Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್ ಆತ್ಮಹತ್ಯೆ ಕೇಸ್​: ಇಬ್ಬರಿಗೆ ಜಾಮೀನು, ಐವರಿಗೆ 14 ದಿನ ನ್ಯಾಯಾಂಗ ಬಂಧನ

ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಹಾರಾಷ್ಟ್ರದ ರೌಡಿಶೀಟರ್ ಪ್ರತಾಪ್ ಧೀರ್ ಪಾಟೀಲ್ ಮತ್ತು ಸೊಲ್ಲಾಪುರ ಜಿಲ್ಲಾ ಶಿವಸೇನಾ ಅಧ್ಯಕ್ಷ ಮನೋಜ್ ಸೇಜವಾಲ್‌ಗೆ ಬೀದರ್ JMFC ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಜೊತೆಗೆ ಆರೋಪಿ ರಾಜು ಕಪನೂರ್ ಮತ್ತು ಗ್ಯಾಂಗ್​ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

ಸಚಿನ್ ಆತ್ಮಹತ್ಯೆ ಕೇಸ್​: ಇಬ್ಬರಿಗೆ ಜಾಮೀನು, ಐವರಿಗೆ 14 ದಿನ ನ್ಯಾಯಾಂಗ ಬಂಧನ
ಸಚಿನ್ ಆತ್ಮಹತ್ಯೆ ಕೇಸ್​: ಇಬ್ಬರಿಗೆ ಜಾಮೀನು, ಐವರಿಗೆ 14 ದಿನ ನ್ಯಾಯಾಂಗ ಬಂಧನ
Follow us
ಸುರೇಶ ನಾಯಕ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 18, 2025 | 7:32 PM

ಬೀದರ್​, ಜನವರಿ 18: ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ ಪಾಂಚಾಳ್ (Sachin Panchal) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಮಹಾರಾಷ್ಟ್ರದ ರೌಡಿಶೀಟರ್ ಪ್ರತಾಪ್ ಧೀರ್ ಪಾಟೀಲ್ ಮತ್ತು ಸೊಲ್ಲಾಪುರ ಜಿಲ್ಲಾ ಶಿವಸೇನೆ ಅಧ್ಯಕ್ಷ ಮನೋಜ್ ಸೇಜವಾಲ್​​ಗೆ ಜೆಎಂಎಫ್​ಸಿ ಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ಆರೋಪಿ ರಾಜು ಕಪನೂರ್ & ಗ್ಯಾಂಗ್​ಗೆ 14 ದಿನ ನ್ಯಾಯಾಂಗ ಬಂಧನ

ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದ್ದ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಕ್ಲೈಮಾಕ್ಸ್ ಹಂತಕ್ಕೆ ತಲುಪಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ ಪಾಲಿಕೆ ಮಾಜಿ ಸದಸ್ಯ ರಾಜು ಕಪನೂರ್ ಸೇರಿ ಐವರು ಬೀದರ್​ನ ಜೈಲು ಸೇರಿದ್ದಾರೆ.

ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್​: ಪ್ರಿಯಾಂಕ್​ ಖರ್ಗೆ ಆಪ್ತ 5 ದಿನ ಸಿಐಡಿ ಕಸ್ಟಡಿಗೆ

ಪ್ರಕರಣದ ಪ್ರಮುಖ ಆರೋಪಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂ‌ರ್ ಅವರಲ್ಲದೆ ಕಲಬುರಗಿ ಕಾಂಗ್ರೆಸ್ ಮುಖಂಡ ನಂದಕುಮಾರ ನಾಗಭುಜಂಗೆ, ಕಲಬುರಗಿ ಜಿಪಂ ಮಾಜಿ ಉಪಾಧ್ಯಕ್ಷ ಗೋರಖನಾಥ್ ಸಜ್ಜನ್, ಆರ್.ಕೆ.ಪಾಟೀಲ್ ಹಾಗೂ ಸತೀಶ ರತ್ನಾಕ‌ರ್ ದುಬಲಗುಂಡಿ ಅವರನ್ನು ಸಿಐಡಿ ತಂಡ ಎಂಟು ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದುಕೊಂಡು ತೀವ್ರ ವಿಚಾರಣೆ ಮಾಡಿತ್ತು.

ಸಿಐಡಿಯವರು ಎಲ್ಲಾ ವಿಚಾರಣೆ ಪೂರ್ಣಗೊಂಡಿದೆ ಎಂದು ಕೋರ್ಟ್ ಹೇಳಿದ ಕಾರಣ ಎಲ್ಲಾ ಐದು ಆರೋಪಿಗಳನ್ನ ಬೀದರ್ ಜೆಎಂಎಫ್​ಸಿ ಕೋರ್ಟ್ ಜಡ್ಜ್ ರಾಮಮೂರ್ತಿ ಎನ್. ಅವರು 14 ದಿನಗಳ ಕಾಲ ನ್ಯಾಯಾಂಗ್ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನೂ ಐದು ಜನರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ರಾಜ ಕಪನೂರ್ ಪರ ವಕೀಲ ಅರುಣಕುಮಾರ ಕಿನ್ನಿ, ಇಂದೆ ನಾವು ಕೋರ್ಟ್​ಗೆ ಬೇಲ್ ಅರ್ಜಿಯನ್ನ ಸಲ್ಲಿಸುತ್ತೇವೆ, ಕೋರ್ಟ್ ಯಾವಾಗ ದಿನಾಂಕ್ ಕೊಡುತ್ತದೆಯೋ ಅವತ್ತು ಬೇಲ್ ಬಗ್ಗೆ ವಾದ ಮಾಡುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ, ಸಿಬಿಐ ತನಿಖೆಗಾಗಿ ಪ್ರಧಾನಿಯವರಿಗೆ ಪತ್ರ ಬರೆಯುತ್ತೇವೆ: ಸಚಿನ್ ಸಹೋದರಿ

ಕಳೆದ ಡಿ.26ರಂದು ಸಚಿನ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಟೆಂಡ‌ರ್ ನೀಡುವಲ್ಲಿ ದೋಖಾ, ಪರ್ಸೆಂಟೇಜ್ ಅಕ್ರಮ, ಹಣದ ಬೇಡಿಕೆ, ಕೊಲೆ ಬೆದರಿಕೆ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ರಾಜು ಕಪನೂರ್ ಸೇರಿ 8 ಜನರು ಇದಕ್ಕೆ ಕಾರಣ ಎಂದು ಸಚಿನ್ ಡೆತ್‌ ನೋಟ್‌ನಲ್ಲಿ ಬರೆದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ