Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​ನ ಗೋಶಾಲೆಗಳಲ್ಲಿ ಗೋವುಗಳಿಗಿಲ್ಲ ರಕ್ಷಣೆ; ಮೇವು ಹಾಕ್ತಿಲ್ಲ, ಆರೈಕೆ ಮಾಡ್ತಿಲ್ಲ ನರಳಿ ನರಳಿ ಸಾಯುತ್ತಿವೆ ಎಂದು ಆರೋಪ

ಎರಡೂ ದೇವಸ್ಥಾನಗಳ ಗೋಶಾಲೆಗಳಲ್ಲಿ 200 ಕ್ಕೂ ಅಧಿಕ ಗೋವುಗಳಿವೆ. ಭಕ್ತರು ತಂದು ಬಿಡುವ ಹರಕೆ ಜಾನುವಾರು ಹೊರತುಪಡಿಸಿ ರೈತರು ಕೂಡಾ ಹಸುಗಳಿಗೆ ಮೇವು ಹಾಕಲಾಗದೇ ಇಲ್ಲಿಗೆ ತಂದು ಬಿಡ್ತಿದ್ದಾರೆ. ಇಲ್ಲೂ ಕೂಡ ಮೇವು, ನೀರು ಸಿಗದೇ ಹಸುಗಳು ಸಾಯುತ್ತಿವೆ.

ಬೀದರ್​ನ ಗೋಶಾಲೆಗಳಲ್ಲಿ ಗೋವುಗಳಿಗಿಲ್ಲ ರಕ್ಷಣೆ; ಮೇವು ಹಾಕ್ತಿಲ್ಲ, ಆರೈಕೆ ಮಾಡ್ತಿಲ್ಲ ನರಳಿ ನರಳಿ ಸಾಯುತ್ತಿವೆ ಎಂದು ಆರೋಪ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jan 16, 2022 | 7:18 AM

ಬೀದರ್ ಜಿಲ್ಲೆಯಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ 10ಕ್ಕೂ ಹೆಚ್ಚು ದೇವಸ್ಥಾನಗಳಿವೆ. ಭಾಲ್ಕಿ ತಾಲೂಕಿನ ಖಾನಾಪುರ ಗ್ರಾಮದ ಮೈಲಾರ ಮಲ್ಲಣ್ಣ ದೇವಸ್ಥಾನ ಹಾಗೂ ಬೀದರ್ ತಾಲೂಕಿನ ಹೊನ್ನೀಕೇರಿ ಸಿದ್ಧೇಶ್ವರ ದೇವಸ್ಥಾನ ಹೆಚ್ಚು ಪ್ರಸಿದ್ಧಿ ಪಡೆದಿವೆ. ಈ ದೇಗುಲಗಳಿಗೆ ಪ್ರತಿ ವರ್ಷವೂ ಭಕ್ತರು ನೂರಾರು ಸಂಖ್ಯೆಯಲ್ಲಿ ಗೋವುಗಳನ್ನು ಹರಕೆ ರೂಪದಲ್ಲಿ ಇಲ್ಲಿಗೆ ತಂದು ಬಿಡ್ತಾರೆ. ಇವುಗಳ ಆರೈಕೆ ಮಾಡ್ಬೇಕಾದ ಜವಾಬ್ದಾರಿ ಮುಜರಾಯಿ ಇಲಾಖೆ ಹಾಗೂ ದೇಗುಲದ ಆಡಳಿತ ಮಂಡಳಿಯವರದ್ದು. ಇದ್ರ ಮಧ್ಯೆ ದೇವಸ್ಥಾನಕ್ಕೆ ಪ್ರತಿ ವರ್ಷವೂ ದೇಣಿಗೆ ರೂಪದಲ್ಲಿ ಲಕ್ಷಾಂತರ ಹಣ ಬರುತ್ತದೆ. ಆದ್ರೆ, ಮುಜರಾಯಿ ಇಲಾಖೆ ಅಧಿಕಾರಿಗಳು ಹಸುಗಳಿಗಾಗಿ ಒಂದೇ ಒಂದು ರೂಪಾಯಿ ಖರ್ಚು ಮಾಡ್ತಿಲ್ಲ. ಗೋವುಗಳಿಗೆ ಮೇವು, ನೀರು ಮತ್ತು ಕಾಯಿಲೆಗೆ ತುತ್ತಾದ ಹಸುಗಳಿಗೆ ಚಿಕಿತ್ಸೆ ಕೊಡಿಸುತ್ತಿಲ್ಲ. ಇದ್ರಿಂದಾಗಿ ಗೋಶಾಲೆಯಲ್ಲಿ ಹಸುಗಳು ನರಳಿ ನರಳಿ ಸಾಯುತ್ತಿವೆ ಅಂತಾ ಸ್ಥಳೀಯರು ಆರೋಪಿಸಿದ್ದಾರೆ.

ಎರಡೂ ದೇವಸ್ಥಾನಗಳ ಗೋಶಾಲೆಗಳಲ್ಲಿ 200 ಕ್ಕೂ ಅಧಿಕ ಗೋವುಗಳಿವೆ. ಭಕ್ತರು ತಂದು ಬಿಡುವ ಹರಕೆ ಜಾನುವಾರು ಹೊರತುಪಡಿಸಿ ರೈತರು ಕೂಡಾ ಹಸುಗಳಿಗೆ ಮೇವು ಹಾಕಲಾಗದೇ ಇಲ್ಲಿಗೆ ತಂದು ಬಿಡ್ತಿದ್ದಾರೆ. ಇಲ್ಲೂ ಕೂಡ ಮೇವು, ನೀರು ಸಿಗದೇ ಹಸುಗಳು ಸಾಯುತ್ತಿವೆ. ಸಹಾಯಕ ಆಯಕ್ತರಾಗಲಿ, ತಹಶೀಲ್ದಾರ್ ಆಗಲಿ, ಜಿಲ್ಲಾಡಳಿತದ ಯಾವೊಬ್ಬ ಅಧಿಕಾರಿಯೂ ಇತ್ತ ತಿರುಗಿ ನೊಡ್ತಿಲ್ಲ. ಈ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಅಂತಾ ಸ್ಥಳೀಯರು ಆರೋಪಿಸುತ್ತಿದ್ದಾರೆ. ಈ ಬಗ್ಗೆ ದೇವಸ್ಥಾನದ ಆಡಳಿತಾಧಿಕಾರಿಯನ್ನ ಕೇಳಿದ್ರೆ, ವಯಸ್ಸಾದ ಹಸುಗಳ ಆರೈಕೆ ಮಾಡೋದು ಕಷ್ಟವಾಗ್ತಿದೆ ಅಂತಿದ್ದಾರೆ.

ಒಟ್ನಲ್ಲಿ, ಸರ್ಕಾರದ ಸುಪರ್ದಿಯಲ್ಲಿರುವ ದೇಗುಲಗಳ ಗೋಶಾಲೆಗಳಲ್ಲೇ ಹಸುಗಳ ಆರೈಕೆ ಮಾಡಲಾಗ್ತಿಲ್ಲ. ಮೇವು, ನೀರು ಸಿಗದೇ ನರಳಿ ನರಳಿ ಪ್ರಾಣ ಬಿಡ್ತಿದ್ದು, ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

ವರದಿ: ಸುರೇಶ್, ಟಿವಿ9 ಬೀದರ್.

ಇದನ್ನೂ ಓದಿ: ನಿಕ್​ ಜೋನಸ್ ಜತೆ ಮಗು ಪಡೆಯೋ ವಿಚಾರದ ಬಗ್ಗೆ ಮೌನ ಮುರಿದ ಪ್ರಿಯಾಂಕಾ ಚೋಪ್ರಾ

IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ