AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್: ತಲೆಗೆ ಹಾಗೂ ಮರ್ಮಾಂಗಕ್ಕೆ ಕಲ್ಲಿನಿಂದ ಜಜ್ಜಿ ಪ್ರಾಥಮಿಕ ಶಾಲೆಯ ಶಿಕ್ಷಕನ ಕೊಲೆ

ಔರಾದ್ ತಾಲೂಕಿನ ಕರಂಜಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಳೆದ ಏಳು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು. ಇನ್ನೂ ವಿಜಯ್​ ಕುಮಾರ್​ಗೆ ಮದುವೆಯಾಗಿದ್ದು, ಗಂಡ ಹೆಂಡತಿ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದಾರೆ. ಅಲ್ಲದೇ ವಿಧವಾ ವಿಚ್ಚೇದನಕ್ಕೂ ಕೂಡಾ ಇವರ ಹೆಂಡತಿ ಕೋರ್ಟ್​ನಲ್ಲಿ ಅರ್ಜಿಹಾಕಿದ್ದಾರೆ.

ಬೀದರ್: ತಲೆಗೆ ಹಾಗೂ ಮರ್ಮಾಂಗಕ್ಕೆ ಕಲ್ಲಿನಿಂದ ಜಜ್ಜಿ ಪ್ರಾಥಮಿಕ ಶಾಲೆಯ ಶಿಕ್ಷಕನ ಕೊಲೆ
ವಿಜಯ್ ಕುಮಾರ್ ಧೋಂಡಿಬಾ ಟಿಳೇಕರ್ (49)
TV9 Web
| Edited By: |

Updated on: Nov 10, 2021 | 3:17 PM

Share

ಬೀದರ್: ತಲೆಗೆ ಹಾಗೂ ಮರ್ಮಾಂಗಕ್ಕೆ ಕಲ್ಲಿನಿಂದ ಜಜ್ಜಿ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನರಸಿಂಗ್​ಪುರ ತಾಂಡಾ ಬಳಿ ನಡೆದಿದೆ. ಮೊನ್ನೆ (ನವೆಂಬರ್ 8, ಸೋಮವಾರ) ರಾತ್ರಿ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯ್ ಕುಮಾರ್ ಧೋಂಡಿಬಾ ಟಿಳೇಕರ್ (49) ರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಇವರು ಔರಾದ್ ತಾಲೂಕಿನ ಕರಂಜಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಕಳೆದ ಏಳು ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು. ಇನ್ನೂ ವಿಜಯ್​ ಕುಮಾರ್​ಗೆ ಮದುವೆಯಾಗಿದ್ದು, ಗಂಡ ಹೆಂಡತಿ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದಾರೆ. ಅಲ್ಲದೇ ವಿಧವಾ ವಿಚ್ಚೇದನಕ್ಕೂ ಕೂಡಾ ಇವರ ಹೆಂಡತಿ ಕೋರ್ಟ್​ನಲ್ಲಿ ಅರ್ಜಿಹಾಕಿದ್ದಾರೆ.

ವಿಜಯ್ ಕುಮಾರ್ ಪತ್ನಿ ಬೀದರ್​ನಲ್ಲಿಯೇ ವಾಸವಾಗಿದ್ದಾರೆ. ಆದರೆ ಕೊಲೆಯಾದ ವಿಜಯ್​ ಕುಮಾರ್ ಔರಾದ್ ಪಟ್ಟಣದ ಲಿಡ್ಕರ್ ಕಾಲೋನಿಯಲ್ಲಿ ವಾಸವಾಗಿದ್ದರು. ಇನ್ನೂ ಮೊದಲನೆಯ ಹೆಂಡತಿಗೆ ವಿಚ್ಚೇದನ ಕೊಟ್ಟು ಎರಡನೇಯ ಮದುವೆಯಾಗಲು ವಿಜಯ್​ ಕುಮಾರ್​ ತಯಾರಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಅಷ್ಟರಲ್ಲಾಗಲೇ ವಿಜಯ್​ ಕುಮಾರ್ ಭೀಕರವಾಗಿ ಹತ್ಯೆಯಾಗಿದ್ದಾರೆ. ಇನ್ನೂ ಕೊಲೆಯಾದ ವಿಜಯ್​ ಕುಮಾರ್ ವಿಪರಿತವಾಗಿ ಕುಡಿಯುತ್ತಿದ್ದರು ಎಂದು ಹೇಳಲಾಗುತ್ತಿದೆ ಮತ್ತು ಕೌಟುಂಬಿಕ ಕಲಹವೇ ಇವರ ಕೊಲೆಗೆ ಕಾರಣವಾಗಿರಬಹುದು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಈ ಸಂಬಂಧ ಔರಾದ್ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗಾರರನ್ನು ಹಿಡಿಯಲು ಪೋಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪೊಲೀಸ್ ಪೇದೆ ಮಗನ ಬರ್ಬರ ಕೊಲೆ ಪ್ರಕರಣ; 6 ಆರೋಪಿಗಳು ಅರೆಸ್ಟ್

Murder: ರಾಡ್‌ನಿಂದ ಪತಿ ಹತ್ಯೆಗೈದು ಪೊಲೀಸರ ಮುಂದೆ ಶರಣಾದ 2ನೇ ಪತ್ನಿ, ಕೊಲೆಯ ಹಿಂದೆ ಆಸ್ತಿ ಕಬಳಿಕೆ ಆರೋಪ

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ