AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್ ಆತ್ಮಹತ್ಯೆ ಕೇಸ್​: ಇಬ್ಬರಿಗೆ ಜಾಮೀನು, ಐವರಿಗೆ 14 ದಿನ ನ್ಯಾಯಾಂಗ ಬಂಧನ

ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹಾರಾಷ್ಟ್ರದ ರೌಡಿಶೀಟರ್ ಪ್ರತಾಪ್ ಧೀರ್ ಪಾಟೀಲ್ ಮತ್ತು ಸೊಲ್ಲಾಪುರ ಜಿಲ್ಲಾ ಶಿವಸೇನಾ ಅಧ್ಯಕ್ಷ ಮನೋಜ್ ಸೇಜವಾಲ್‌ಗೆ ಬೀದರ್ JMFC ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜೊತೆಗೆ ಆರೋಪಿ ರಾಜು ಕಪನೂರ್ ಮತ್ತು ಗ್ಯಾಂಗ್​ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಸಚಿನ್ ಆತ್ಮಹತ್ಯೆ ಕೇಸ್​: ಇಬ್ಬರಿಗೆ ಜಾಮೀನು, ಐವರಿಗೆ 14 ದಿನ ನ್ಯಾಯಾಂಗ ಬಂಧನ
ಸಚಿನ್ ಆತ್ಮಹತ್ಯೆ ಕೇಸ್​: ಇಬ್ಬರಿಗೆ ಜಾಮೀನು, ಐವರಿಗೆ 14 ದಿನ ನ್ಯಾಯಾಂಗ ಬಂಧನ
ಸುರೇಶ ನಾಯಕ
| Edited By: |

Updated on: Jan 18, 2025 | 7:32 PM

Share

ಬೀದರ್​, ಜನವರಿ 18: ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ್ (Sachin Panchal) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮಹಾರಾಷ್ಟ್ರದ ರೌಡಿಶೀಟರ್ ಪ್ರತಾಪ್ ಧೀರ್ ಪಾಟೀಲ್ ಮತ್ತು ಸೊಲ್ಲಾಪುರ ಜಿಲ್ಲಾ ಶಿವಸೇನೆ ಅಧ್ಯಕ್ಷ ಮನೋಜ್ ಸೇಜವಾಲ್​​ಗೆ ಜೆಎಂಎಫ್​ಸಿ ಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ಆರೋಪಿ ರಾಜು ಕಪನೂರ್ & ಗ್ಯಾಂಗ್​ಗೆ 14 ದಿನ ನ್ಯಾಯಾಂಗ ಬಂಧನ

ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದ್ದ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಕ್ಲೈಮಾಕ್ಸ್ ಹಂತಕ್ಕೆ ತಲುಪಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ ಪಾಲಿಕೆ ಮಾಜಿ ಸದಸ್ಯ ರಾಜು ಕಪನೂರ್ ಸೇರಿ ಐವರು ಬೀದರ್​ನ ಜೈಲು ಸೇರಿದ್ದಾರೆ.

ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್​: ಪ್ರಿಯಾಂಕ್​ ಖರ್ಗೆ ಆಪ್ತ 5 ದಿನ ಸಿಐಡಿ ಕಸ್ಟಡಿಗೆ

ಪ್ರಕರಣದ ಪ್ರಮುಖ ಆರೋಪಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂ‌ರ್ ಅವರಲ್ಲದೆ ಕಲಬುರಗಿ ಕಾಂಗ್ರೆಸ್ ಮುಖಂಡ ನಂದಕುಮಾರ ನಾಗಭುಜಂಗೆ, ಕಲಬುರಗಿ ಜಿಪಂ ಮಾಜಿ ಉಪಾಧ್ಯಕ್ಷ ಗೋರಖನಾಥ್ ಸಜ್ಜನ್, ಆರ್.ಕೆ.ಪಾಟೀಲ್ ಹಾಗೂ ಸತೀಶ ರತ್ನಾಕ‌ರ್ ದುಬಲಗುಂಡಿ ಅವರನ್ನು ಸಿಐಡಿ ತಂಡ ಎಂಟು ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದುಕೊಂಡು ತೀವ್ರ ವಿಚಾರಣೆ ಮಾಡಿತ್ತು.

ಸಿಐಡಿಯವರು ಎಲ್ಲಾ ವಿಚಾರಣೆ ಪೂರ್ಣಗೊಂಡಿದೆ ಎಂದು ಕೋರ್ಟ್ ಹೇಳಿದ ಕಾರಣ ಎಲ್ಲಾ ಐದು ಆರೋಪಿಗಳನ್ನ ಬೀದರ್ ಜೆಎಂಎಫ್​ಸಿ ಕೋರ್ಟ್ ಜಡ್ಜ್ ರಾಮಮೂರ್ತಿ ಎನ್. ಅವರು 14 ದಿನಗಳ ಕಾಲ ನ್ಯಾಯಾಂಗ್ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನೂ ಐದು ಜನರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ರಾಜ ಕಪನೂರ್ ಪರ ವಕೀಲ ಅರುಣಕುಮಾರ ಕಿನ್ನಿ, ಇಂದೆ ನಾವು ಕೋರ್ಟ್​ಗೆ ಬೇಲ್ ಅರ್ಜಿಯನ್ನ ಸಲ್ಲಿಸುತ್ತೇವೆ, ಕೋರ್ಟ್ ಯಾವಾಗ ದಿನಾಂಕ್ ಕೊಡುತ್ತದೆಯೋ ಅವತ್ತು ಬೇಲ್ ಬಗ್ಗೆ ವಾದ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ, ಸಿಬಿಐ ತನಿಖೆಗಾಗಿ ಪ್ರಧಾನಿಯವರಿಗೆ ಪತ್ರ ಬರೆಯುತ್ತೇವೆ: ಸಚಿನ್ ಸಹೋದರಿ

ಕಳೆದ ಡಿ.26ರಂದು ಸಚಿನ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಟೆಂಡ‌ರ್ ನೀಡುವಲ್ಲಿ ದೋಖಾ, ಪರ್ಸೆಂಟೇಜ್ ಅಕ್ರಮ, ಹಣದ ಬೇಡಿಕೆ, ಕೊಲೆ ಬೆದರಿಕೆ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ರಾಜು ಕಪನೂರ್ ಸೇರಿ 8 ಜನರು ಇದಕ್ಕೆ ಕಾರಣ ಎಂದು ಸಚಿನ್ ಡೆತ್‌ ನೋಟ್‌ನಲ್ಲಿ ಬರೆದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ