AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಹೆಚ್ಚಾದ ತೆರಿಗೆ ಕಳ್ಳರು: ಅಕ್ಕ-ಪಕ್ಕದ ರಾಜ್ಯಗಳಲ್ಲಿ ವಾಹನಗಳ ರಿಜಿಸ್ಟ್ರೇಷನ್​!

ಬೀದರ್​: ಬೇರೆ ರಾಜ್ಯದ ರಿಜಿಸ್ಟ್ರೇಷನ್ ನಂಬರ್ ಹೊಂದಿರುವ ವಾಹನಗಳು ಕಂಡು ಬರೋದು ರಾಜ್ಯದ ಬೀದರ್ ಜಿಲ್ಲೆಯಲ್ಲಿ. ಎಪಿ, ಎಂಹೆಚ್, ಪುದುಚೇರಿ, ಕೇರಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ವಾಹನಗಳ ನೋಂದಣಿ ಮಾಡಿಸಿ ಬೀದರ್​ನಲ್ಲಿ ಓಡಾಡಿಸುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಐಷಾರಾಮಿ ವಾಹನ ಖರೀದಿಸುವ ಕೆಲವು ಉದ್ಯಮಿಗಳು ಕರ್ನಾಟಕಕ್ಕೆ ತೆರಿಗೆ ವಂಚಿಸುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಐಷಾರಾಮಿ ವಾಹನಗಳ ನೋಂದಣಿ: ಐಷಾರಾಮಿ ವಾಹನಗಳಿಗೆ ಕರ್ನಾಟಕದಲ್ಲಿ 10ರಿಂದ 15 ಲಕ್ಷದಷ್ಟು ತೆರಿಗೆ ಇದ್ರೆ, ಪುದುಚೇರಿಯಲ್ಲಿ ಕೇವಲ 75 ಸಾವಿರ ರೂಪಾಯಿಗಳು. ಹೀಗೆ […]

ರಾಜ್ಯದಲ್ಲಿ ಹೆಚ್ಚಾದ ತೆರಿಗೆ ಕಳ್ಳರು: ಅಕ್ಕ-ಪಕ್ಕದ ರಾಜ್ಯಗಳಲ್ಲಿ ವಾಹನಗಳ ರಿಜಿಸ್ಟ್ರೇಷನ್​!
ಸಾಧು ಶ್ರೀನಾಥ್​
|

Updated on: Jan 13, 2020 | 10:38 AM

Share

ಬೀದರ್​: ಬೇರೆ ರಾಜ್ಯದ ರಿಜಿಸ್ಟ್ರೇಷನ್ ನಂಬರ್ ಹೊಂದಿರುವ ವಾಹನಗಳು ಕಂಡು ಬರೋದು ರಾಜ್ಯದ ಬೀದರ್ ಜಿಲ್ಲೆಯಲ್ಲಿ. ಎಪಿ, ಎಂಹೆಚ್, ಪುದುಚೇರಿ, ಕೇರಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ವಾಹನಗಳ ನೋಂದಣಿ ಮಾಡಿಸಿ ಬೀದರ್​ನಲ್ಲಿ ಓಡಾಡಿಸುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಐಷಾರಾಮಿ ವಾಹನ ಖರೀದಿಸುವ ಕೆಲವು ಉದ್ಯಮಿಗಳು ಕರ್ನಾಟಕಕ್ಕೆ ತೆರಿಗೆ ವಂಚಿಸುತ್ತಿದ್ದಾರೆ.

ಬೇರೆ ರಾಜ್ಯದಲ್ಲಿ ಐಷಾರಾಮಿ ವಾಹನಗಳ ನೋಂದಣಿ: ಐಷಾರಾಮಿ ವಾಹನಗಳಿಗೆ ಕರ್ನಾಟಕದಲ್ಲಿ 10ರಿಂದ 15 ಲಕ್ಷದಷ್ಟು ತೆರಿಗೆ ಇದ್ರೆ, ಪುದುಚೇರಿಯಲ್ಲಿ ಕೇವಲ 75 ಸಾವಿರ ರೂಪಾಯಿಗಳು. ಹೀಗೆ ಎಲ್ಲರೂ ಎಲ್ಲಿ ಕಡಿಮೆ ತೆರೆಗೆ ಇದೆಯೊ ಅಲ್ಲಿ ತಮ್ಮ ವಾಹನಗಳ ನೋಂದಣಿ ಮಾಡಿಸುತ್ತಿದ್ದಾರೆ. ಬೀದರ್‌ನಲ್ಲಿ ಹೀಗೆ ತೆರಿಗೆ ವಂಚನೆ ಮಾಡುತ್ತಿದ್ರೆ, ಆರ್‌ಟಿಒ ಅಧಿಕಾರಿಗಳು ಯಾವ ಕ್ರಮ ಕೈಗೊಂಡಿಲ್ಲ ಅನ್ನೋದು ಜನರ ಆರೋಪ.

ಜಿಲ್ಲೆಯಲ್ಲಿ ಶೇಕಡಾ 80 ರಷ್ಟು ವಾಹನಗಳು ಅನ್ಯರಾಜ್ಯದಲ್ಲಿಯೇ ನೋಂದಣಿಯಾಗಿವೆ. ಬೇರೆ ರಾಜ್ಯದಲ್ಲಿ ವಾಹನ ನೊಂದಣಿ ಮಾಡಿಸಿ ನಮ್ಮ ರಾಜ್ಯದಲ್ಲಿ ಓಡಾಡಿಸುವುದು ಕಾನೂನು ಬಾಹೀರವಾಗುತ್ತದೆ. ಆದ್ರೆ ಇವರಿಗೆ ಹೇಳುವರಿಲ್ಲ ಕೇಳೋರಿಲ್ಲ. ಕೆಲವರು ಹೈದರಾಬಾದ್-ಪುಣೆ-ಮುಂಬೈನಲ್ಲಿ ವ್ಯಾಪಾರ ವಹಿವಾಟು ಇರುವುದರಿಂದ ಅಲ್ಲಿ ನೋಂದಣಿ ಮಾಡಿಕೊಂಡಿದ್ದೆವೆಂದು ಎಂದು ಹೇಳುತ್ತಿದ್ದಾರೆ.

ಒಟ್ನಲ್ಲಿ ಗಡಿ ಜಿಲ್ಲೆ ಬೀದರ್‌ನ ಜನ ತೆರಿಗೆ ಹಣ ಉಳಿಸುವುದಕ್ಕೆ ಅಡ್ಡದಾರಿ ಹಿಡಿಯುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಕಮ್ಮಿ ಟ್ಯಾಕ್ಸ್‌ ಕಟ್ಟಿ ರಾಜ್ಯಕ್ಕೆ ಮೋಸ ಮಾಡುತ್ತಿದ್ದಾರೆ. ಇಂತಹವರ ವಿರುದ್ಧ ಈಗಲೇ ಪೊಲೀಸರು ಕ್ರಮ ತೆಗೆದುಕೊಂಡಿಲ್ಲ ಅಂದ್ರೆ ಮತ್ತಷ್ಟು ಮೋಸ ಆಗೋದ್ರಲ್ಲಿ ನೋ ಡೌಟ್‌.

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ