ್ರೆ, ಪುದುಚೇರಿಯಲ್ಲಿ ಕೇವಲ 75 ಸಾವಿರ ರೂಪಾಯಿಗಳು. ಹೀಗೆ ಎಲ್ಲರೂ ಎಲ್ಲಿ ಕಡಿಮೆ ತೆರೆಗೆ ಇದೆಯೊ ಅಲ್ಲಿ ತಮ್ಮ ವಾಹನಗಳ ನೋಂದಣಿ ಮಾಡಿಸುತ್ತಿದ್ದಾರೆ. ಬೀದರ್‌ನಲ್ಲಿ ಹೀಗೆ ತೆರಿಗೆ ವಂಚನೆ ಮಾಡುತ್ತಿದ್ರೆ, ಆರ್‌ಟಿಒ ಅಧಿಕಾರಿಗಳು ಯಾವ ಕ್ರಮ ಕೈಗೊಂಡಿಲ್ಲ ಅನ್ನೋದು ಜನರ ಆರೋಪ.

ಜಿಲ್ಲೆಯಲ್ಲಿ ಶೇಕಡಾ 80 ರಷ್ಟು ವಾಹನಗಳು ಅನ್ಯರಾಜ್ಯದಲ್ಲಿಯೇ ನೋಂದಣಿಯಾಗಿವೆ. ಬೇರೆ ರಾಜ್ಯದಲ್ಲಿ ವಾಹನ ನೊಂದಣಿ ಮಾಡಿಸಿ ನಮ್ಮ ರಾಜ್ಯದಲ್ಲಿ ಓಡಾಡಿಸುವುದು ಕಾನೂನು ಬಾಹೀರವಾಗುತ್ತದೆ. ಆದ್ರೆ ಇವರಿಗೆ ಹೇಳುವರಿಲ್ಲ ಕೇಳೋರಿಲ್ಲ. ಕೆಲವರು ಹೈದರಾಬಾದ್-ಪುಣೆ-ಮುಂಬೈನಲ್ಲಿ ವ್ಯಾಪಾರ ವಹಿವಾಟು ಇರುವುದರಿಂದ ಅಲ್ಲಿ ನೋಂದಣಿ ಮಾಡಿಕೊಂಡಿದ್ದೆವೆಂದು ಎಂದು ಹೇಳುತ್ತಿದ್ದಾರೆ.

ಒಟ್ನಲ್ಲಿ ಗಡಿ ಜಿಲ್ಲೆ ಬೀದರ್‌ನ ಜನ ತೆರಿಗೆ ಹಣ ಉಳಿಸುವುದಕ್ಕೆ ಅಡ್ಡದಾರಿ ಹಿಡಿಯುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಕಮ್ಮಿ ಟ್ಯಾಕ್ಸ್‌ ಕಟ್ಟಿ ರಾಜ್ಯಕ್ಕೆ ಮೋಸ ಮಾಡುತ್ತಿದ್ದಾರೆ. ಇಂತಹವರ ವಿರುದ್ಧ ಈಗಲೇ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಅಂದ್ರೆ ಮತ್ತಷ್ಟು ಮೋಸ ಆಗೋದ್ರಲ್ಲಿ ನೋ ಡೌಟ್‌.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ