AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ಸಂತಪುರ ಪೊಲೀಸರಿಂದ 592 ಕೆಜಿ ಗಾಂಜಾ ಜಪ್ತಿ, ನಾಲ್ವರ ಬಂಧನ

ಮುಟ್ಟುಗೋಲು ಹಾಕಿಕೊಂಡಿರುವ ಗಾಂಜಾದ ಮೌಲ್ಯ ₹ 59.20 ಲಕ್ಷ ಎಂದು ಅಂದಾಜಿಸಲಾಗಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಗಾಂಜಾ ಸಿಕ್ಕಿದ್ದು ಈ ವರ್ಷದ ದಾಖಲೆ ಎನಿಸಿದೆ.

ಬೀದರ್: ಸಂತಪುರ ಪೊಲೀಸರಿಂದ 592 ಕೆಜಿ ಗಾಂಜಾ ಜಪ್ತಿ, ನಾಲ್ವರ ಬಂಧನ
ಸಂತಪುರ ಠಾಣೆ ಪೊಲೀಸರು ವಶಪಡಿಸಿಕೊಂಡಿರುವ ಗಾಂಜಾ
TV9 Web
| Edited By: |

Updated on: Aug 08, 2021 | 6:58 PM

Share

ಬೀದರ್: ಅಕ್ರಮವಾಗಿ ಸಾಗಿಸುತ್ತಿದ್ದ 592 ಗಾಂಜಾ ಜಪ್ತಿ ಮಾಡಿರುವ ಬೀದರ್ ಜಿಲ್ಲೆ ಔರಾದ್ ತಾಲ್ಲೂಕಿನ ಸಂತಪುರ ಠಾಣೆ ಪೊಲೀಸರು ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳು ಹೈದರಾಬಾದ್​ನಿಂದ ಕಮಲನಗರ ಕಡೆಗೆ ಗಾಂಜಾ ಸಾಗಿಸುತ್ತಿದ್ದರು.

ಮುಟ್ಟುಗೋಲು ಹಾಕಿಕೊಂಡಿರುವ ಗಾಂಜಾದ ಮೌಲ್ಯ ₹ 59.20 ಲಕ್ಷ ಎಂದು ಅಂದಾಜಿಸಲಾಗಿದೆ. ಬಂಧಿತರನ್ನು ಓಂಕಾರ್, ಅನಿಲ್​ಕುಮಾರ್, ಹಾಜಿಪಾಶಾ, ಅಸ್ಲಾಂ ಬಂಧಿತರು. ಇಷ್ಟು ದೊಡ್ಡ ಪ್ರಮಾಣದಲ್ಲಿ ಗಾಂಜಾ ಸಿಕ್ಕಿದ್ದು ಈ ವರ್ಷದ ದಾಖಲೆ ಎನಿಸಿದೆ. ತಲೆಮರೆಸಿಕೊಂಡಿರುವ ಇತರ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಗಾಂಜಾ ಜಪ್ತಿ ಮಾಹಿತಿ ನೀಡುತ್ತಿರುವ ಪೊಲೀಸರು.

ಗಾಂಜಾ ನಶೆಯಲ್ಲಿ ರಸ್ತೆ ಬದಿ ನಿಂತಿದ್ದ ವಾಹನಗಳ ಗಾಜು ಪುಡಿ ಪುಡಿ ಕಳೆದ ಕೆಲ ದಿನಗಳ ಹಿಂದೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡನೋರ್ವನ ಅಟ್ಟಹಾಸಕ್ಕೆ 5 ವಾಹನಗಳು ಜಖಂ ಆಗಿದ್ದ ಘಟನೆ ನಡೆದಿತ್ತು. ಹುಡುಗಿ ಕೈ ಕೊಟ್ಳು ಅಂತ ಕುಡಿದ ಮತ್ತಿನಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ವಾಹನಗಳ ಗಾಜನ್ನು ಪುಡಿ ಪುಡಿ ಮಾಡಿ ಯುವಕನೋರ್ವ ವಿಕೃತಿ ಮೆರೆದಿದ್ದ. ಅದರಂತೆ ಮತ್ತೊಂದು ಘಟನೆ ನಡೆದಿದೆ. ಗಾಂಜಾ ನಶೆಯಲ್ಲಿದ್ದ ಪುಂಡರು ಬೆಂಗಳೂರಿನಲ್ಲಿ ಅಟ್ಟಹಾಸ ಮೆರೆದಿದ್ದಾರೆ.

ನಗರದ ವಿಜಯನಗರದ ಆರ್‌ಪಿಸಿ ಲೇಔಟ್‌ನಲ್ಲಿ ತಡರಾತ್ರಿ ರಸ್ತೆ ಬದಿ ನಿಲ್ಲಿಸಿದ್ದ 5ಕ್ಕೂ ಹೆಚ್ಚು ವಾಹನಗಳ ಗಾಜು ಪುಡಿ ಪುಡಿ ಮಾಡಿ ಎಸ್ಕೇಪ್ ಆಗಿದ್ದಾರೆ. ಇದೇ ಏರಿಯಾದ ಮೂವರು ಪುಂಡರು ಗಾಂಜಾ ನಶೆಯಲ್ಲಿ ವಾಹನಗಳ ಗಾಜನ್ನು ಪುಡಿ ಪುಡಿ ಮಾಡಿದ್ದಾರೆ. ಸ್ಥಳೀಯರ ವಿರೋಧ ಹಿನ್ನೆಲೆ ಕಲ್ಲುತೂರಿ ಪುಂಡರು ಪರಾರಿಯಾಗಿದ್ದಾರೆ. ಪುಂಡರ ಅಟ್ಟಹಾಸದ ದೃಶ್ಯಾವಳಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸಿಸಿ ಟಿವಿ ದೃಶ್ಯಾವಳಿ ವಶಕ್ಕೆ ಪಡೆದು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

(Police seized 592 kg ganja in santapur of Aurad)

ಇದನ್ನೂ ಓದಿ: ಬೀದರ್: ಸಮಗ್ರ ಕೃಷಿಯ ಜತೆಗೆ ವಿವಿಧ ಬಗೆಯ ಸಸಿಗಳನ್ನು ಬೆಳೆಸಿದ ರೈತ; ತಿಂಗಳಿಗೆ ಲಕ್ಷ ರೂಪಾಯಿ ಸಂಪಾದನೆ

ಇದನ್ನೂ ಓದಿ: ಬೀದರ್: 15 ಲಕ್ಷ ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಸಿಕ್ಕಿ ಬಿದ್ದ ಲೇಡಿ ತಹಶೀಲ್ದಾರ್!

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್